“ಮನೆ ಮನೆಗೆ ಕಾಂಗ್ರೆಸ್‌’ ಸಂಘರ್ಷಕ್ಕೆ ದಾರಿ


Team Udayavani, Sep 29, 2017, 7:35 AM IST

sangharsha.jpg

ಬೆಂಗಳೂರು: ಕಾಂಗ್ರೆಸ್‌ ಪಕ್ಷ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕೈಗೊಂಡಿರುವ “ಮನೆ ಮನೆಗೆ ಕಾಂಗ್ರೆಸ್‌’ ಯೋಜನೆಯ ಅನುಷ್ಠಾನದ ವಿಷಯವಾಗಿ ಟಿಕೆಟ್‌ ಆಕಾಂಕ್ಷಿಗಳ ನಡುವೆ ಸಂಘರ್ಷ ಹುಟ್ಟು ಹಾಕಲು ಕಾರಣವಾಗಿದೆ. ಕಾಂಗ್ರೆಸ್‌ ಶಾಸಕರಿಲ್ಲದ ಕ್ಷೇತ್ರಗಳಲ್ಲಿ ಇಬ್ಬರು ಮೂವರು ಆಕಾಂಕ್ಷಿಗಳಿದ್ದು, ತಮಗೇ ಮುಂದಿನ ಚುನಾವಣೆಯಲ್ಲಿ ಟಿಕೆಟ್‌ ಸಿಗಲಿದೆ ಎಂದು ಹೇಳಿಕೊಂಡು ಬೇರೆಯವರು ಮನೆ ಮನೆ ಕಾಂಗ್ರೆಸ್‌ ಯೋಜನೆ ಪ್ರಚಾರ ಕೈಗೊಳ್ಳುವುದಕ್ಕೆ ಅಡ್ಡಿಪಡಿಸುತ್ತಿರುವ ಪ್ರಕರಣಗಳು ನಡೆಯುತ್ತಿರುವುದು ಬೆಳಕಿಗೆ ಬಂದಿವೆ.

ಶಾಸಕರಿಲ್ಲದ ಕ್ಷೇತ್ರಗಳಲ್ಲಿ ಇಂತಹ ಸ್ಥಿತಿಯಿದ್ದರೆ, ಹಾಲಿ ಶಾಸಕರಿರುವ ಕ್ಷೇತ್ರಗಳಲ್ಲಿ ಕೆಲವು ಪ್ರಭಾವಿ ಶಾಸಕರು ಮನೆ ಮನೆಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಆಸಕ್ತಿ ತೊರುತ್ತಿಲ್ಲವೆಂಬ ಮಾತುಗಳು ಕೇಳಿ ಬರುತ್ತಿವೆ. ಜತೆಗೆ, ಹೊಸದಾಗಿ ಜಾರಿಗೆ ತಂದಿರುವ ಬೂತ್‌ ಕಮಿಟಿಗಳ ಮೂಲಕ ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳ ಕಿರುಹೊತ್ತಿಗೆ ವಿತರಿಸುವುದರ ಜತೆಗೆ ಸಮೀಕ್ಷೆಯನ್ನೂ ಕೈಗೊಳ್ಳಬೇಕಿರುವುದು ಕಾರ್ಯಕರ್ತರಿಗೆ ಬಿಸಿ ತುಪ್ಪವಾಗಿ
ಪರಿಣಮಿಸಿದೆ. ಸಾರ್ವಜನಿಕರಿಗೆ ಪ್ರಶ್ನಾವಳಿ ಕೇಳುವ ಕಾರ್ಯಕರ್ತರನ್ನೇ ಸಾರ್ವಜನಿಕರು ತಮಗೆ ದೊರೆಯದಿರುವ ಯೋಜ ನೆಯ ಬಗ್ಗೆ ಮಾಹಿತಿ ಕೇಳುತ್ತಿರುವುದು ಕಾರ್ಯಕರ್ತರಿಗೆ ಇರಿಸು ಮುರಿಸು ಉಂಟು ಮಾಡುತ್ತಿದೆ.
ಈಗಾಗಲೇ ಶೇ.90ರಷ್ಟು ಬೂತ್‌ ಮಟ್ಟದ ಕಾರ್ಯಕರ್ತರನ್ನು ಆಯ್ಕೆ ಮಾಡಲಾಗಿದೆ.

ಆದರೆ, ಸರಿಯಾದ ವಿಳಾಸ ಮತ್ತು ಮೊಬೈಲ್‌ ನಂಬರ್‌ ದೊರೆಯದ ಕಾರಣ ಸುಮಾರು 10 ಸಾವಿರ ಕಾರ್ಯಕರ್ತರ ನೇಮಕ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ,ಕೆಲವು ಕಾರ್ಯಕರ್ತರು ಈ ಯೋಜನೆಯನ್ನು
ಅನುಷ್ಠಾನಗೊಳಿಸಿದರೆ, ಆಗುವ ಅನುಕೂಲ ಏನು ಎಂಬ ಪ್ರಶ್ನೆಯನ್ನೂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳಿಗೆ ಕೇಳಿ ಅವರಿಗೂ ಇರಿಸು ಮುರಿಸು ಉಂಟು ಮಾಡುತ್ತಿದ್ದಾರೆ. ಐದು ವರ್ಷ ಕಾಂಗ್ರೆಸ್‌ ಅಧಿಕಾರದಲ್ಲಿದ್ದರೂ ತಮಗೆ
ಯಾವುದೇ ಅಧಿಕಾರ ದೊರೆಯದಿರುವುದರಿಂದ ಸಾಕಷ್ಟು ಕಾರ್ಯಕರ್ತರು ಭ್ರಮ ನಿರಶನಗೊಂಡಿದ್ದಾರೆ. ಹೀಗಾಗಿ ರಾಜ್ಯ ಪದಾಧಿಕಾರಿಗಳಿಗೆ ಇದನ್ನು ಎದುರಿಸುವುದು ಸಮಸ್ಯೆಯಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವಿಳಂಬ: ಪಕ್ಷ ಅಂದುಕೊಂಡಂತೆ ಅಕ್ಟೋಬರ್‌ 15ರೊಳಗೆ ಯೋಜನೆ ಪೂರ್ಣಗೊಳ್ಳುವುದು ಅನುಮಾನ. ಪ್ರತಿ ವಾರ್ಡ್‌ನಲ್ಲಿ ಸುಮಾರು 150 ರಿಂದ 200 ಮನೆಗಳಿದ್ದು, ಪ್ರತಿ ಮನೆಗೂ ತೆರಳಿ ಸರ್ಕಾರದ ಸಾಧನೆಯ ವಿವರ ಹೇಳುವುದರ ಜತೆಗೆ ಪ್ರತಿ ಕುಟುಂಬದ ಮಾಹಿತಿ ಪಡೆಯಲು ಸುಮಾರು 15 ರಿಂದ 20 ನಿಮಿಷ ಸಮಯ ಹಿಡಿಯುತ್ತದೆ. ಹೀಗಾಗಿ, ಅಕ್ಟೋಬರ್‌ 15ರೊಳಗೆ ಶೇ.50ರಷ್ಟೂ ಮನೆಗಳನ್ನು ತಲುಪುವುದು ಕಷ್ಟ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಲ್ಲದೆ, ಪ್ರತಿ ಬೂತ್‌ಗೂ ಅಗತ್ಯವಿರುವಷ್ಟು ಸಾಧನೆಯ ಕಿರು ಪುಸ್ತಕವನ್ನು ತಲುಪಿಸದೆ ಇರುವುದರಿಂದ ಮತ್ತಷ್ಟು ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.