ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ಕಾರ್ಯದರ್ಶಿ ಸುಯಮೀಂದ್ರಾಚಾರ್ ಕೋವಿಡ್ ಗೆ ಬಲಿ
Team Udayavani, Apr 30, 2021, 10:21 PM IST
ರಾಯಚೂರು :ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಎಸ್.ಎನ್. ಸುಯಮೀಂದ್ರಾಚಾರ್ (54) ಇಂದು(ಶುಕ್ರವಾರ, ಏ. 30) ನಿಧನ ಹೊಂದಿದ್ದಾರೆ.
ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಮಠದ ಪೂರ್ವ ಪೀಠಾಧಿಪತಿ ಶ್ರೀ ಸುಯತೀಂದ್ರತೀರ್ಥರ ಪೂರ್ವಾಶ್ರಮದ ಪುತ್ರ ಸುಯಮೀಂದ್ರಾಚಾರ್ ಅವರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಕೋವಿಡ್ ದೃಢವಾಗಿದ್ದರಿಂದ ಅವರನ್ನು ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಇನ್ನು, ಸುಯಮೀಂದ್ರಾಚಾರ್ ಅವರ ಸಾವಿಗೆ ಸಂತಾಪ ಸೂಚಿಸಿದ ಸಚಿವ ಅರವಿಂದ ಲಿಂಬಾವಳಿ, ಸುಯಮೀಂದ್ರಾಚಾರ್ ಅವರು ಇಂದು ಸಾಯಂಕಾಲ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರ ಸಾವಿನ ಸುದ್ದಿ ನನಗೆ ಆಘಾತ ಉಂಟುಮಾಡಿದೆ, ಅವರು ಬಿ ಎಂ ಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನನ್ನ ಸಹಪಾಠಿಯಾಗಿದ್ದರು. ಸರಳ, ಸಜ್ಜನಿಕೆಯ ಸುಯಮೀಂದ್ರ ಆಚಾರ್ಯರು ದೆಹಲಿಯಲ್ಲಿ ಕೋವಿಡ್ಗೆ ಬಲಿಯಾಗಿರುವುದು ನಿಜಕ್ಕೂ ದುರದೃಷ್ಟಕರ.
ಅವರ ನಿಧನದಿಂದ ನಾನು ಸಹೃದಯಿ ಮಿತ್ರನನ್ನು ಕಳೆದುಕೊಂಡಿದ್ದೇನೆ. ಅವರ ಕುಟುಂಬ ವರ್ಗಕ್ಕೆ ಮತ್ತು ಅವರ ಮಿತ್ರವೃಂದಕ್ಕೆ ಅವರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿಯನ್ನು ಶ್ರೀ ರಾಘವೇಂದ್ರ ಸ್ವಾಮಿಗಳು ಕರುಣಿಸಲಿ ಎಂದು ತಿಳಿಸಿದ್ದಾರೆ.
ಓದಿ : ಕಾಂಗ್ರೆಸ್ ಮಾಜಿ ಶಾಸಕ, ಹಿರಿಯ ನ್ಯಾಯವಾದಿ ಲೈಕುದ್ದೀನ್ ಸಾಹಬ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್