ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
Team Udayavani, Mar 3, 2021, 5:36 PM IST
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಕಳೆದ ತಿಂಗಳು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸ್ಯಾಂಖಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಈ ಸಂಬಂಧ ಸಭೆ ನಡೆಸಿದ್ದರು. ಸಚಿವರ ಆಶಯದಂತೆ ಹಾಸ್ಟೆಲ್ ನಿರ್ಮಾಣಕ್ಕೆ ಸಂಪುಟ ಸಭೆ ಅಸ್ತು ಎಂದಿದೆ.
ಕಲ್ಯಾಣ ಕರ್ನಾಟಕ ಭಾಗದಿಂದ ಉನ್ನತ ವ್ಯಾಸಂಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬೆಂಗಳೂರಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಇರಲಿಲ್ಲ. ಈ ಕಾರಣದಿಂದಲೇ ಸಾಕಷ್ಟು ಪ್ರತಿಭಾನ್ವಿತ ಯುವಕರು ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶದಿಂದ ವಂಚಿತರಾಗುತ್ತಿದ್ದರು. ಇದನ್ನ ಅರಿತ ಸಚಿವ ಡಾ. ನಾರಾಯಣಗೌಡ ಅವರು ಬೆಂಗಳೂರಿನ ಹೆಚ್ ಎಸ್ ಆರ್ ಬಡಾವಣೆಯಲ್ಲಿ ವಸತಿ ಕಟ್ಟಡ ನಿರ್ಮಿಸಲು ತೀರ್ಮಾನಿಸಿದರು. ಫೆ. 10 ರಂದು ಸಚಿವರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಮತ್ತು ಅಧಿಕಾರಿಗಳ ಜೊತೆ ಈ ಸಂಬಂಧ ಸಭೆ ನಡೆಸಿದ್ದರು.
ಇದನ್ನೂ ಓದಿ : ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ 5 ಲೀಟರ್ ‘ಪೆಟ್ರೋಲ್’ ಪಡೆದ ಕ್ರಿಕೆಟಿಗ.!
ಹೆಚ್.ಎಸ್.ಆರ್ ಸೆಕ್ಟರ್ 6 ಸರ್ವೆ ನಂಬರ 30/7, ರೂಪೇನ ಅಗ್ರಹಾರ ಪ್ರದೇಶದಲ್ಲಿ 59 ಕೋಟಿ ರೂ. ವೆಚ್ಚದಲ್ಲಿ, ಸುಮಾರು 3237 ಚದರ್ ಅಡಿ ನಿವೇಶನದಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ. ಇದು ನಾಲ್ಕು ಮಹಡಿಯ ಕಟ್ಟಡವಾಗಿದ್ದು, ಸುಮಾರು 400 ವಿದ್ಯಾರ್ಥಿಗಳು ವಾಸಿಸಬಹುದಾಗಿದೆ. ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕವಾಗಿ ವಸತಿ ನಿಲಯ ನಿರ್ಮಿಸುತ್ತಿದ್ದು, ಪುರುಷ ವಿಭಾಗದಲ್ಲಿ 44 ಕೋಣೆಗಳು, ಅಡುಗೆ ಮನೆ, ಹಾಗೂ ಮಹಿಳಾ ವಿಭಾಗದಲ್ಲಿ 30 ಕೋಣೆಗಳು, ಅಡುಗೆ ಮನೆ ವ್ಯವಸ್ಥೆ ಹಾಗೂ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಜಿಮ್ ಸುಸಜ್ಜಿತ ಕ್ಲಾಸ್ ರೂಮಗಳು ಒಳಗೊಂಡಿರಲಿವೆ.
ಸಂಪುಟದ ಅನುಮೋದನೆ ನೀಡಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ಜನರ ಪರವಾಗಿ ಸಚಿವ ಡಾ. ನಾರಾಯಣಗೌಡ ಅವರು ಮುಖ್ಯಮಂತ್ರಿಗಳಿಗೆ, ಸಂಪುಟ ಸಹುದ್ಯೋಗಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು UPSC, KPSC, ಕೌಶಾಲ್ಯಾಭಿವೃದ್ಧಿ ಸೇರಿದಂತೆ ಇತರ ತರಬೇತಿಗಳಿಗಾಗಿ ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಆಗಮಿಸುತ್ತಾರೆ. ಹೀಗಾಗಿ ಅತಿ ಶೀಘ್ರದಲ್ಲಿ ಕಟ್ಟಡ ನಿರ್ಮಿಸಿ, ಕಲ್ಯಾಣ ಕರ್ನಾಟಕದ ಜನರ ಏಳಿಗೆಗೆ ಅನುವು ಮಾಡಿಕೊಡಲು ಸಚಿವರು ಉದ್ದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!