ಡಿಜಿಪಿಗೆ ಪಾಟೀಲ್ ತರಾಟೆ
Team Udayavani, Jan 26, 2019, 1:57 AM IST
ಬೆಂಗಳೂರು: ಪೊಲೀಸ್ ಅಧಿಕಾರಿಗಳ ವರ್ಗಾವಣೆ, ಮುಂಬಡ್ತಿ ಸೇರಿದಂತೆ ಇಲಾಖೆಯ
ವಿಚಾರಗಳಲ್ಲಿ ತಮ್ಮ ಮಾತು ನಡೆಯದ ಬಗ್ಗೆ ಗೃಹ ಸಚಿವ ಎಂ.ಬಿ.ಪಾಟೀಲ್ ಬೇಸರಗೊಂಡಿದ್ದಾರೆ.
ಗುರುವಾರ ನಾಲ್ವರು ಎಸ್ಪಿ ಹಂತದ ಅಧಿಕಾರಿಗಳಿಗೆ ಡಿಐಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮೈಸೂರಿಗೆ ನಿಯೋಜಿಸಲಾಗಿದ್ದು, ಈ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತಂದಿರಲಿಲ್ಲ. ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ಆದೇಶ ಹೊರಡಿಸಲಾಗಿದೆ.
ಆ ಪೈಕಿ ಕೆ.ಟಿ.ಬಾಲಕೃಷ್ಣ ಅವರನ್ನು ಮೈಸೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, ಸಿದ್ದರಾಮಯ್ಯ ಅವರು ಕೋಪಗೊಂಡಿದ್ದಾರೆ. ಅದೇ ರೀತಿ ಸಿದ್ದರಾಮಯ್ಯ ಅವರ ಪುತ್ರನ ವಿರುದ್ಧ ಪ್ರಕರಣ ದಾಖಲಿಸಿದ್ದ ಎಸಿಪಿ ಮೋಹನ್ ಎಂಬುವರನ್ನು ಕಾರವಾರದಿಂದ ಮತ್ತೆ ಮೈಸೂರಿಗೆ ಇತ್ತೀಚೆಗೆ ವರ್ಗಾವಣೆ ಮಾಡಲಾಗಿತ್ತು. ಈ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು, ರಾಜ್ಯ ಪೊಲೀಸ್
ಮಹಾನಿರ್ದೇಶಕಿ ನೀಲಮಣಿ ರಾಜು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
“ನಾನು ಗೃಹ ಸಚಿವನಾದ ನಂತರ ಪ್ರಮುಖ ವಿಷಯಗಳನ್ನು ನನ್ನ ಗಮನಕ್ಕೆ ತರುತ್ತಿಲ್ಲ. ಹಲವು ತೀರ್ಮಾನಗಳು ನನಗೆ ಗೊತ್ತಿಲ್ಲದೆ ಆಗಿವೆ. ಹೀಗಾದರೆ, ನಾನು ಗೃಹಸಚಿವನಾಗಿ ಯಾಕೆ ಇರಬೇಕು?’ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
ನೀಲಮಣಿ ರಾಜು ಅವರು, ಮುಖ್ಯಮಂತ್ರಿಯವರ ಸೂಚನೆ ಇದ್ದ ಬಗ್ಗೆ ಸಮಾಜಾಯಿಷಿ ನೀಡಿದರು. ಆದರೂ ಗೃಹ ಸಚಿವನಾದ ನನ್ನ ಗಮನಕ್ಕೆ ಬರದಿದ್ದರೆ ಹೇಗೆ? ಎಂದು ಆಕ್ರೋಶ ಹೊರಹಾಕಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ