ಅಯೋಧ್ಯೆ ಭೂಮಿ ಪೂಜೆಗೆ ಶ್ರೀ ಆದಿ ಚುಂಚನಗಿರಿ ಕ್ಷೇತ್ರದ ಮೃತ್ತಿಕೆ ; ಶ್ರೀಗಳಿಗೆ ಆಹ್ವಾನ
Team Udayavani, Jul 26, 2020, 8:20 PM IST
ಬೆಂಗಳೂರು: ಶ್ರೀ ರಾಮಚಂದ್ರನ ಜನ್ಮಸ್ಥಾನ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಬೃಹತ್ ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ ಆಗಸ್ಟ್ 5ರಂದು ನಡೆಯಲಿರುವ ಭೂಮಿ ಪೂಜೆಗೆ ಆದಿಚುಂಚನಗಿರಿ ಪುಣ್ಯ ಕ್ಷೇತ್ರದ ಮೃತ್ತಿಕೆಯನ್ನು ಸ್ವೀಕರಿಸಲಾಯಿತು.
ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಸಂಪನ್ನಗೊಳ್ಳಲಿರುವ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆದಿ ಚುಂಚನಗಿರಿ ಮಠದ ಡಾ. ನಿರ್ಮಲಾನಂದ ಸ್ವಾಮೀಜೀ ಅವರಿಗೆ ಆಹ್ವಾನವನ್ನು ನೀಡಲಾಯಿತು.
ನಿರ್ಮಲಾನಂದ ಸ್ವಾಮೀಜಿ ಅವರು ತಮ್ಮ ಕೈಯಾರೆ ಕ್ಷೇತ್ರದ ಮೃತ್ತಿಕೆಯನ್ನು ಹಾ ಭೂಮಿ ಪೂಜಾ ಕಾರ್ಯಕ್ರಮದ ಆಹ್ವಾನವನ್ನು ಶ್ರೀಗಳು ಸಂತೋಷದಿಂದ ಸ್ವೀಕರಿಸಿದರು ಮತ್ತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮ್ಮತಿಸಿದರು.
ವಿಶ್ವ ಹಿಂದೂ ಪರಿಸಷದ್ ಕರ್ನಾಟಕ ದಕ್ಷಿಣ ಪ್ರಾಂತ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಯುತ ಬಸವರಾಜು, ಬೆಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಬೆಂಗಳೂರು ಉಪ ವಿಭಾಗದ ಅಧ್ಯಕ್ಷರಾದ ಮುನಿರಾಜು ಹಾಗೂ ಬೆಂಗಳೂರು ಉಪ ವಿಭಾಗದ ಕಾರ್ಯದರ್ಶಿಗಳಾದ ನರಸಿಂಹಮೂರ್ತಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.