ವಸತಿ ಯೋಜನೆ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ : ಸಿಎಂ
Team Udayavani, Mar 16, 2022, 10:40 PM IST
ವಿಧಾನಸಭೆ : ವಸತಿ ಫಲಾನುಭವಿಗಳಿಗೆ ಇದುವರೆಗೂ ಇರುವ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಳ ಮಾಡಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ವಿಧಾನಸಭೆಯಲ್ಲಿ ಈ ಕುರಿತು ಪ್ರಕಟಿಸಿದ ಅವರು, ಇದುವರೆಗೂ ಗ್ರಾಮೀಣ ಪ್ರದೇಶದಲ್ಲಿ ವಸತಿ ಯೋಜನೆಯ ಫಲಾನುಭವಿಗಳ ಆದಾಯ ಮಿತಿ 32 ಸಾವಿರ ನಿಗದಿ ಪಡಿಸಲಾಗಿತ್ತು. ಅದನ್ನು 1,20,000 ಕ್ಕೆ ಏರಿಕೆ ಮಾಡಲಾಗಿದೆ.
ಅದೇ ರೀತಿ ನಗರ ಪ್ರದೇಶದ ವಸತಿ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷ ಕ್ಕೆ ಏರಿಕೆ ಮಾಡಲಾಗಿದೆ ಎಂದು ಪ್ರಕಟಿಸಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ನ ರಮೇಶ್ ಕುಮಾರ್ ಹಾಗೂ ಬಿಜೆಪಿಯ ಸಿ.ಟಿ. ರವಿ ವಸತಿ ಯೋಜನೆ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…