ಪೊಲೀಸ್ ಠಾಣೆ ಬೇಕೇ?-ಕನಿಷ್ಠ 300 ಕ್ರೈಂ ಆಗಬೇಕು! : ಆರಗ ಜ್ಞಾನೇಂದ್ರ
Team Udayavani, Sep 21, 2022, 6:40 AM IST
ಬೆಂಗಳೂರು: ಯಾವುದೇ ಊರಿಗೆ ಪೊಲೀಸ್ ಠಾಣೆ ಬೇಕು ಎಂದರೆ, ಆ ಊರಿನಲ್ಲಿ ವರ್ಷಕ್ಕೆ ಕನಿಷ್ಠ 300 ಕ್ರೈಂಗಳು ನಡೆದಿರಬೇಕು. ಅಲ್ಲಿನ ಜನಸಂಖ್ಯೆ 50ರಿಂದ 60 ಸಾವಿರ ಇರಬೇಕು.
– ಇದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೌರಿಬಿದನೂರು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಬಗೆ.
ನಿಮ್ಮ ಊರಿನಲ್ಲಿ ಅಷ್ಟೊಂದು ಕ್ರೈಂ ನಡೆದಿಲ್ಲ. ನಿಮಗಿದು ಸಮಾಧಾನದ ಸಂಗತಿ. ಕ್ರೈಂ ಜಾಸ್ತಿ ನಡೆದಿಲ್ಲ ಅಂದರೆ ನಿಮ್ಮ ಊರಲ್ಲಿ ಸಜ್ಜನರು ಇದ್ದಾರೆ ಅಂತ ಅರ್ಥ. ಆಸ್ಪತ್ರೆ ಕೇಳಬಹುದು. ಪೊಲೀಸ್ ಠಾಣೆ ಕೇಳುವುದು ಒಳ್ಳೆಯ ಲಕ್ಷಣ ಅಲ್ಲ ಎಂದವರು ಹೇಳಿದರು. ಇದಕ್ಕೆ ಆಸ್ಪತ್ರೆ ಕೇಳಿದರೆ ಒಳ್ಳೆಯ ಲಕ್ಷಣ ಹೇಗಾಗುತ್ತದೆ ಎಂದು ಸ್ಪೀಕರ್ ಕಾಗೇರಿ ಪ್ರಶ್ನಿಸಿದರು. ಪೊಲೀಸ್ ಠಾಣೆ ಬೇಕಾದರೆ ಊರಿನ ಜನ ದುರ್ಜನರು ಆಗಬೇಕೇ ಎಂದು ಸಿ.ಟಿ. ರವಿ ಛೇಡಿಸಿದರು.
10 ಸಾವಿರ ವಸತಿಗೃಹ ನಿರ್ಮಾಣ :
ರಾಜ್ಯದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ 5,519 ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೇವಲ 2,302 ವಸತಿಗೃಹಗಳು ಲಭ್ಯ ಇದ್ದಾವೆ. 2,740 ಕೋಟಿ ರೂ. ವೆಚ್ಚದಲ್ಲಿ ಪೊಲೀಸ್ ಗೃಹ-2025 ಯೋಜನೆ ಪ್ರಾರಂಭಿಸಲಾಗಿದ್ದು, ಅಗ್ನಿಶಾಮಕ ಮತ್ತು ಕಾರಾಗೃಹ ಇಲಾಖೆಗಳನ್ನೊಳಗೊಂಡಂತೆ ಒಟ್ಟು 10,032 ವಸತಿಗೃಹಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಈ ವಸತಿಗೃಹಗಳನ್ನು ಆಧರಿಸಿ ವಸತಿಗೃಹ ಲಭ್ಯವಿರದ ಸ್ಥಳಗಳಲ್ಲಿ ಅಗ್ನಿಶಾಮಕ ಇಲಾಖೆಯ ಸಿಬಂದಿಗೆ ನಿರ್ಮಿಸಿ ಒದಗಿಸಲು ಉದ್ದೇಶಿಸಲಾಗಿದೆ ಎಂದು ಬಿಜೆಪಿ ಶಾಸಕ ಐಹೊಳೆ ಡಿ. ಮಹಾಲಿಂಗಪ್ಪ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ