ಸೋಂಕು ಹೆಚ್ಚಾದರೆ ಲಾಕ್ ಡೌನ್ ಅನಿವಾರ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ
Team Udayavani, Jan 3, 2022, 12:01 PM IST
ಚಿಕ್ಕಮಗಳೂರು : ಕೋವಿಡ್ ಪ್ರಕರಣಗಳು ಹೆಚ್ಚಾದರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದಲ್ಲಿ ಮಕ್ಕಳ ಲಸಿಕಾಕರಣಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೋವಿಡ್ ನಿಯಂತ್ರಣದಲ್ಲಿ ವಿಷಯದಲ್ಲಿ ಜನರು ಸಹಕಾರ ಕೊಡದಿದ್ದರೆ ಲಾಕ್ ಡೌನ್ ಅನಿವಾರ್ಯ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ ಆಗಿದೆ. ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
ಇದನ್ನೂ ಓದಿ: ಕೊಪ್ಪ: ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ವಿದ್ಯಾರ್ಥಿಗಳು
ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ ವಿಚಾರ ಆದರೆ ಕೋವಿಡ್ ಸಮಯದಲ್ಲಿ ರಾಜಕಾರಣದ ನಡೆಯನ್ನು ಮುಂದೂಡುವುದು ಒಳ್ಳೆಯದು. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವರಿಗೆ ಅವಕಾಶವಿದೆ. ಕಾಂಗ್ರೆಸ್ ನವರು ಅಧಿಕಾರದಲ್ಲಿದ್ದಾಗ ಏನು ಮಾಡಲಿಲ್ಲ. ಈ ಸಮಯದಲ್ಲಿ ರಾಜಕೀಯ ನಡೆ ಬಿಟ್ಟು ಕೋವಿಡ್ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.
ಸಿಎಂ ಬದಲಾವಣೆ, ಸಚಿವರ ಕೈಬಿಡುವ ವಿಚಾರವೆಲ್ಲ ಗಾಳಿ ಸುದ್ದಿ. ಬೊಮ್ಮಾಯಿ ಸರ್ಕಾರದಲ್ಲಿ ಯಾವ ಸಚಿವರನ್ನೂ ಕೈ ಬಿಡುವುದಿಲ್ಲ,ಗೃಹ ಇಲಾಖೆ ತೃಪ್ತಿ ಕೊಟ್ಟಿದೆ, ಚಾಲೆಂಜ್ ಕೂಡ ಆಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು