ಕೈ ಹಿಡಿಯಲು ನಾಯಕರ ಕಸರತ್ತು
Team Udayavani, Apr 15, 2017, 3:50 AM IST
ಬೆಂಗಳೂರು: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಗೆದ್ದ ಹುಮ್ಮಸ್ಸಿ ನಲ್ಲಿರುವ ಕಾಂಗ್ರೆಸ್ನಲ್ಲಿ ಈಗ ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಚುಕ್ಕಾಣಿ ಹಿಡಿಯುವವರ ನಡುವೆ ಸ್ಪರ್ಧೆ ಶುರುವಾಗಿದೆ.
ಉಪ ಚುನಾವಣೆಯ ಗೆಲುವಿನಿಂದಾಗಿ ಸಿದ್ದರಾಮಯ್ಯ ಅವರಿಗೆ ಕೊಂಚ ಶಕ್ತಿ ಬಂದಿದ್ದು, ತಾನು ಹೇಳಿದವರೇ ಪಕ್ಷದ ಅಧ್ಯಕ್ಷರಾಗಬೇಕು ಎಂದು ಪಟ್ಟು ಹಿಡಿಯಲು ಅವಕಾಶ ಸೃಷ್ಟಿಯಾ ದಂತಾಗಿದೆ. ಆದರೆ, ಎರಡೂ ಉಪ ಚುನಾವಣೆಯ ಗೆಲುವಿನಲ್ಲಿ ತಮ್ಮ ಪಾತ್ರವೂ ಮುಖ್ಯವಾಗಿತ್ತು ಎನ್ನುವುದನ್ನು ಬಿಂಬಿಸಿಕೊಳ್ಳುವ ಪ್ರಯತ್ನವನ್ನೂ ಸಾಕಷ್ಟು ನಾಯಕರು ಮಾಡುತ್ತಿದ್ದಾರೆ. ವಿಶೇಷ ವೆಂದರೆ ಇವರೆಲ್ಲರೂ ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟವರೇ.
ನಂಜನಗೂಡಿನಲ್ಲಿ ಶ್ರೀನಿವಾಸ್ ಪ್ರಸಾದ್ರಂಥ ದಲಿತ ನಾಯಕನನ್ನು ಸೋಲಿಸಲು ತನ್ನ ಪ್ರಯತ್ನ ಮುಖ್ಯವಾಗಿತ್ತು. ರಾಜ್ಯ ಮಟ್ಟದಲ್ಲಿ ಈಗ ತಾನೇ ದಲಿತ ನಾಯಕ ಎಂದು ಪರಮೇಶ್ವರ್ ಬಿಂಬಿಸಿ ಕೊಂಡರೆ, ಇವರಿಬ್ಬರಿಗೂ ಪರ್ಯಾಯವಾಗಿ ಈ ಉಪ ಚುನಾವಣೆಯಲ್ಲಿ ತನ್ನ ಕಾರ್ಯತಂತ್ರವೇ ವಕೌìಟ್ ಆಗಿದೆ ಎಂದು ಬಿಂಬಿಸಿಕೊಳ್ಳಲು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಇದೇ ಲೆಕ್ಕಾಚಾರ ಮುಂದಿಟ್ಟು ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಉಳಿಸಿಕೊಳ್ಳಲು ಹಾಗೂ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಪಟ್ಟ ಒಲಿಸಿ ಕೊಳ್ಳಲು ಹೈಕಮಾಂಡ್ ಬಾಗಿಲು ತಟ್ಟಿದ್ದಾರೆ.
ಸಿದ್ದು ಲೆಕ್ಕಾಚಾರ ಏನು?: ಉಪ ಚುನಾವಣೆ ಫಲಿತಾಂಶ ತಾನು ಅಂದುಕೊಂಡಂತೆ ಬಂದಿದ್ದು, ರಾಜ್ಯದಲ್ಲಿ ತನ್ನ ನಾಯಕತ್ವದಲ್ಲಿಯೇ ಮುಂದಿನ ಚುನಾವಣೆ ನಡೆಯಬೇಕು ಎಂಬುದು ಸಿದ್ದ ರಾಮಯ್ಯ ಅವರ ಬಯಕೆ. ಅಲ್ಲದೇ 2018ರ ಚುನಾವಣೆಗೆ ತಾನು ಬಯಸಿದ ಹಾಗೂ ಮಾತುಕೊಟ್ಟಿರುವ ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬುದು ಅವರ ಉದ್ದೇಶ ಎಂದು ಹೇಳಲಾಗಿದೆ. ಎಸ್.ಆರ್. ಪಾಟೀಲ್ಗೆ ಅಧ್ಯಕ್ಷಗಿರಿ ಕೊಡುವ ಮೂಲಕ ಪ್ರಬಲ ಲಿಂಗಾಯತ ಸಮುದಾಯ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಅದು ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ಹೆಣೆಯಲು ಅನುಕೂಲವಾಗುತ್ತದೆ ಎಂಬ ಲೆಕ್ಕಾಚಾರ ಅವರದು.
ಪರಮೇಶ್ವರ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿದರೆ, ಪಕ್ಷದಲ್ಲಿ ಪರ್ಯಾಯ ಶಕ್ತಿಯಾಗಿ ಬೆಳೆಯುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಂದಿನ ಬಾರಿ ದಲಿತ ಕೋಟಾದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ನಡೆಸಬಹುದು. ಹೀಗಾಗಿ ಈಗಲೇ ಅವರನ್ನು ಅಧ್ಯಕ್ಷಗಿರಿಯಿಂದ ಕೆಳಗಿಸಿ ತನಗೆ ಬೇಕಾದವರನ್ನು ಕೂರಿಸುವ ಯೋಜನೆ ರೂಪಿಸಿದ್ದಾರೆ ಎಂದು ಹೇಳಲಾಗಿದೆ.
ಡಿಸಿಎಂ ಹುದ್ದೆಗೆ ಪಟ್ಟು: ಇನ್ನು ಪರಮೇಶ್ವರ್ ಅವರು ಮಂತ್ರಿಸ್ಥಾನ ಹೋದರೂ ಚಿಂತೆಯಿಲ್ಲ. ಇದೊಂದು ಚುನಾವಣೆ ತನ್ನ ನೇತೃತ್ವದಲ್ಲಿಯೇ ನಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ. ಶ್ರೀನಿವಾಸ ಪ್ರಸಾದ್ ಪಕ್ಷ ತೊರೆದಿರುವುದರಿಂದ ಈ ಸಂದರ್ಭದಲ್ಲಿ ದಲಿತ ನಾಯಕನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಅದು ಸಮುದಾಯಕ್ಕೆ ತಪ್ಪು ಸಂದೇಶ ಹೋಗುತ್ತದೆ ಎಂಬ ವಾದವನ್ನು ಹೈಕಮಾಂಡ್ ಮುಂದೆ ಮಂಡಿಸಲು ತಯಾರಾಗಿದ್ದಾರೆ.
ಈಗಾಗಲೇ ಅಧ್ಯಕ್ಷರಾಗಿ ಆರು ವರ್ಷಗಳು ಕಳೆದಿರುವುದರಿಂದ ಹೈ ಕಮಾಂಡ್ ಕುರ್ಚಿ ಬಿಡಲು ಸೂಚನೆ ನೀಡಿದರೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಮುಂದಿಡಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಡಿಸಿಎಂ ಬೇಡಿಕೆಯ ಲೆಕ್ಕಾಚಾರಕ್ಕೆ ಖರ್ಗೆ ಅವರೂ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.
ಡಿ.ಕೆ. ಶಿವಕುಮಾರ್ ತಂತ್ರ: ಪರಮೇಶ್ವರ್ ಅವರಿಗೆ ಪರ್ಯಾಯ ವಾಗಿ ತಮ್ಮದೇ ಆದ ಲೆಕ್ಕಾಚಾರ ಮತ್ತು ಪ್ರಯತ್ನ ನಡೆಸಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅಧ್ಯಕ್ಷ ಗಾದಿಗೇರಲು ಯಾವ ತ್ಯಾಗಕ್ಕೂ ಸಿದ್ದ ಎನ್ನುವ ಸಂದೇಶ ರವಾನಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಪಕ್ಷ ತೊರೆದಿದ್ದು, ಕಾಂಗ್ರೆಸ್ನಲ್ಲಿ ಒಕ್ಕಲಿಗ ಸಮುದಾಯಕ್ಕೆ ನಾಯಕರಿಲ್ಲ ಎಂಬ ಕೊರಗಿದೆ. ಅದನ್ನು ಸರಿದೂಗಿಸಲು ಅಧ್ಯಕ್ಷ ಸ್ಥಾನ ತನಗೇ ನೀಡಬೇಕೆಂಬ ಲೆಕ್ಕಾಚಾರ ಹಾಕಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಪೈಪೋಟಿ ನೀಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಾಮರ್ಥ್ಯ ತಮಗಿದೆ ಎಂಬುವುದನ್ನು ಹೈ ಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ.
ಆದರೆ, ಇವರ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಬೆಂಬಲ ಸಿಗುತ್ತಿಲ್ಲ ಎನ್ನಲಾಗುತ್ತಿದೆ. ಡಿ.ಕೆ. ಶಿವಕುಮರ್ ಕೈ ಪಕ್ಷದ ಸಾರಥ್ಯ ನೀಡಿದರೆ, ಯಾರ ಕೈಗೂ ಸಿಗದಷ್ಟು ಎತ್ತರಕ್ಕೆ ಬೆಳೆಯುತ್ತಾರೆ. ಅವರನ್ನು ನಿಯಂತ್ರಿಸುವುದು ಕಷ್ಟು ಎಂದು ಪಕ್ಷದ ಹಿರಿಯ ನಾಯಕರೇ ಹೈಕಮಾಂಡ್ ಕಿವಿಯೂದುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಹೊರತಾಗಿಯೂ ಡಿ.ಕೆ. ಶಿವಕುಮಾರ್ ಹೈ ಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವ ಬಳಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?