![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
27ರಿಂದ ಗೋವಾದಲ್ಲಿ ಹಿಂದೂ ಅಧಿವೇಶನ
Team Udayavani, May 14, 2019, 3:00 AM IST
![Udayavani Kannada Newspaper](https://www.udayavani.com/wp-content/themes/desktop-udayavni/images/place-holder-620.jpg)
ಬೆಂಗಳೂರು: ಹಿಂದೂ ರಾಷ್ಟ್ರ ಸ್ಥಾಪನೆ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮೇ 27 ರಿಂದ ಜೂನ್ 8ರವರೆಗೆ ಗೋವಾದಲ್ಲಿ 8ನೇ “ಅಖಿಲ ಭಾರತೀಯ ಹಿಂದೂ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ.
ಅಧಿವೇಶನದಲ್ಲಿ ಹಿಂದೂ ಸಂಘಟನೆಗಳು ಮತ್ತು ಸಂಪ್ರದಾಯದವರು ರಾಷ್ಟ್ರಹಿತ ಮತ್ತು ಧರ್ಮಹಿತಕ್ಕಾಗಿ ಯೋಗದಾನ ನೀಡುವುದು, ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಸೇರಿ ಇತ್ಯಾದಿ ವಿಚಾರಗಳ ಚರ್ಚೆ, ಮುಂದಿನ ದಿನಗಳಲ್ಲಿ ಪ್ರಾಂತ್ಯವಾರು ನಡೆಯಬೇಕಾದ ಅಧಿವೇಶನಗಳು ಹಾಗೂ ಹಿಂದೂಹಿತ ನಿರ್ಧಾರಗಳಿಗೆ ಸಮ್ಮತಿಸುವ ಚಟುವಟಿಕೆಗಳು ನಡೆಯಲಿವೆ.
ಅಧಿವೇಶನದ ಭಾಗವಾಗಿ ಮೇ 27, 28 ರಂದು ಧರ್ಮಪ್ರೇಮಿ ನ್ಯಾಯವಾದಿಗಳ ಅಧಿವೇಶನ, 28ರಂದು ಉದ್ಯಮಿಗಳ ಅಧಿವೇಶನ ಹಾಗೂ ಮೇ 29 ರಿಂದ ಜೂನ್ 4ರವರೆಗೆ ಅಖಿಲ ಭಾರತ ಹಿಂದೂ ಅಧಿವೇಶನ, ಜೂನ್ 5ರಿಂದ 8ರವರೆಗೆ ಹಿಂದೂ ರಾಷ್ಟ್ರ ಸಂಘಟಕರ ಪ್ರಶಿಕ್ಷಣ ಮತ್ತು ಅಧಿವೇಶನ ನಡೆಯಲಿದೆ.
ಈ ಹಿಂದಿನ ಏಳು ಅಧಿವೇಶನಗಳಲ್ಲಿ ಸಾಕಷ್ಟು ಬೆಂಬಲ, ಪ್ರೋತ್ಸಹ ದೊರಕಿತ್ತಲ್ಲದೇ ದೇಶದ ವಿವಿಧ ರಾಜ್ಯಗಳ ನೂರಾರು ಹಿಂದು ಸಂಘಟನೆಗಳು, ಸಾವಿರಾರು ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಬಾರಿ ಅಧಿವೇಶನದ ವ್ಯಾಪ್ತಿಯು ವಿಸ್ತಾರಗೊಂಡಿದ್ದು, ವಿಶೇಷವಾಗಿ ನೆರೆಯ ರಾಷ್ಟ್ರಗಳಾದ ನೇಪಾಳ, ಶ್ರೀಲಂಕಾ, ಮಲೇಶಿಯಾ, ಬಾಂಗ್ಲಾ ದೇಶಗಳಿಂದಲೂ ಹಿಂದೂ ಸಂಘಟನೆಗಳು, ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.
“ಈ ಹಿಂದಿನ ಅಧಿವೇಶನಗಳು ಸಾಕಷ್ಟು ಉಪಯುಕ್ತವಾಗಿದ್ದು, ಅದರ ಪ್ರೇರಣೆಯಿಂದ 96 ಪ್ರಾಂತೀಯ ಹಿಂದೂ ಅಧಿವೇಶನಗಳು ನಡೆದಿವೆ. ಹಿಂದೂ ರಾಷ್ಟ್ರ ಹಾಗೂ ಧರ್ಮದ ಅಪಮಾನ, ಅವಹೇಳನ ಕೃತ್ಯಗಳ ವಿರುದ್ಧ ವ್ಯಾಪಕ ಜಾಗೃತಿ ಉಂಟಾಗಿದೆ.
ಉದ್ಯಮಿಗಳ ಪರಿಷತ್ತಿನ ಸ್ಥಾಪನೆ ಅದರಡಿ ವಿವಿಧ ಶಿಬಿರಗಳು, ರಾಷ್ಟ್ರೀಯ ಪತ್ರಕರ್ತರ ಪೀಠ, ಆರೋಗ್ಯ ಸಹಾಯ ಸಮಿತಿ ಸ್ಥಾಪನೆ, ಮಧ್ಯಪ್ರದೇಶದಲ್ಲಿ ಭೋಜಶಾಲಾ ಮುಕ್ತಿ ಆಂದೋಲನ, ತಿರುಪತಿ ಪಾವಿತ್ರತೆ ರಕ್ಷಣೆಯ ಆಂದೋಲನದ ರಾಷ್ಟ್ರೀಕರಣ, ಬಾಂಗ್ಲಾ ದೇಶದಲ್ಲಾಗುತ್ತಿರುವ ಗೋ ಕಳ್ಳಸಾಗಣೆಗೆ ವಿರೋಧ, ಉತ್ತರಾಖಂಡ, ನೇಪಾಳದ ನೆರೆಪೀಡಿತ,
ಭೂಕಂಪನ ಪ್ರದೇಶದಲ್ಲಿ ಸಹಾಯ ಕಾರ್ಯಕ್ರಮ, ನಿರಾಶ್ರಿತ ಕಾಶ್ಮೀರಿ ಹಿಂದೂಗಳ ಪುನರ್ವಸತಿಗಾಗಿ “ಏಕ ಭಾರತ ಅಭಿಯಾನ್ – ಕಾಶ್ಮೀರ ಕಿ ಓರ್’ ಸಭೆಗಳು, ಮಹಾನ್ ಹಿಂದು ನಾಯಕರ ತ್ತೈಮಾಸಿಕ ಸಭೆಗಳನ್ನು ಆಯೋಜನೆ ಮಾಡಲಾಗಿದೆ ಎಂದು ಈ ಬಾರಿಯ ಗೋವಾ ಅಧಿವೇಶನ ಆಯೋಜಕ ನಾಗೇಶ ಗಾಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.