Hosapete; ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ: ಅನ್ನಸಂತರ್ಪಣೆ


Team Udayavani, Oct 29, 2023, 6:07 PM IST

1-adsadsa

ಹೊಸಪೇಟೆ: ನಟ ಪುನೀತ್ ರಾಜಕುಮಾರ್ ಅವರ 2 ನೇ ವರ್ಷದ ಪುಣ್ಯ ಸ್ಮರಣೆಯನ್ನು ಭಾನುವಾರ ಆಚರಿಸಲಾಯಿತು. ನಗರದ ಅಪ್ಪು ಸರ್ಕಲ್‌ನಲ್ಲಿರುವ 6.6 ಅಡಿ ಎತ್ತರದ ಪುನೀತ್ ರಾಜಕುಮಾರ್ ಅವರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ, ಪೂಜೆ ಸಲ್ಲಿಸಿದ ಅಪ್ಪು ಅಭಿಮಾನಿಗಳು ಸ್ಥಳದಲ್ಲಿ ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು.

ಸಸ್ಯಹಾರಿ ಊಟದ ಜತೆಗೆ ಎಗ್ ಬಿರಿಯಾನಿಯನ್ನು ಸಾರ್ವಜನಿಕರಿಗೆ ಉಣಬಡಿಸಿ, ಅಪ್ಪು ಮೇಲಿನ ಅಭಿಮಾನವನ್ನು ಇನ್ನಷ್ಟು ಹೆಚ್ಚಿಸಿಕೊಂಡರು. ಯುವ ಮುಖಂಡ ಸಿದ್ಧಾರ್ಥ ಸಿಂಗ್ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.

ಅಪ್ಪು ಪ್ರತಿಮೆ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಎಲ್ಲರೂ ಮೊಬೈಲ್ ಕ್ಯಾಮೆರಾದಲ್ಲಿ ಅಪ್ಪುವಿನ ಸುಂದರ ಪ್ರತಿಮೆ ಫೋಟೋವನ್ನು ಸೆರೆ ಹಿಡಿಯುವ ದೃಶ್ಯ ಸಾಮಾನ್ಯವಾಗಿತ್ತು. ಅಪ್ಪು ಅಭಿಮಾನಿಗಳಾದ ಕಣ್ಣಿ ಶ್ರೀಕಂಠ, ಹೊನ್ನೂರು ವಲಿ, ಕಿಚಿಡಿ ವಿಶ್ವ, ಜೋಗಿ ತಾಯಪ್ಪ ಸೇರಿದಂತೆ ಕನ್ನಡಪರ ಸಂಘಟನೆಗಳು ಸಾವಿರಾರು ಭಾಗವಹಿಸಿದ್ದರು.

ವಿಶೇಷ ಪ್ರೀತಿ-ಅಭಿಮಾನ
ಆರಂಭದಿಂದಲೂ ರಾಜ್ ಕುಟುಂಬದ ಮೇಲೆ ಹೊಸಪೇಟೆ ಜನರು ವಿಶೇಷ ಪ್ರೀತಿ-ಅಭಿಮಾನ ಹೊಂದಿದ್ದಾರೆ. ಅದರಂತೆ ಪುನೀತ್ ರಾಜಕುಮಾರ್ ಅವರ ಮೇಲೆಯೂ ಅವರು ಪ್ರೀತಿ ಹೊಂದಿದ್ದರು. ಪುನೀತ್ ಅವರು ಆಗಾಗ ಹೊಸಪೇಟೆಗೆ ಆಗಮಿಸಿ, ಅಭಿಮಾನಿಗಳನ್ನು ಕಾಣುತ್ತಿದ್ದರು. ಸಾಧ್ಯವಾದರೆ, ಅವರ ಮನೆಗೂ ಭೇಟಿ ನೀಡುತ್ತಿದ್ದರು. ಯಾರು ಕೈಬಿಟ್ಟರೂ ಹೊಸಪೇಟೆ ಜನರು ನನ್ನನ್ನು ಕೈ ಬಿಡುವುದಿಲ್ಲ ಎಂಬ ಪುನೀತ್ ಅವರ ಮಾತು ಅಗಲಿದ ಬಳಿಕವೂ ಅವರ ಅಭಿಮಾನಿಗಳು ನಿಜವಾಗಿಸಿದ್ದಾರೆ.

ಆನಂದ ಸಿಂಗ್‌ರಿಂದ ಪ್ರತಿಮೆ ನಿರ್ಮಾಣ
ಮಾಜಿ ಸಚಿವ ಆನಂದ ಸಿಂಗ್ ಅವರು 6.6 ಅಡಿ ಎತ್ತರ ಕಂಚಿನ ಅಪ್ಪು ಪ್ರತಿಮೆಯನ್ನು ನಿರ್ಮಾಣ ಮಾಡುವ ಮೂಲಕ ಅಭಿಮಾನ ತೋರಿದ್ದರು. ಅಂದು ಪುತ್ಥಳಿಯನ್ನು ರಾಘವೇಂದ್ರ ರಾಜಕುಮಾರ್ ಅನಾವರಣಗೊಳಿಸಿದ್ದರು. ಇಡೀ ರಾಜ್ಯದಲ್ಲಿ ಎಲ್ಲರಿಗೂ ಮೊದಲು ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣ ಮಾಡಿದ ಕೀರ್ತಿ ಹೊಸಪೇಟೆ ಅಭಿಮಾನಿಗಳಿಗೆ ಸಲ್ಲುತ್ತದೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.