ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಒಮಿಕ್ರಾನ್‌ನಿಂದ ಅಪಾಯ ಕಡಿಮೆ

Team Udayavani, Jan 17, 2022, 7:10 AM IST

ಮನೆಯಲ್ಲೇ ಮದ್ದು; ಆಸ್ಪತ್ರೆ ದಾಖಲಾತಿ ಇಳಿಕೆ; ಕೋವಿಡ್‌ದಿಂದ ಚೇತರಿಕೆ  ಅಧಿಕ 

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಮಧ್ಯೆ ಆಸ್ಪತ್ರೆ ಸೇರುವವರ ಸಂಖ್ಯೆ ಕಡಿಮೆ ಇದ್ದು, ಈಗಿನ ರೂಪಾಂತರಿ ಅಷ್ಟೇನೂ ಅಪಾಯಕಾರಿಯಲ್ಲ ಎಂಬ ಸಮಾಧಾನಕರ ಅಂಶ ಬಹಿರಂಗವಾಗಿದೆ. ಅಷ್ಟೇ ಅಲ್ಲ, ಹೆಚ್ಚು ಕಡಿಮೆ 3ರಿಂದ 5 ದಿನಗಳಲ್ಲಿ ಸೋಂಕಿನ ಲಕ್ಷಣಗಳು ವಾಸಿಯಾಗುತ್ತಿದ್ದು, ಚೇತರಿಕೆ ಹೆಚ್ಚಾಗಿದೆ.

ಸದ್ಯ ಚಳಿಗಾಲ ಇರುವುದರಿಂದ ಮಕ್ಕಳ ಸಹಿತ ಬಹುತೇಕರು ಶೀತ, ಕೆಮ್ಮು, ಜ್ವರ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದು ಕೊರೊನಾವೋ ಅಥವಾ ಸಾಮಾನ್ಯ ಶೀತ ಜ್ವರವೋ ಎಂಬ ಗೊಂದಲ ಇದೆ. ಈ

ಅಂಶಗಳನ್ನು ಮನಗಂಡು ಸರಕಾರವು ಶನಿವಾರಮುಂದಿನ ಎರಡು ವಾರ ಸಣ್ಣಪುಟ್ಟ ಅನಾರೋಗ್ಯಕ್ಕೆ ಆಸ್ಪತ್ರೆಗೆ ಬರಬೇಡಿ ಎಂದು ಸೂಚನೆ ನೀಡಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಒಮಿಕ್ರಾನ್‌ ಸೋಂಕು ಅಷ್ಟೇನೂ ಅಪಾಯಕಾರಿಯಲ್ಲ, ಮನೆ ಮದ್ದಿನಿಂದ ವಾಸಿ ಮಾಡಿ ಕೊಳ್ಳಬಹುದು ಎಂದು ತಜ್ಞ ವೈದ್ಯರು ಹೇಳಿದ್ದಾರೆ. ಆದರೆ ಹತ್ತಿರದ ವೈದ್ಯರನ್ನು ಸಂಪರ್ಕಿಸಿ, ಸಲಹೆ ಪಡೆಯಿರಿ; ಈ ವಿಚಾರದಲ್ಲಿ ಉದಾಸೀನ ಬೇಡ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಹೆಚ್ಚುತ್ತಿದೆ ಚೇತರಿಕೆ
3ನೇ ಅಲೆಯಲ್ಲಿ ಸೋಂಕುಪೀಡಿತರು 7 ದಿನ ಮಾತ್ರ ಚಿಕಿತ್ಸೆ /ಐಸೋಲೇಶನ್‌ನಲ್ಲಿದ್ದರೆ ಸಾಕು ಎಂದು ಸೂಚಿಸಲಾಗಿದೆ. ಜನವರಿ ಮೊದಲ ವಾರದಲ್ಲಿ ಒಮಿಕ್ರಾನ್‌ ಹೆಚ್ಚಾಗಿದ್ದು, ಅನಂತರ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಚೇತರಿಕೆ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇದನ್ನೂ ಓದಿ:ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ 20% ಸಮೀಪಕ್ಕೆ : ಇಂದು 13 ಸಾವು

ವೀಡಿಯೋ ಸಮಾಲೋಚನೆ ಅಗತ್ಯ
ಎಲ್ಲ ಕೋವಿಡ್‌ ಸೋಂಕುಪೀಡಿತರು ಮತ್ತು ಇತರ ರೋಗಿಗಳು ಆಸ್ಪತ್ರೆಗೆ ಬರಬೇಕಾಗಿಲ್ಲ. ಆದರೆ ಮೂತ್ರಪಿಂಡ ಮತ್ತು ಯಕೃತ್‌ ವೈಫ‌ಲ್ಯ, ಕ್ಯಾನ್ಸರ್‌, ಮಧುಮೇಹ ಮತ್ತಿತರ ಕಾಯಿಲೆ ಇರುವವರು ತಮ್ಮಷ್ಟಕ್ಕೆ ತಾವೇ ನಿರ್ಧರಿಸುವುದು ತಪ್ಪು. ಮನೆಯಿಂದಲೇ ತಮ್ಮ ವೈದ್ಯರೊಂದಿಗೆ ನಿಯಮಿತವಾಗಿ ವೀಡಿಯೋ ಸಮಾಲೋಚನೆ ನಡೆಸಬೇಕು. ಅವರು ನೀಡುವ ಸಲಹೆಗಳನ್ನು ಸರಿಯಾಗಿ ಪಾಲಿಸಬೇಕು. ಒಂದು ವೇಳೆ ಕೊರೊನಾ ಸೋಂಕುಪೀಡಿತರಾಗಿದ್ದರೆ ಸರಕಾರದ  ನಿಯಮಗಳನ್ನು ಅನುಸರಿಸಬೇಕು.
-ಡಾ| ಸುದರ್ಶನ್‌ ಬಲ್ಲಾಳ್‌, ಮಣಿಪಾಲ್‌ ಆಸ್ಪತ್ರೆ ಸಮೂಹ ಸಂಸ್ಥೆಗಳ ಮುಖ್ಯಸ್ಥರು.

ಮನೆಮದ್ದು ಅತ್ಯುತ್ತಮ ಆಯ್ಕೆ
ಪ್ರಕರಣಗಳು ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾಗುತ್ತಿರುವುದರಿಂದ ಜನರಲ್ಲಿ ಭೀತಿ ಸಹಜ. ಶುಂಠಿ, ಕಾಳುಮೆಣಸು, ಜೀರಿಗೆ, ತುಳಸಿ, ಅರಿಶಿನ ಮತ್ತಿತರ ಸಂಬಾರ ಪದಾರ್ಥಗಳಲ್ಲಿ ವೈರಾಣು ನಾಶಕ ಗುಣಗಳಿವೆ. ನಿಯಮಿತವಾಗಿ ಇವುಗಳ ಕಷಾಯ ಸೇವಿಸ ಬೇಕು. ಇದಲ್ಲದೆ ಅರ್ಧ ಚಮಚ ಈರುಳ್ಳಿ ರಸ ವನ್ನು ಜೇನುತುಪ್ಪ ಬೆರೆಸಿ ಸೇವಿಸಬಹುದು. ಇದರೊಂದಿಗೆ ಪ್ರಾಣಾಯಾಮ, ನಡಿಗೆ ಹೆಚ್ಚಿಸಿ. ಇದು ಕೋವಿಡ್‌ ಮತ್ತು ಕೋವಿಡ್‌ ಅಲ್ಲದ ಎರಡೂ ವರ್ಗದ ರೋಗಿಗಳಿಗೆ ಅನ್ವಯ.
– ಡಾ| ಗಿರಿಧರ್‌ ಕಜೆ, ಮುಖ್ಯಸ್ಥರು, ಪ್ರಶಾಂತಿ ಆಯುರ್ವೇದಿಕ್‌ ಸೆಂಟರ್‌.

ಪ್ರಾಣಾಯಾಮ, ಯೋಗದಿಂದ ನಿಯಂತ್ರಣ
ನಿತ್ಯ ಬೆಳಗ್ಗೆ ಮತ್ತು ಸಂಜೆ ತಲಾ 20 ನಿಮಿಷ ಪ್ರಾಣಾಯಾಮ, ಅರ್ಧ ತಾಸು ಯೋಗಾಭ್ಯಾಸ ಮಾಡಬೇಕು. ಇದು ದೈಹಿಕ ಸಾಮರ್ಥ್ಯ ವೃದ್ಧಿಸುತ್ತದೆ. ಓಂಕಾರ ಧ್ಯಾನವು ಮಾನಸಿಕ ಸಾಮರ್ಥ್ಯ ಹೆಚ್ಚಿಸುತ್ತದೆ. ಸಿರಿಧಾನ್ಯಗಳನ್ನು ಸಾಧ್ಯವಾದಷ್ಟು ಹೆಚ್ಚು ಸೇವಿಸಬೇಕು. ಬಿಸಿ ಹಬೆಯನ್ನು ನಿಯಮಿತವಾಗಿ ಪಡೆಯಬೇಕು. ಇದರ ಜತೆಗೆ ರಾತ್ರಿ ಮಲಗುವ ಮುನ್ನ ಹಾಲಿಗೆ ಅರಿಶಿನ ಬೆರೆಸಿ ಸೇವಿಸಬೇಕು. ಕಷಾಯ ಕೂಡ ಉತ್ತಮ.
– ಡಾ| ಚೇತನ್‌, ವ್ಯವಸ್ಥಾಪಕ ನಿರ್ದೇಶಕರು, ಎಂಆರ್‌ಆರ್‌ ನ್ಯಾಚರೋಪತಿ ಆಸ್ಪತ್ರೆ, ಬೆಂಗಳೂರು.

ಪ್ರತ್ಯೇಕವಾಗಿದ್ದು ನಿಯಮ ಪಾಲಿಸಿ
ಕೋವಿಡ್‌ ಸೋಂಕಿನಿಂದ ಬಳಲುತ್ತಿ ರುವವರು ಪ್ರತ್ಯೇಕವಾಗಿರುವುದು ಸಹಿತ ನಿಯಮಗಳ ಪಾಲನೆ ಮಾಡಬೇಕು. ಉಳಿದಂತೆ ಗಂಟಲು ನೋವು, ಶೀತ, ಕೆಮ್ಮು ಇರುವವರು 2-3 ಲಿಂಬೆಹಣ್ಣುಗಳನ್ನು ವಿವಿಧ ರೂಪದಲ್ಲಿ ಸೇವಿಸಬೇಕು. ಉಪ್ಪು ನೀರಿನಿಂದ ಬಾಯಿ ಮುಕ್ಕಳಿಸಬೇಕು. ಸೋಂಕಿಗೀಡಾಗಿದ್ದರೆ ಆಸ್ಪತ್ರೆಗೆ ಬರಬೇಕೆಂದಿಲ್ಲ; ವೀಡಿಯೋ ಮೂಲಕ ಸಮಾಲೋಚನೆ ನಡೆಸಿ, ವೈದ್ಯರ ಮಾರ್ಗದರ್ಶನದಂತೆ ಚಿಕಿತ್ಸೆ ಪಡೆಯಬಹುದು.
-ಡಾ| ಪ್ರಕಾಶ್‌ ಕುಮಾರ್‌, ನಿವೃತ್ತ ಜಂಟಿ ನಿರ್ದೇಶಕರು, ಆಯುಷ್‌ ಇಲಾಖೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.