ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ? ಕಾಂಗ್ರೆಸ್
Team Udayavani, Apr 14, 2021, 4:24 PM IST
ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ? ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ? ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ? ಲೂಟಿ ರವಿ ಉತ್ತರಿಸುವರೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಟ್ವೀಟ್ ಮಾಡಿದ್ದು ಸಿ.ಟಿ.ರವಿ ಸೇರಿದಂತೆ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಜನತೆ ಸಂಕಷ್ಟದಲ್ಲಿದ್ದಾರೆ, ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿ ಎನ್ನುವ ಸಿದ್ದರಾಮಯ್ಯನವರ ಸಲಹೆಗೆ ಬುದ್ದಿ ಭ್ರಮಣೆಯಾದವರಂತೆ ಮಾತನಾಡುವ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಿ.ಟಿ.ರವಿ ಅವರೇ, ‘ಪಿಎಂ ಕೇರ್ಸ್,ಕರೋನಾ ಪ್ಯಾಕೇಜ್, 20 ಲಕ್ಷ ಕೋಟಿ ಪ್ಯಾಕೇಜ್’ ಇವೆಲ್ಲ ಎಲ್ಲಿ ಹೋದವು ಎಂದು ಹೇಳಿ, ಇಲ್ಲವೇ ಅವೆಲ್ಲ ಬೋಗಸ್ ಎಂದು ಒಪ್ಪಿಕೊಳ್ಳಿ ಎಂದಿದೆ.
“ರಾಜ್ಯದಲ್ಲಿ ಕರೋನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಆಕ್ಸಿಜನ್ ಕೊರತೆ, ವೈದ್ಯರ ಕೊರತೆ, ಆಂಬ್ಯುಲೆನ್ಸ್ ಕೊರತೆ, ಪಿಪಿಇ ಕಿಟ್ ಕೊರತೆ, ಬೆಡ್ಗಳ ಕೊರತೆ, ಐಸಿಯು ಕೊರತೆ, ಸ್ಮಶಾನದಲ್ಲಿ ಜಾಗದ ಕೊರತೆ, ಸರ್ಕಾರಕ್ಕೆ ಮನಿಷ್ಯತ್ವದ ಕೊರತೆ” ಬಿಜಪಿ ಸರ್ಕಾರದ ಲಜ್ಜೆಗೆಟ್ಟ ಆಡಳಿತದಲ್ಲಿ ರಾಜ್ಯ ಸ್ಮಶಾನವಾಗುವತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು