ಪಿಎಸ್ಐ ನೇಮಕಾತಿ ಅಕ್ರಮ: ಗೃಹ ಸಚಿವರು ಉತ್ತರಿಸಲಿ: ದಿನೇಶ್ ಗುಂಡೂರಾವ್ ಆಗ್ರಹ
Team Udayavani, Apr 20, 2022, 9:30 PM IST
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಗೃಹ ಸಚಿವರು ರಾಜ್ಯದ ಜನತೆಗೆ ಉತ್ತರಿಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
545 ಪಿಎಸ್ಐ ನೇಮಕಾತಿ ಹಗರಣದ ಕಿಂಗ್ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ ಬಿಜೆಪಿಯವರಿಗೆ ಕೆಲ ಪ್ರಶ್ನೆಗಳು ಎಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ನಿಯೋಜನೆಗೆ ಒತ್ತಡ ಹೇರಿದವರ ವಿರುದ್ಧ ಶಿಸ್ತುಕ್ರಮ: ಪ್ರಭು ಚವ್ಹಾಣ್ ಎಚ್ಚರಿಕೆ
ದಿವ್ಯಾ ಹಾಗರಗಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆ ಮತ್ತು ಮುಖಂಡೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜತೆ ಇಡೀ ಸರಕಾರವೇ ಶಾಮೀಲಾಗಿ ದಂಧೆ ನಡೆಸಿದೆ. ಈಗ ದಿವ್ಯಾ ಹಾಗರಗಿಗೂ ನಮಗೂ ಸಂಬಂಧವಿಲ್ಲ ಎಂದು ಬಿಜೆಪಿಯವರು ಹೇಳಿಕೊಂಡರೆ ಯಾರದರೂ ನಂಬಲು ಸಾಧ್ಯವೇ ಎಂದವರು ಪ್ರಶ್ನಿಸಿದ್ದು, ಇನ್ನೂ ಹಲವಾರು ಪ್ರಶ್ನೆಗಳನ್ನು ಸರಕಾರ, ಗೃಹಸಚಿವರಿಗೆ ಟ್ವೀಟ್ ಮೂಲಕ ಅವರು ಕೇಳಿದ್ದಾರೆ.