ಸಿನಿಮಾ ಪೋಷಕ ಕಲಾವಿದರಿಗೆ ಸಬ್ಸಿಡಿ ದರದಲ್ಲಿ ಮನೆ ಹಂಚಿಕೆ: ಡಿಸಿಎಂ ಅಶ್ವಥ್ ನಾರಾಯಣ


Team Udayavani, May 23, 2021, 2:52 PM IST

cinema’

ಬೆಂಗಳೂರು: ಆರ್ಥಿಕವಾಗಿ ಸಂಕಷ್ಟದಲ್ಲಿರುವ ಚಿತ್ರರಂಗದ ಪೋಷಕ ಕಲಾವಿದರಿಗೆ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಗೃಹ ನಿರ್ಮಾಣ ಯೋಜನೆಯಡಿ ಸಬ್ಸಿಡಿ ದರದಲ್ಲಿ ಮನೆ ನೀಡಲಾಗುವುದು ಎಂದು ಕೋವಿಡ್‌ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ಬೆಳಿಗ್ಗೆ ಚಿತ್ರರಂಗದ ಪೋಷಕ ಕಲಾವಿದರಿಗೆ ಭರತ್‌ಗೌಡ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಫುಡ್‌ ಕಿಟ್‌ ವಿತರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ, ಮನೆ ಅಗತ್ಯ ಇರುವ ಕಲಾವಿದರು ಅರ್ಜಿ ಹಾಕಬಹುದು. ತಕ್ಷಣವೇ ಅಂಥ ಕಲಾವಿದರಿಗೆ ಕಡಿಮೆ ದರದಲ್ಲಿ ಮನೆ ಹಂಚಿಕೆ ಮಾಡಲಾಗುವುದು ಎಂದರು.

ಇದನ್ನೂ ಓದಿ:ಕೋವಿಡ್ ಹಿನ್ನೆಲೆ : ಅನಾಥ ಮಕ್ಕಳಿಗೆ ವಿರಕ್ತಮಠದಿಂದ ಉಚಿತ ಶಿಕ್ಷಣ

ಈಚೆಗೆ ಪ್ರಕಟಿಸಲಾದ ಪ್ಯಾಕೇಜ್‌ನಲ್ಲಿ ಕಲಾವಿದರಿಗೆ 3,000 ಕೊಡುವ ಬಗ್ಗೆ ಘೋಷಣೆ ಮಾಡಲಾಗಿದೆ. ಅದರಲ್ಲಿ ಚಿತ್ರರಂಗದ ಪೋಷಕ ಕಲಾವಿದರೂ ಸೇರಿದ್ದಾರಾ ಇಲ್ಲವಾ ಎಂಬ ಬಗ್ಗೆ ಗೊಂದಲವಿದೆ. ಚಿತ್ರರಂಗದ ಕಲಾವಿದರಿಗೂ ಆ ಹಣ ಸಿಗುವ ಬಗ್ಗೆ ಕನ್ನಡ ಮತ್ತು‌‌ ಸಂಸ್ಕೃತ ಇಲಾಖೆ ಕ್ರಮ ವಹಿಸುವ ಬಗ್ಗೆ ಸಂಬಂಧಪಟ್ಟವರ ಜತೆ ಮಾತನಾಡುತ್ತೇನೆ ಎಂದು ಅವರು ಹೇಳಿದರು.

ಪೋಷಕ ಕಲಾವಿದರನ್ನು ಆದ್ಯತೆಯ ಗುಂಪು ಎಂದು ಪರಿಗಣಿಸಿ ಅವರಿಗೂ ವ್ಯಾಕ್ಸಿನೇಷನ್‌ ನೀಡಲಾಗುವುದು. ಈ ಬಗ್ಗೆ ಕಲಾವಿದರ ಪಟ್ಟಿ ನೀಡುವಂತೆ ಕೇಳಲಾಗಿದೆ. ಇದಲ್ಲದೆ, ಈ ಫುಡ್‌ ಕಿಟ್‌ ಪಡೆಯುತ್ತಿರುವ ಎಲ್ಲ ಕಲಾವಿದರಿಗೆ ವೈಯಕ್ತಿಕವಾಗಿ ತಲಾ 1,000 ರೂ. ಚೆಕ್‌ ನೀಡುವುದಾಗಿ ಇದೇ ವೇಳೆ ಡಿಸಿಎಂ ಹೇಳಿದರು.

ಹಿರಿಯ ಕಲಾವಿದರಾದ ಹೊನ್ನವಳ್ಳಿ ಕೃಷ್ಣ. ಮೀಸೆ ಅಂಜನಪ್ಪ, ಉಮೇಶ್ ಹೆಗ್ಡೆ, ಡಿಂಗ್ರಿ ನಾಗರಾಜ್, ಸಿತಾರಾ ಹಾಗೂ ಟ್ರಸ್ಟ್‌ನ ಭರತ್ ಗೌಡ, ನಟರಾದ ಗಣೇಶ್ ರಾವ್ ಕೆಸರ್ಕಾರ್, ಕೆಂಪೇಗೌಡ ಫುಡ್‌ ಕಿಟ್‌ ವ್ಯವಸ್ಥೆ ಮಾಡಿದ್ದರು. ಡಿಸಿಎಂ ಅವರು ಸಾಂಕೇತಿಕವಾಗಿ 30 ಕಲಾವಿದರಿಗೆ ಕಿಟ್‌ ವಿತರಣೆ ಮಾಡಿದ್ದು, ಉಳಿದ 200 ಕಿಟ್‌ಗಳನ್ನು ಕಲಾವಿದರ ಮನೆಗೆ ತಲುಪಿಸಲಾಗುವುದು ಎಂದು ಭರತ್‌ ಗೌಡ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.