ಬಡವರ ಸೂರಿನ ಕನಸಿಗೆ ನೂರೆಂಟು ವಿಘ್ನ; ರಾಜ್ಯದಲ್ಲಿ 39 ಲಕ್ಷ ವಸತಿ, ನಿವೇಶನ ರಹಿತರು

ಪ್ರಸಕ್ತ ವರ್ಷ ಯೋಜನೆಗಳ ಪ್ರಗತಿ ಆರಕ್ಕೇರಿಲ್ಲ, ಮೂರಕ್ಕಿಳಿದಿಲ್ಲ

Team Udayavani, Mar 8, 2023, 7:25 AM IST

ಬಡವರ ಸೂರಿನ ಕನಸಿಗೆ ನೂರೆಂಟು ವಿಘ್ನ; ರಾಜ್ಯದಲ್ಲಿ 39 ಲಕ್ಷ ವಸತಿ, ನಿವೇಶನ ರಹಿತರು

ಬೆಂಗಳೂರು: ಸರ್ವರಿಗೂ ಸೂರು ಒದಗಿಸುವುದು ಸರಕಾರದ ಆದ್ಯತೆಯಾಗಿದೆ. ಆದರೆ, ಬಡವರ ಈ ಸೂರಿನ ಕನಸಿಗೆ ನೂರೆಂಟು ವಿಘ್ನಗಳು ಅಡ್ಡಿಯಾಗಿವೆ.

ರಾಜ್ಯದ ವಸತಿ ರಹಿತ ಮತ್ತು ನಿವೇಶನ ರಹಿತರಿಗೆ ನೆಲೆ ಒದಗಿಸಿಕೊಡಲು ಸರಕಾರ ಹತ್ತಾರು ಯೋಜನೆಗಳನ್ನು ಹಾಕಿಕೊಂಡಿದೆ. ಇದಕ್ಕಾಗಿ ಕೋಟ್ಯಂತರ ರೂ. ಸಹ ಮೀಸಲಿಡುತ್ತದೆ. ಆದರೆ, ಗುರಿ ಮಾತ್ರ ಆಮೆ ನಡಿಗೆಯಲ್ಲಿದೆ.

ಗ್ರಾಮೀಣ ಭಾಗದ ಜನರಿಗೆ ವಸತಿ-ನಿವೇಶನ ಒದಗಿಸಲು ಬಸವ ವಸತಿ, ಅಂಬೇಡ್ಕರ್‌ ಆವಾಸ್‌, ಪಿಎಂ ಆವಾಸ್‌, ದೇವರಾಜ ಅರಸು ವಸತಿ ಯೋಜನೆಗಳನ್ನು ಅದೇ ರೀತಿ ನಗರದ ಪ್ರದೇಶದ ನಿರ್ಗತಿಕರಿಗೆ ನಿವೇಶನ ಒದಗಿಸಲು ವಾಜಪೇಯಿ ನಗರ ವಸತಿ, ದೇವರಾಜು ಅರಸ್‌, ಅಂಬೇಡ್ಕರ್‌ ನಗರ ವಸತಿ ಯೋಜನೆ ಇತ್ಯಾದಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗಳ ಪ್ರಗತಿ ಅರಕ್ಕೇರಿಲ್ಲ, ಮೂರಕ್ಕಿಳಿದಿಲ್ಲ.

ಸರಕಾರವೇ ಹೇಳಿರುವ ವಸತಿ ಯೋಜನೆಗಳ ಅನುಷ್ಠಾನಕ್ಕೆ ಅನೇಕ ಸಮಸ್ಯೆಗಳಿವೆ. ಬ್ಯಾಂಕುಗಳು ಸಾಲ ನೀಡಲು ಹಿಂದೇಟು ಹಾಕುತ್ತಿರುವುದು, ಕಟ್ಟಡ ನಿರ್ಮಾಣ ವೆಚ್ಚದ ಏರಿಕೆ, ಅನುದಾನದ ಮಿತಿ, ಜಮೀನಿನ ಅಲಭ್ಯತೆ ಮತ್ತಿತರರ ಕಾರಣಗಳಿಂದ ವಸತಿ ಯೋಜನೆಗಳನ್ನು ಸಕಾಲಕ್ಕೆ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶ ಸೇರಿ ಈಗಲೂ ರಾಜ್ಯದಲ್ಲಿ ಒಟ್ಟು 39 ಲಕ್ಷ ವಸತಿ ಮತ್ತು ನಿವೇಶನ ರಹಿತರು ಇದ್ದಾರೆ.

2022-23ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಿಗೆ ಸರಕಾರ 3,637 ಕೋಟಿ ರೂ. ಅನುದಾನ ಒದಗಿಸಿದೆ. ಈ ಪೈಕಿ 2,341 ಕೊಟಿ ರೂ. ಬಿಡುಗಡೆ ಮಾಡಲಾಗಿದ್ದು, ಹಿಂದಿನ ಉಳಿಕೆ ಅನುದಾನ ಸೇರಿ 2023ರ ಜನವರಿ ಅಂತ್ಯಕ್ಕೆ 2,344 ಕೋಟಿ ರೂ. ವೆಚ್ಚ ಮಾಡಲಾಗಿದೆ. 2022ರ ಅಂತ್ಯಕ್ಕೆ 93 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. 1,099 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಅದೇ ರೀತಿ ಕಳೆದ 10 ವರ್ಷಗಳಲ್ಲಿ ವಿವಿಧ ಗ್ರಾಮೀಣ ಮತ್ತು ನಗರ ವಸತಿ ಯೋಜನೆಗಳಡಿ 47 ಲಕ್ಷ ಮನೆಗಳನ್ನು ನಿರ್ಮಿಸಿ, 3.57 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಹತ್ತು ವರ್ಷಗಳಲ್ಲಿ 38 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೂ, ಪ್ರತಿಯೊಬ್ಬರಿಗೂ ಸೂರು ಎಂಬ ಕನಸು ನನಸಾಗಿಲ್ಲ. ಈಗಲೂ 39 ಲಕ್ಷ ಜನರಿಗೆ ತಲೆ ಮೇಲೆ ಸೂರಿಲ್ಲ, ನೆಲದ ಮೇಲೆ ನೆಲೆ ಇಲ್ಲ.

ಒಟ್ಟು 39.19 ಲಕ್ಷ ವಸತಿ ರಹಿತರು
ಸರಕಾರದ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಲ್ಲಿ 18.71 ಲಕ್ಷ ವಸತಿ ರಹಿತರು, 7.19 ಲಕ್ಷ ನಿವೇಶನ ರಹಿತರು ಸೇರಿ 25.90 ಲಕ್ಷ ವಸತಿ/ನಿವೇಶನ ರಹಿತರು ಇದ್ದಾರೆ. ಅದೇ ರೀತಿ ನಗರ ಪ್ರದೇಶದಲ್ಲಿ 3.02 ಲಕ್ಷ ವಸತಿ ರಹಿತರು, 10.27 ಲಕ್ಷ ನಿವೇಶನ ರಹಿತರು ಸೇರಿ ಒಟ್ಟು 13.29 ವಸತಿ/ನಿವೇಶನ ರಹಿತರು ಇದ್ದಾರೆ.

ಸೂರಿನ ಕನಸಿಗೆ ವಿಘ್ನಗಳೇನು?
– ಸರಕಾರವು ಪ್ರತಿ ವರ್ಷ ಬಜೆಟ್‌ನಲ್ಲಿ ಒದಗಿಸುವ ಅನುದಾನದ ಮಿತಿಯೊಳಗೆ ವಸತಿ ಸೌಲಭ್ಯ ಒದಗಿಸಬೇಕಾಗಿರುವುದರಿಂದ ಏಕಕಾಲಕ್ಕೆ ಎಲ್ಲರಿಗೂ ವಸತಿ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ.
– ನಗರ ಪ್ರದೇಶದಲ್ಲಿ ಬಹುತೇಕ ಕುಟುಂಬಗಳಿಗೆ ತಾವೇ ಸ್ವತಃ ಮನೆ ಕಟ್ಟಿಕೊಳ್ಳಲು ನಿವೇಶನ ಹೊಂದಿಲ್ಲದಿರುವುದು.
– ಮನೆ ನಿರ್ಮಾಣಕ್ಕೆ ಬ್ಯಾಂಕುಗಳು ಬಡ ಫ‌ಲಾನುಭವಿಗಳಿಗೆ ಸಾಲ ಸಾಲ ಸೌಲಭ್ಯ ನೀಡಲು ಆಸಕ್ತಿ ತೋರದೇ ಇರುವುದು.
– ಕಟ್ಟಡ ನಿರ್ಮಾಣ ವೆಚ್ಚ ದಿನೇ ದಿನೇ ಹೆಚ್ಚಾಗುತ್ತಿರುವುದಿರಂದ ಬಡ ಕುಟುಂಬಗಳು ಮನೆ ಕಟ್ಟಿಕೊಳ್ಳಲು ಮುಂದೆ ಬರದೇ ಇರುವುದು.
– ಕೆಲವು ಕುಟುಂಬಗಳು ಅರಣ್ಯ ಪ್ರದೇಶದಲ್ಲಿ ಕಂದಾಯ ಜಮೀನಿನಲ್ಲಿ ಒತ್ತುವರಿ ಪ್ರದೇಶದಲ್ಲಿ ನಿವೇಶನ ಹೊಂದಿದ್ದು, ನಿವೇಶನಕ್ಕೆ ಸಂಬಂಧಿಸಿದ ಹಕ್ಕುಪತ್ರ, ಕ್ರಯಪತ್ರ ದಾಖಲೆಗಳನ್ನು ಹೊಂದಿರುವುದಿಲ್ಲ.
– ಬಡ ಕುಟುಂಬಗಳಿಗೆ ವಸತಿ/ನಿವೇಶನ ಸೌಲಭ್ಯ ಒದಗಿಸಲು ನಗರ ಪ್ರದೇಶದಲ್ಲಿ ಸರ್ಕಾರಿ ಜಮೀನು ಅಥವಾ ಕಡಿಮೆ ದರದಲ್ಲಿ ಖಾಸಗಿ ಜಮೀನು ಲಭ್ಯವಿಲ್ಲದಿರುವುದು.
– ಬಹುತೇಕ ಕುಟುಂಬ ಬಹುಮಹಡಿ ಮಾದರಿಯ ವಸತಿ ಸಂಕೀರ್ಣಗಳನ್ನು ಒಪ್ಪದಿರುವುದು. ಫ‌ಲಾನುಭವಿಗಳ ವಂತಿಗೆ ಭರಿಸಲು ಮುಂದೆ ಬರದಿರುವುದು.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.