ಗೌರವ ಪ್ರಶಸ್ತಿ ಪ್ರಕಟ
Team Udayavani, Nov 27, 2019, 3:04 AM IST
ಬೆಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ 2019-20ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2018ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಗ ಳನ್ನು ಮಂಗಳವಾರ ಪ್ರಕಟಿಸಿದೆ. ಡಾ.ಪ್ರಧಾನ್ ಗುರುದತ್ತ-ಮೈಸೂರು, ನಾಡೋಜ ಎಸ್.ಆರ್.ರಾಮಸ್ವಾಮಿ -ಬೆಂಗಳೂರು, ಪ್ರೊ.ಬಾಲಚಂದ್ರ ಜಯಶೆಟ್ಟಿ-ಬೀದರ್, ಎಲ್.ವಿ. ಶಾಂತಕುಮಾರಿ-ಬೆಂಗಳೂರು, ಡಾ.ಆರ್.ಲಕ್ಷ್ಮೀ ನಾರಾಯಣ- ಬೆಂಗಳೂರು ಇವರು 2019-20ನೇ ಸಾಲಿನ ಗೌರವ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ಪ್ರಶಸ್ತಿ 50 ಸಾವಿರ ರೂ.ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.
ಹಾಗೆಯೇ 2018ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಅನುವಾದಕ ಡಾ.ಕೆ.ಪುಟ್ಟಸ್ವಾಮಿ ಅವರ “ದಾಸ್ಯದಿಂದ ಆಚೆಗೆ’ (ಇಂಗ್ಲಿಷ್ನಿಂದ ಕನ್ನಡ), ಮೈತ್ರೇಯಿ ಕರ್ನೂರು ಅವರ “a handful of sesame’ (ಕನ್ನಡದಿಂದ ಇಂಗ್ಲಿಷ್), ಡಾ. ಸಿದ್ಧರಾಮಸ್ವಾಮಿ ಅವರ “ಭಾರತೀಯ ತತ್ವಶಾಸ್ತ್ರ’,( ಹಿಂದಿ ಯಿಂದ ಕನ್ನಡ) ಡಾ.ನರೇಂದ್ರ ರೈ ದೇರ್ಲ ಅವರ “ಕಾರ್ವಲೋ'( ಕನ್ನಡದಿಂದ ಬೇರೆ ಭಾರತೀಯ ಭಾಷೆಗಳಿಗೆ) ಮತ್ತು ಗೀತಾ ಶೆಣೈ “ಅಂತರ ಆಯಾಮಿ’ (ಹಿಂದಿಯೇತರ ಭಾರತೀಯ ಭಾಷೆಗಳಿಂದ ಕನ್ನಡ) ಕೃತಿಗಳು ಆಯ್ಕೆಯಾಗಿವೆ. ಪ್ರಶಸ್ತಿ 25 ಸಾವಿರ ರೂ.ನಗದು ಮತ್ತು ಫಲಕ ಒಳಗೊಂಡಿದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಅಜಕ್ಕಳ ಗಿರೀಶ್ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ