ತೆಕ್ಕಟ್ಟೆ: ಗಮನ ಸೆಳೆಯುತ್ತಿದೆ ಪುಟಾಣಿಗಳ ಹೂವಿನ ಕೋಲು ತಿರುಗಾಟ

ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸುತ್ತಿದೆ ಗ್ರಾಮೀಣ ಭಾಗದ ಎಳೆಯ ಪ್ರತಿಭೆಗಳು

Team Udayavani, Oct 15, 2021, 9:48 AM IST

jhjhgfd

ತೆಕ್ಕಟ್ಟೆ: ನವರಾತ್ರಿ ಸಂದರ್ಭದಲ್ಲಿ ಪುರಾತನ  ಇತಿಹಾಸವುಳ್ಳ ಸಾಂಪ್ರದಾಯಿಕ ಯಕ್ಷಗಾನ ಕಲೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹೂವಿನ ಕೋಲು ಯಕ್ಷಗಾನ ಪ್ರಾಕಾರವನ್ನು ಯಶಸ್ವಿ ಕಲಾವೃಂದ ಕೊಮೆ, ತೆಕ್ಕಟ್ಟೆ ಇಲ್ಲಿನ ಮಕ್ಕಳ ತಂಡವು ಕುಂದಾಪುರ ತಾಲೂಕಿನ ಆಯ್ದ ಮನೆಗಳಲ್ಲಿ ವಿಶೇಷವಾಗಿ ಪ್ರದರ್ಶನ ನೀಡುತ್ತಿರುವುದು ಗಮನ ಸೆಳೆಯುತ್ತಿದೆ.

ಈ ತಂಡದಲ್ಲಿ ಪ್ರಾಚಾರ್ಯ ಕೆ.ಪಿ.ಹೆಗಡೆ ಮತ್ತು ಮದ್ದಲೆ ವಾದಕ ದೇವದಾಸ ಕೂಡ್ಲಿಯವರ ಮಾರ್ಗದರ್ಶನದಲ್ಲಿ ಕಳೆದ ಹಲವು ವರ್ಷಗಳಿಂದಲೂ ಗ್ರಾಮೀಣ ಭಾಗದಲ್ಲಿ ಹೂವಿನ ಕೋಲು ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸುತ್ತಿದ್ದಾರೆ.

ನಾರಾಯಾಣಾಯ ನಮೋಃ ನಾರಾಯಾಣಾಯ, ನಾಭಿ ಚರಣಕ್ಕೆ ನಮೋಃ ನಾರಾಯಾಣಾಯ, ಗುರುದೈವ ಗಣಪತಿಗೆ ಶರಣು ಶರಣೆಂದು ಕರಗಳೆರಡನು ಮುಗಿದು ಶಿರವೇರಿನಿಂದು ಹೀಗೆ ಚೌಪತಿಯನ್ನೂ ಹಾಡುತ್ತಾ, ಮನೆಯವರಿಗೆ, ಗುರುಗಳಿಗೆ, ಊರಿಗೆ ಶುಭವಾಗಲಿ, ಸಂತತಿಯಾಗಲಿ, ಸಂಪತ್ತು ವೃದ್ಧಿಸಲಿ ಎಂಬ ಆಶಯಗಳನ್ನೂ ಹೊಂದಿರುವ ಈ ಚೌಪದಿಗಳನ್ನೂ ಮಾನೌಮಿಯ ಪದಗಳೆಂದೂ, ಈ ಮಕ್ಕಳು ಮಾನೌಮಿಯ ಮಕ್ಕಳೆಂದೂ ಕರೆಯುವುದು ರೂಢಿಯಿದೆ. ಹಾಗೆ ಹೂವಿನಕೋಲು ಬಂತು ಎನ್ನುತ್ತಾರೆ.

ಯಕ್ಷಗಾನ ಮೇಳಗಳು ಸಾಧಾರಣವಾಗಿ ನವೆಂಬರ್ ತಿಂಗಳಿನಲ್ಲಿ ಆರಂಭಗೊಳ್ಳುತ್ತದೆ. ಅದಕ್ಕೂ ಮುಂಚೆ ನವರಾತ್ರಿಯ ದಿನಗಳಲ್ಲಿ ಹೂವಿನಕೋಲು ಎನ್ನುವ ಕಾರ್ಯಕ್ರಮವನ್ನು ಮನೆ ಮನೆಗೂ ಹೋಗಿ ನಡೆಸಿಕೊಡುತ್ತಾರೆ. ಹೂವಿನಕೋಲು ಪ್ರಕಾರದಲ್ಲಿ ಮಕ್ಕಳು ಪಾಲ್ಗೊಳ್ಳುತ್ತಾರೆ. ಹಾಗೆ ವೃತ್ತಿ ತಿರುಗಾಟದ ಹಿಮ್ಮೇಳ ಕಲಾವಿದರಿಗೆ ಒಂದು ಪೂರ್ವ ತಯಾರಿಯ ರೀತಿಯಲ್ಲಿ ಇಲ್ಲಿ ಗಮನಿಸಬಹುದು. ಭಾಗವತರು ಮದ್ದಲೆಗಾರರು, ಶುತಿಪಾಲಕರು ಮತ್ತು 2 ಅಥವಾ 4 ಜನ ಮಕ್ಕಳು ಕೆಲವೊಮ್ಮೆ 6ಕ್ಕೂ ಏರಬಹುದು. ಹೀಗೆ ಒಂದು ಹೂವಿನಕೋಲು ತಂಡವಾಗುತ್ತದೆ.

ಭಾಗವತರು ಕೇವಲ 2-3 ಪಾತ್ರಗಳ ಸಂಭಾಷಣೆಯನ್ನು ಪ್ರಸಂಗಗಳಿಂದ ಆಯ್ದು ಮಕ್ಕಳಿಗೆ ಕಂಠಪಾಠ ಮಾಡಿಸುತ್ತಾರೆ. ಹಿಂದೆ ಐಗಳ ಮಠಗಳ ಯಕ್ಷಗಾನ ಕಲಿಸುವ ಕೇಂದ್ರಗಳಾಗಿದ್ದು, ಯಕ್ಷಗಾನ ಪ್ರಸಂಗಗಳ ಹಾಡುಗಾರಿಕೆ ಅರ್ಥ ಹೇಳುವ ಕ್ರಮ ಹೇಳಿಕೊಟ್ಟು ನವರಾತ್ರಿಯ ಸಮಯದಲ್ಲಿ ಶಿಷ್ಯರನ್ನೊಳಗೊಂಡು ಹಳ್ಳಿಹಳ್ಳಿಗೆ ಸಂಚರಿಸಿ ಈ ರೀತಿಯ ಹೂವಿನಕೋಲು ಎನ್ನುವ ತಾಳ ಮದ್ದಲೆ ರೂಪಿನ ಕಾರ್ಯಕ್ರಮ ನೀಡುತ್ತಿದ್ದರು. ಮನೆಯವರು ಇದಕ್ಕೆ ಪ್ರತಿಫಲವಾಗಿ ಅಕ್ಕಿ, ಕಾಯಿ ನೀಡಿದ್ದನ್ನು, ಗುರುಗಳಿಗೆ ದುರುದಕ್ಷಿಣೆಯ ರೂಪದಲ್ಲಿ ನೀಡುತ್ತಿದ್ದರು. ಹೂವಿನಿಂದ ಅಲಂಕರಿಸಿದ ಒಂದು ಅಡಿ ಉದ್ದದ ಹೂಕೋಲನ್ನು ಹಿಡಿದುಕೊಂಡಿರುತ್ತಾರೆ ಎಂದು ಯಶಸ್ವಿ ಕಲಾ ವೃಂದದ ಕಾರ್ಯದರ್ಶಿ ವೆಂಕಟೇಶ್ ವೈದ್ಯ ಅವರು ಹೇಳುತ್ತಾರೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.