ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಹೆಚ್ ಡಿಕೆ ಆಗ್ರಹ

ರಮೇಶ್ ಜಾರಕಿಹೊಳಿ ಜತೆ ಚರ್ಚೆ ಕೇವಲ ಊಹಾಪೋಹ ಅಷ್ಟೇ ...

Team Udayavani, Oct 15, 2022, 3:34 PM IST

HDK

ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸ್ಥಳೀಯ ಭಾಷೆಗಳನ್ನು ಉದ್ಧಾರ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಹಿಂದಿಯನ್ನು ಹೇರಿಕೆ ಮಾಡಲು ಹೊರಟಿದ್ದಾರೆ. ಇದು ಸರಿಯಲ್ಲ, ನಾವು ಒಪ್ಪುವುದಿಲ್ಲ ಎಂದರು.

ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು, ಗೃಹ ಸಚಿವರಿಗೆ ತಿಳಿವಳಿಕೆ ಮೂಡಿಸಬೇಕು. ಪದೇಪದೆ ಭಾಷೆಗಳ ವಿಷಯವನ್ನೇ ಕೆದಕುತ್ತಾ ಕೂರುವುದು ಸರಿಯಲ್ಲ. ಇದನ್ನೇ ಹೀಗೆಯೇ ಕೆದಕುತ್ತಾ ಹೋದರೆ ದೇಶದ ಸಮಗ್ರತೆ, ಏಕತೆಗೆ ಧಕ್ಕೆ ಆಗುತ್ತದೆ. ಈ ಬಗ್ಗೆ ಗೃಹ ಸಚಿವರ ನೇತೃತ್ವದ ಸಮಿತಿ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ಈಗಾಗಲೇ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ಪ್ರತಿಭಟನೆ ಮಾಡಿದ್ದಾರೆ. ಪಶ್ಚಿಮ ಬಂಗಾಳ, ಕೇರಳದಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಒಂದು ರಾಷ್ಟ್ರ – ಒಂದು ಭಾಷೆ ಎನ್ನುವ ನೀತಿಯನ್ನು ತಂದು ಬಿಜೆಪಿ ನಾಯಕರು ಇತರೆ ಭಾಷೆಗಳನ್ನು ಹತ್ತಿಕ್ಕಲು ಹೊರಟಿದ್ದಾರೆ. ಆದರೆ, ಇತರೆ ಭಾಷೆಗಳನ್ನು ನಾಶ ಮಾಡಿ ಒಂದು ರಾಷ್ಟ್ರ ಕಟ್ಟೋಕೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕೇಂದ್ರದ ಧೋರಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಹಿಂದಿ ಹೇರಿಕೆ ಮಾಡುವುದಕ್ಕಿಂತ ಬೇರೆ ಸಮಸ್ಯೆಗಳ ಕಡೆ ಕೇಂದ್ರ ಸರಕಾರ ಗಮನ ಹರಿಸುವುದು ಉತ್ತಮ. 120 ದೇಶಗಳಲ್ಲಿ ಬಡತನದಲ್ಲಿ ಮಿತಿ ಮೀರುತ್ತಿದೆ, ಹಸಿವಿನ ಸೂಚ್ಯಂಕದಲ್ಲಿ ನಮ್ಮ ದೇಶ 104ನೇ ಸ್ಥಾನದಲ್ಲಿದೆ. ಮೊದಲು ದೇಶದಲ್ಲಿ ಇರುವ ಇಂಥ ಸಮಸ್ಯೆಗಳನ್ನೂ ಬಗೆಹರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಾಷೆ ವಿಷಯದಲ್ಲಿ ಸಮಸ್ಯೆ ಆದರೆ ನಮ್ಮಲ್ಲಿರುವ ಕನ್ನಡ ಸಂಘ ಸಂಸ್ಥೆ ಜತೆ ಸೇರಿ ನಮ್ಮ ಪ್ರತಿಭಟನೆ ಮಾಡಬೇಕಾಗುತ್ತದೆ. ಕನ್ನಡಕ್ಕೆ ಧಕ್ಕೆ ಬಂದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ರಾಷ್ಟ್ರ ಕ್ಕೆ ಮಾರಕ. ಇವೆರಡೂ ಒಂದೇ ನಾಣ್ಯದ ಎರಡು ಮುಖ. ಒಂದೆಡೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ, ಮತ್ತೊಂದೆಡೆ ಜನ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಈಗ ಭಾಷೆ ಇಟ್ಟುಕೊಂಡು ದಬ್ಬಾಳಿಕೆ ಪ್ರಾರಂಭ ಮಾಡಿವೆ. ದಕ್ಷಿಣ ಭಾರತದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಜನ ಬಾಗಿಲು ಹಾಕಿದ್ದಾರೆ. ಕರ್ನಾಟಕದಲ್ಲೂ ಆ ದಿನ ಬರುವುದು ಬಹಳ ದೂರ ಇಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ದೇವೇಗೌಡರು ಕೊಟ್ಟ ಕೊಡುಗೆ ಬಗ್ಗೆ ಹೇಳಲಿ

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ ಅವರು, ಸಮ್ಮಿಶ್ರ ಸರ್ಕಾರದಲ್ಲಿ ನಾವು ನ್ಯಾ. ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿದೆವು ಎಂದು ಕಾಂಗ್ರೆಸ್ ನಾಯಕರು ಈಗ ಹೇಳುತ್ತಾರೆ. ಬಿಜೆಪಿಯವರು ನಾವು ವರದಿಯನ್ನು ಜಾರಿ ಮಾಡಿದ್ದೇವೆ ಎನ್ನುತ್ತಿದ್ದಾರೆ. ಇನ್ನು ಸಚಿವ ಶ್ರೀರಾಮುಲು ಬೇರೆ ಎದೆ ಬಡಿದುಕೊಂಡು ಮಾತನಾಡುತ್ತಿದ್ದರು. ಒಬ್ಬ ಶಾಸಕರಂತೂ ನಾವು ಬದುಕಿರುವವರೆಗೂ ಬಿಜೆಪಿಗೆ ಗುಲಾಮರಾಗಿ ಇರುತ್ತೇವೆ ಎಂದು ಘೋಷಣೆ ಮಾಡಿದರು. ಇದರಿಂದ ಆ ಸಮಾಜವನ್ನು ಇನ್ನೂ ಗುಲಾಮಗಿರಿಯಲ್ಲೇ ಇಡುವ ಅವರ ಮನಃಸ್ಥಿತಿಯನ್ನು ತೋರಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೆಲ್ಲಾ ದೇವೇಗೌಡರು ಕೊಟ್ಟಿರುವ ಕೊಡುಗೆ. ಇದನ್ನು ನೆನಪಿಸಿಕೊಳ್ಳಬೇಕು ಆ ಸಮುದಾಯ. ಶಾಸಕರಾಗಲು ಮೀಸಲಾತಿ ಕೊಟ್ಟಿದ್ದು ದೇವೇಗೌಡರು ಎಂದು ಹೇಳಿದ ಕುಮಾರಸ್ವಾಮಿ ಅವರು; ನಾಗಮೊಹನ್ ದಾಸ್ ಅವರ ವರದಿ ಯಾವ ವರ್ಷದಲ್ಲಿ ಸರಕಾರಕ್ಕೆ ಸಲ್ಲಿಕೆ ಮಾಡಲಾಯಿತು? ಸಲ್ಲಿಕೆ ಮಾಡಿದ್ದಾಗಿನಿಂದ ಆ ವರದಿಯನ್ನು ಏನು ಮಾಡಿದ್ದರು? ಒಂದೂವರೆ ವರ್ಷ ಯಾಕೆ ವರದಿಯನ್ನು ಜಾರಿ ಕೊಡದೆ ಸ್ಟೊರೇಜ್ ನಲ್ಲಿ ಇಟ್ಟಿದ್ದರು. ಆಗಲೇ ವರದಿ ಕೊಡಬಹುದಿತ್ತಲ್ಲವೇ? ಈಗ ಚುನಾವಣೆ ಹತ್ತಿರದಲ್ಲಿದೆ. ಈಗ ಚುನಾವಣೆಗೆ ಗಿಮಿಕ್ ಮಾಡಿಕೊಂಡು ಹೋಗ್ತಿದ್ದಾರೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹೆಚ್.ವಿಶ್ವನಾಥ್ ಹೇಳಿಕೆ ಗಮನಿಸಿದ್ದೇನೆ. ದೇವೇಗೌಡರ ಕೊಡುಗೆ ಬಗ್ಗೆ, ನಿರಂತರವಾಗಿ ಮೀಸಲು ಸೌಲಭ್ಯ ಪಡೆದವರು ಯಾರು ಎಂಬ ಬಗ್ಗೆ ಅವರು ಹೇಳಿರುವುದು ಸರಿ ಇದೆ. ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಂವಿಧಾನದಲ್ಲಿ ಎಷ್ಟೋ ಜನರಿಗೆ ಮೀಸಲಾತಿ ತಲುಪುತ್ತಿಲ್ಲ. ಅವರಿಗೆ ಮೀಸಲಾತಿ ತಲುಪಬೇಕು. ಮೀಸಲಾತಿಯಿಂದ ಹೊರಗಡೆ ಇರುವವರಿಗೆ ಮೀಸಲಾತಿ ತಲುಪಬೇಕು ಎಂದು ಅಭಿಪ್ರಾಯಪಟ್ಟರು.

ಸ್ಟೀಲ್ ಬ್ರಿಡ್ಜ್ ಗೆ ಬಿಜೆಪಿ ವಿರೋಧ ಮಾಡಿತ್ತು
ಹೆಬ್ಬಾಳ ಸ್ಟೀಲ್ ಬ್ರಿಡ್ಜ್ ಮಾಡುವ ವಿಚಾರದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ಈ ಸ್ಟೀಲ್ ಬ್ರಿಡ್ಜ್ ಮಾರ್ಗದಲ್ಲಿ ಸುರಂಗ ಮಾಡುವ ಬಗ್ಗೆ ನನ್ನ ಸರಕಾರ ನಿರ್ಧಾರ ಮಾಡಿತ್ತು. ಕೊರಿಯಾ ಕಂಪನಿ ಒಂದು ಮುಂದೆ ಬಂದಿತ್ತು. ಆಗ ಬಿಜೆಪಿಯವರು ವಿರೋಧ ಮಾಡಿದ್ದರು. ಈಗ ಅವರೇ ಮಾಡೋಕೆ ಹೊರಟಿದ್ದಾರೆ. ಇದು ಎಂತಹ ವಿಪರ್ಯಾಸ ನೋಡಿ. ಬಿಜೆಪಿ ಬರೀ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪಂಚರತ್ನ ಯಾತ್ರೆ ಸಿದ್ಧತೆ ಪೂರ್ಣ
ಪಂಚರತ್ನ ಕಾರ್ಯಕ್ರಮಕ್ಕೆ ಸಿದ್ದತೆ ಅಂತಿಮವಾಗಿದೆ. ಐದು ವರ್ಷ ಅಧಿಕಾರ ಕೊಟ್ಟರೆ ಈ ಐದು ಕಾರ್ಯಕ್ರಮಗಳನ್ನು ಹೇಗೆ ಕೊಡಬೇಕು ಎಂಬುವುದರ ಬಗ್ಗೆ ತಯಾರಿ ಮಾಡುತ್ತಿದ್ದೇವೆ. ನವಂಬರ್ 1ರಂದು ಯಾತ್ರೆಗೆ ಚಾಲನೆ ಕೊಡಲಾಗುವುದು. ಇದೇ ಅಕ್ಟೋಬರ್ 18 ಹಾಗೂ 19ರಂದು ಶಾಸಕರ ಹಾಗೂ ಸದಸ್ಯರ ಸಭೆ ಕರೆದಿದ್ದೇವೆ. ನವಂಬರ್ 1ರಂದು ವಿಶೇಷವಾಗಿ ಕನ್ನಡ ಬಾವುಟವನ್ನು ಮನೆ ಮನೆಗೆ ಹಾರಿಸುವ ವಿಚಾರ ಚರ್ಚೆ ನಡೆಸಲು ಸಭೆ ಕರೆದಿದ್ದೇನೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಜತೆ ಚರ್ಚೆ ಮಾಡಿಲ್ಲ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ನನ್ನ ಜತೆ ಚರ್ಚೆ ಮಾಡಿದ್ದಾರೆ ಎಂದು ಸುದ್ದಿಗಳು ಹಬ್ಬಿವೆ. ನಾನು ಅವರ ಜತೆ ಚರ್ಚೆ ಮಾಡಿಲ್ಲ. ಇದೆಲ್ಲ ಕೇವಲ ಊಹಾಪೋಹ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಅಮಾನವೀಯ
ಮಳವಳ್ಳಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ ಅವರು, ಇದು ಅತ್ಯಂತ ಹೇಯ ಘಟನೆ. ಆ ಮಗುವಿನ ಸಾವು ನನಗೆ ಬಹಳ ದುಃಖ ಉಂಟು ಮಾಡಿದೆ. ನಮ್ಮ ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಹಾಗೆಯೇ 50 ಸಾವಿರ ಪರಿಹಾರ ಕೂಡ ನೀಡಿದ್ದಾರೆ ಎಂದರು.

ನಾವು ಹೋದ‌ ಮೇಲೆ ಇಬ್ಬರು ಸಚಿವರು ಕಾಟಚಾರಕ್ಕೆ ಹೋಗಿದ್ದಾರೆ. ಕಣ್ಣು ಒರೆಸುವ ತಂತ್ರ ಮಾಡಿದ್ದಾರೆ. ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಅವರು ಹಾಜರಿದ್ದರು.

ಟಾಪ್ ನ್ಯೂಸ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.