ರೈತರಿಗೂ ಗೌರವ ಡಾಕ್ಟರೆಟ್: ಬೆಂಗಳೂರು ಕೃಷಿ ವಿವಿ ನಿರ್ಧಾರ
Team Udayavani, Sep 21, 2021, 6:15 AM IST
ಬೆಂಗಳೂರು: ಬೆಂಗಳೂರು ಕೃಷಿ ವಿವಿಯು ಹೊಸ ಆಲೋಚನೆಗೆ ಮುನ್ನುಡಿ ಬರೆದಿದ್ದು, ಮುಂದಿನ ವರ್ಷದಿಂದ ಸಾಧಕ ರೈತರಿಗೂ ಗೌರವ ಡಾಕ್ಟರೆಟ್ ನೀಡಲು ತೀರ್ಮಾನಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಕುಲಪತಿ ಡಾ| ಎಸ್. ರಾಜೇಂದ್ರ ಪ್ರಸಾದ್ ಈ ಬಗ್ಗೆ ಮಾಹಿತಿ ನೀಡಿದರು. ಈ ವರ್ಷವೇ ರೈತರಿಗೂ ಕೃಷಿ ವಿವಿಯಿಂದ ಗೌರವ ಡಾಕ್ಟರೆಟ್ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ತೊಡಕಾಯಿತು. ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರ ಮಾಡಿದ ಮಾದರಿ ರೈತರನ್ನು ಗುರುತಿಸಿ ಗೌರವಿಸುವುದು ಕೃಷಿ ವಿವಿಯ ಉದ್ದೇಶವಾಗಿದೆ. ಯಾವ ವಿವಿಯೂ ಇದುವರೆಗೆ ಇಂತಹ ನಿರ್ಧಾರ ಕೈಗೊಂಡಿರಲಿಲ್ಲ ಎಂದು ಹೇಳಿದರು.
ಕೃಷಿ ವಿವಿಯಲ್ಲಿ ಹೊಸ ಶೈಕ್ಷಣಿಕ ನೀತಿ ಜಾರಿ:
ಕೇಂದ್ರ ಸರಕಾರದ ಹೊಸ ಶೈಕ್ಷಣಿಕ ನೀತಿ ಬಗ್ಗೆ ಮಾತನಾಡಿದ ಅವರು, ಹೊಸ ಶಿಕ್ಷಣ ನೀತಿ ಜಾರಿ ಕುರಿತಂತೆ ಕೃಷಿ ವಿಶ್ವವಿದ್ಯಾನಿಲಯ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೃಷಿ ವಿವಿಯಲ್ಲಿ ಶೇ.70ರಷ್ಟು ಹೊಸ ಶೈಕ್ಷಣಿಕ ರೀತಿಯಲ್ಲೆ ಚಟುವಟಿಕೆಗಳು ನಡೆಯುತ್ತಿವೆ.ಆ ಹಿನ್ನೆಲೆಯಲ್ಲಿ ಹೊಸ ಶೈಕ್ಷಣಿಕ ನೀತಿಗೆ ಯಾವುದೇ ರೀತಿಯ ತೊಂದರೆ ಉಂಟಾಗದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ