ಉಮಾಮಹೇಶ್ವರ ಸನ್ನಿಧಿಯಲ್ಲಿ ದೇವೇಗೌಡರ ಕುಟುಂಬದಿಂದ ಹೋಮ
Team Udayavani, May 5, 2019, 3:00 AM IST
ಚಿಕ್ಕಮಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಕೊಪ್ಪ ತಾಲೂಕಿನ ಕಮ್ಮರಡಿ ಸಮೀಪದ ಕುಡೆ°ಲ್ಲಿನ ಉಮಾಮಹೇಶ್ವರ ದೇವಸ್ಥಾನದಲ್ಲಿ ಶನಿವಾರ ಹೋಮ ಕೈಗೊಂಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪತ್ನಿ ಚನ್ನಮ್ಮ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಎಚ್.ಡಿ.ರೇವಣ್ಣ ಹೋಮದಲ್ಲಿ ಪಾಲ್ಗೊಂಡಿದ್ದರು.
ಹೋಮ ನಡೆಸುವ ಹಿನ್ನೆಲೆಯಲ್ಲಿ ಶುಕ್ರವಾರವೇ ಇಲ್ಲಿಗೆ ಆಗಮಿಸಿದ್ದ ದೇವೇಗೌಡರ ಕುಟುಂಬದ ಸದಸ್ಯರು, ತಲವಾನೆ ರಂಗನಾಥ್ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು. ಶನಿವಾರ ಬೆಳಗ್ಗೆ 8 ಗಂಟೆಗೆ ದೇವಾಲಯಕ್ಕೆ ಆಗಮಿಸಿದ ದೇವೇಗೌಡ, ಕುಮಾರಸ್ವಾಮಿ ಹಾಗೂ ರೇವಣ್ಣ ದೇವಾಲಯದಲ್ಲಿ ನಡೆದ ಶತ ರುದ್ರಹೋಮ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.
ಪೂರ್ಣಾಹುತಿಯೊಂದಿಗೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೋಮ ಸಂಪನ್ನಗೊಂಡಿತು. ನಂತರ ಅಲ್ಲಿಯೇ ಪ್ರಸಾದ ಸ್ವೀಕರಿಸಿ, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳಿದರು. ಶುಕ್ರವಾರ ಆರಂಭಗೊಂಡ ಹೋಮದ ಸಂಕಲ್ಪ ಅಮಾವಾಸ್ಯೆ ದಿನ ಪೂರ್ಣಗೊಂಡಿರುವುದು ಕುತೂಹಲ ಮೂಡಿಸಿದೆ.
ಮುಂದುವರಿದ ನಿರ್ಬಂಧ: ಮುಖ್ಯಮಂತ್ರಿಯವರ ಖಾಸಗಿ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನದಿಂದ ಸುಮಾರು 200 ಮೀ.ದೂರದವರೆಗೆ ಶನಿವಾರವೂ ಕೂಡ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ದೇವಸ್ಥಾನದ ಬಳಿ ಪೊಲೀಸರು ನಿಗದಿತ ವ್ಯಕ್ತಿಗಳನ್ನು ಹೊರತುಪಡಿಸಿ ಬೇರೆಯವರನ್ನು ಒಳ ಬಿಡುತ್ತಿರಲಿಲ್ಲ. ಮಾಧ್ಯಮಗಳನ್ನೂ ದೂರ ಇಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ