ಮೇಕೆದಾಟು ಯೋಜನೆ ವಿವಾದದ ಬಗ್ಗೆ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ: ಬೊಮ್ಮಾಯಿ
Team Udayavani, May 27, 2021, 5:32 PM IST
ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಸಮೀತಿ ರಚನೆ ಮಾಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶವನ್ನು ಪ್ರಶ್ನಿಸುವ ಮೂಲಕ ಕಾನೂನು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಗುರುವಾರ ಈ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕಾನೂನು ತಜ್ಞರ ಸಭೆ ನಡೆಯಿತು.
ಇದನ್ನೂ ಓದಿ:ರಾಜೀನಾಮೆ ನಂತರ ಮಾಲಿ ಅಧ್ಯಕ್ಷ, ಪ್ರಧಾನಿಯನ್ನು ಬಿಡುಗಡೆಗೊಳಿಸಿದ ಮಿಲಿಟರಿ
ಆ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಭಾಗವಹಿಸಿದ್ದರು.
ಮೇಕೆದಾಟು ಯೋಜನೆ ಪ್ರದೇಶ ವ್ಯಾಪ್ತಿಯ ಕಚ್ಚಾ ರಸ್ತೆಯ ಕುರಿತಂತೆ ತಮಿಳುನಾಡಿನ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದೆ. ಅದನ್ನು ಮುಂದಿಟ್ಟುಕೊಂಡು ರಾಷ್ಟ್ರೀಯ ಹಸಿರು ಪೀಠ ಸಮಿತಿಯೊಂದನ್ನು ರಚನೆ ಮಾಡಿದೆ. ಅದು ಸಮಂಜಸವಾದ ಕ್ರಮ ಅಲ್ಲ. ಹೀಗಾಗಿ ಈ ಆದೇಶವನ್ನು ಹಸಿರು ಪೀಠದ ಮುಂದೆಯೇ ಪ್ರಶ್ನಿಸಲು ನಾವು ನಿರ್ಧರಿಸಿದ್ದೇವೆ. ರಾಷ್ಟ್ರೀಯ ಹಸಿರು ಪೀಠ ತನ್ನ ಈ ಆದೇಶವನ್ನು ಮರು ಪರಿಶೀಲಿಸಬೇಕೆಂದು ಮನವಿ ಮಾಡಿಕೊಳ್ಳಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ