“ಮನೆ -ಮನೆ’ ಜಗಳ! ಮಕ್ಕಳ ಸಮೀಕ್ಷೆ: ಇಲಾಖೆಗಳ ಅಂತರ್‌ಕಲಹ


Team Udayavani, Dec 26, 2020, 6:35 AM IST

“ಮನೆ -ಮನೆ’ ಜಗಳ! ಮಕ್ಕಳ ಸಮೀಕ್ಷೆ: ಇಲಾಖೆಗಳ ಅಂತರ್‌ಕಲಹ  ಬೆಂಗಳೂರು: ಹಳ್ಳಿಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು “ಮನೆ-ಮನೆ’ ಸಮೀಕ್ಷೆ ನಡೆಸುವ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ನಡುವೆ “ಮನೆ ಜಗಳ’ ನಡೆಯುತ್ತಿದೆ.  ಇಲಾಖೆಗಳ ನಡುವಿನ ಜಗಳಕ್ಕೆ ಕಾರಣ ಸಮೀಕ್ಷೆಗೆ ಅಂಗನ ವಾಡಿ ಕಾರ್ಯಕರ್ತೆಯರನ್ನು ನಿಯೋಜಿ ಸಿರು ವುದು. ಹೈಕೋರ್ಟ್‌ ಆದೇಶ ದಂತೆ ಮನೆ- ಮನೆ ಸಮೀಕ್ಷೆ ನಡೆಸಬೇಕಾಗಿದೆ ಎಂದು ಗ್ರಾಮೀಣಾಭಿ ವೃದ್ಧಿ ಇಲಾಖೆ ಹೇಳಿ ದರೆ, ನಮ್ಮ ಇಲಾಖೆಯ ಅಧೀನದಲ್ಲಿ ಬರುವ ಅಂಗನ ವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷೆಗೆ ನಿಯೋಜಿಸಿರುವುದು ನಮ್ಮ ಗಮನಕ್ಕೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೇಳುತ್ತಿದೆ. ಇದರ ನಡುವೆ ನಮ್ಮದಲ್ಲದ ಕೆಲಸಕ್ಕೆ ನಮ್ಮನ್ನು ಯಾಕೆ ನಿಯೋಜಿಸಿದ್ದೀರಿ ಎಂದು ಕಾರ್ಯಕರ್ತೆಯರು ಪ್ರಶ್ನಿಸತೊಡಗಿದ್ದಾರೆ.  ಇಲಾಖೆಗಳ ನಡುವಿನ ಗೊಂದಲ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕುತ್ತಿರುವುದರ ಪರಿಣಾಮ ಮಕ್ಕಳನ್ನು ಗುರುತಿಸುವ ಸಮೀಕ್ಷೆಗೆ ಗರ ಬಡಿದಂತಾಗಿದೆ. ಡಿ. 15ರಿಂದ ಮನೆ-ಮನೆ ಸಮೀಕ್ಷೆ ಆರಂಭಗೊಂಡು 2021ರ ಜ. 15ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಇನ್ನೂ ಆರಂಭವಾಗಿಲ್ಲ.   ಶಿಕ್ಷಕರ ಕೆಲಸ ನಮ್ಮ ಹೆಗಲಿಗೇಕೆ? ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದು ಶಿಕ್ಷಣ ಇಲಾಖೆ ಜವಾಬ್ದಾರಿ, ಅದನ್ನು ಶಿಕ್ಷಕರು ಮಾಡಬೇಕು. ಈಗಾಗಲೇ ಕೊರೊನಾ ಹಿನ್ನೆಲೆ ಯಲ್ಲಿ ಅನೇಕ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಈಗ ಹೆಚ್ಚುವರಿಯಾಗಿ ಸಮೀಕ್ಷೆ ಕಾರ್ಯ ನೀಡ ಲಾಗಿದೆ. ಇದು ಸರಿಯಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳುತ್ತಿದ್ದಾರೆ.  ನಿರ್ದೇಶನಗಳ ಗೊಂದಲ 2019ರ ಡಿಸೆಂಬರ್‌ನಲ್ಲಿ ಸಮೀಕ್ಷೆ ನಡೆಸುವುದಾಗಿ ಸರಕಾರ ಹೈಕೋರ್ಟ್‌ಗೆ ಭರವಸೆ ಕೊಟ್ಟಿದ್ದರೂ ಕೊರೊನಾದಿಂದಾಗಿ ನನೆಗುದಿಗೆ ಬಿದ್ದಿತ್ತು. 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವುದು ಸ್ಥಳೀಯ ಸಂಸ್ಥೆ (ಗ್ರಾ.ಪಂ)ಗಳ ಜವಾಬ್ದಾರಿ ಎಂದು ಹೇಳಿದ್ದ ಹೈಕೋರ್ಟ್‌, ಸಮೀಕ್ಷೆಗೆ ಶಿಕ್ಷಕರನ್ನು ಬಳಸಬಾರದು ಎಂದು 2019ರ ಡಿ. 18ರ ಆದೇಶದಲ್ಲಿ ಹೇಳಿತ್ತು. ಆದರೆ ಯೋಜಿತ ಕಾರ್ಯಕ್ರಮಗಳಿಗಲ್ಲದೆ ಬೇರೆ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬಾರದು ಎಂದು ನ್ಯಾ| ಎನ್‌.ಕೆ. ಪಾಟೀಲ್‌ ಸಮಿತಿ 2013ರಲ್ಲಿ ಹೇಳಿತ್ತು. ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಇದೇ ನಿಲುವು ಹೊಂದಿವೆ. ಈ ಇಬ್ಬಗೆಯ ಆದೇಶ, ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿವೆ.  ಹೈಕೋರ್ಟ್‌ ಆದೇಶದಂತೆ 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಲಾಗು ತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ದೂರುಗಳು ನಮ್ಮ ಗಮನಕ್ಕೆ ಬಂದಿಲ್ಲ. -ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ  ಇಲಾಖೆ  ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆಗೆ ಗ್ರಾಮೀಣಾಭಿ ವೃದ್ಧಿ ಇಲಾಖೆ ನಿಯೋಜಿಸಿರುವುದು ಗಮನಕ್ಕೆ ಬಂದಿಲ್ಲ.  – ಪೆದ್ದಪ್ಪಯ್ಯ, ಆಯುಕ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ   ಸಮೀಕ್ಷೆಯಿಂದ ನಮ್ಮನ್ನು ಕೈಬಿಡದಿದ್ದರೆ ಕಾನೂನು ಹೋರಾಟದ ಜತೆಗೆ ಬೀದಿ ಹೋರಾಟ ನಡೆಸಲಾಗುವುದು. -ಎಂ. ಜಯಮ್ಮ , ಪ್ರ. ಕಾರ್ಯದರ್ಶಿ,  ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟ   ರಫೀಕ್‌ ಅಹ್ಮದ್‌

ಸಾಂದರ್ಭಿಕ ಚಿತ್ರ

ಬೆಂಗಳೂರು: ಹಳ್ಳಿಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಲು “ಮನೆ-ಮನೆ’ ಸಮೀಕ್ಷೆ ನಡೆಸುವ ವಿಚಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ನಡುವೆ “ಮನೆ ಜಗಳ’ ನಡೆಯುತ್ತಿದೆ.

ಇಲಾಖೆಗಳ ನಡುವಿನ ಜಗಳಕ್ಕೆ ಕಾರಣ ಸಮೀಕ್ಷೆಗೆ ಅಂಗನ ವಾಡಿ ಕಾರ್ಯಕರ್ತೆಯರನ್ನು ನಿಯೋಜಿ ಸಿರು ವುದು. ಹೈಕೋರ್ಟ್‌ ಆದೇಶ ದಂತೆ ಮನೆ- ಮನೆ ಸಮೀಕ್ಷೆ ನಡೆಸಬೇಕಾಗಿದೆ ಎಂದು ಗ್ರಾಮೀಣಾಭಿ ವೃದ್ಧಿ ಇಲಾಖೆ ಹೇಳಿ ದರೆ, ನಮ್ಮ ಇಲಾಖೆಯ ಅಧೀನದಲ್ಲಿ ಬರುವ ಅಂಗನ ವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷೆಗೆ ನಿಯೋಜಿಸಿರುವುದು ನಮ್ಮ ಗಮನಕ್ಕೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹೇಳುತ್ತಿದೆ. ಇದರ ನಡುವೆ ನಮ್ಮದಲ್ಲದ ಕೆಲಸಕ್ಕೆ ನಮ್ಮನ್ನು ಯಾಕೆ ನಿಯೋಜಿಸಿದ್ದೀರಿ ಎಂದು ಕಾರ್ಯಕರ್ತೆಯರು ಪ್ರಶ್ನಿಸತೊಡಗಿದ್ದಾರೆ.

ಇಲಾಖೆಗಳ ನಡುವಿನ ಗೊಂದಲ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕುತ್ತಿರುವುದರ ಪರಿಣಾಮ ಮಕ್ಕಳನ್ನು ಗುರುತಿಸುವ ಸಮೀಕ್ಷೆಗೆ ಗರ ಬಡಿದಂತಾಗಿದೆ. ಡಿ. 15ರಿಂದ ಮನೆ-ಮನೆ ಸಮೀಕ್ಷೆ ಆರಂಭಗೊಂಡು 2021ರ ಜ. 15ಕ್ಕೆ ಪೂರ್ಣಗೊಳ್ಳಬೇಕಿತ್ತು. ಆದರೆ ಇನ್ನೂ ಆರಂಭವಾಗಿಲ್ಲ.

ಶಿಕ್ಷಕರ ಕೆಲಸ ನಮ್ಮ ಹೆಗಲಿಗೇಕೆ?
ಮಕ್ಕಳನ್ನು ಮರಳಿ ಶಾಲೆಗೆ ಕರೆತರುವುದು ಶಿಕ್ಷಣ ಇಲಾಖೆ ಜವಾಬ್ದಾರಿ, ಅದನ್ನು ಶಿಕ್ಷಕರು ಮಾಡಬೇಕು. ಈಗಾಗಲೇ ಕೊರೊನಾ ಹಿನ್ನೆಲೆ ಯಲ್ಲಿ ಅನೇಕ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಲಾಗಿದೆ. ಈಗ ಹೆಚ್ಚುವರಿಯಾಗಿ ಸಮೀಕ್ಷೆ ಕಾರ್ಯ ನೀಡ ಲಾಗಿದೆ. ಇದು ಸರಿಯಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳುತ್ತಿದ್ದಾರೆ.

ನಿರ್ದೇಶನಗಳ ಗೊಂದಲ
2019ರ ಡಿಸೆಂಬರ್‌ನಲ್ಲಿ ಸಮೀಕ್ಷೆ ನಡೆಸುವುದಾಗಿ ಸರಕಾರ ಹೈಕೋರ್ಟ್‌ಗೆ ಭರವಸೆ ಕೊಟ್ಟಿದ್ದರೂ ಕೊರೊನಾದಿಂದಾಗಿ ನನೆಗುದಿಗೆ ಬಿದ್ದಿತ್ತು. 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸುವುದು ಸ್ಥಳೀಯ ಸಂಸ್ಥೆ (ಗ್ರಾ.ಪಂ)ಗಳ ಜವಾಬ್ದಾರಿ ಎಂದು ಹೇಳಿದ್ದ ಹೈಕೋರ್ಟ್‌, ಸಮೀಕ್ಷೆಗೆ ಶಿಕ್ಷಕರನ್ನು ಬಳಸಬಾರದು ಎಂದು 2019ರ ಡಿ. 18ರ ಆದೇಶದಲ್ಲಿ ಹೇಳಿತ್ತು. ಆದರೆ ಯೋಜಿತ ಕಾರ್ಯಕ್ರಮಗಳಿಗಲ್ಲದೆ ಬೇರೆ ಕೆಲಸಗಳಿಗೆ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬಾರದು ಎಂದು ನ್ಯಾ| ಎನ್‌.ಕೆ. ಪಾಟೀಲ್‌ ಸಮಿತಿ 2013ರಲ್ಲಿ ಹೇಳಿತ್ತು. ಕೇಂದ್ರ ಮತ್ತು ರಾಜ್ಯ ಸರಕಾರಗಳೂ ಇದೇ ನಿಲುವು ಹೊಂದಿವೆ. ಈ ಇಬ್ಬಗೆಯ ಆದೇಶ, ನಿಲುವು ಕೂಡ ಗೊಂದಲಕ್ಕೆ ಕಾರಣವಾಗಿವೆ.

ಹೈಕೋರ್ಟ್‌ ಆದೇಶದಂತೆ 0-18 ವರ್ಷದೊಳಗಿನ ಮಕ್ಕಳನ್ನು ಗುರುತಿಸಲು ಮನೆ-ಮನೆ ಸಮೀಕ್ಷೆ ಕಾರ್ಯ ನಡೆಸಲಾಗು ತ್ತಿದೆ. ಅಂಗನವಾಡಿ ಕಾರ್ಯಕರ್ತೆಯರ ದೂರುಗಳು ನಮ್ಮ ಗಮನಕ್ಕೆ ಬಂದಿಲ್ಲ.
-ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ

ಅಂಗನವಾಡಿ ಕಾರ್ಯಕರ್ತೆಯರನ್ನು ಸಮೀಕ್ಷೆಗೆ ಗ್ರಾಮೀಣಾಭಿ ವೃದ್ಧಿ ಇಲಾಖೆ ನಿಯೋಜಿಸಿರುವುದು ಗಮನಕ್ಕೆ ಬಂದಿಲ್ಲ.
– ಪೆದ್ದಪ್ಪಯ್ಯ, ಆಯುಕ್ತರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಸಮೀಕ್ಷೆಯಿಂದ ನಮ್ಮನ್ನು ಕೈಬಿಡದಿದ್ದರೆ ಕಾನೂನು ಹೋರಾಟದ ಜತೆಗೆ ಬೀದಿ ಹೋರಾಟ ನಡೆಸಲಾಗುವುದು.
-ಎಂ. ಜಯಮ್ಮ , ಪ್ರ. ಕಾರ್ಯದರ್ಶಿ,  ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಒಕ್ಕೂಟ

 ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.