ಹುಬ್ಬಳ್ಳಿ ಟೆಕ್ಕಿ ರಕ್ತ ಪರೀಕ್ಷಾ ವರದಿ ನೆಗೆಟಿವ್‌


Team Udayavani, Feb 5, 2020, 3:04 AM IST

hubbli

ಬೆಂಗಳೂರು/ಹುಬ್ಬಳ್ಳಿ/ಮಂಗಳೂರು: ಚೀನಾದಲ್ಲಿ ಟೆಕ್ಕಿಯಾಗಿದ್ದು, ಇತ್ತೀಚೆಗಷ್ಟೇ ಮರಳಿದ್ದ ಹುಬ್ಬಳ್ಳಿಯ ನಿವಾಸಿಯೊಬ್ಬರಿಗೆ ಕೊರೊನಾ ವೈರಸ್‌ ಶಂಕೆ ವ್ಯಕ್ತವಾಗಿತ್ತಾದರೂ, ರಕ್ತ ಪರೀಕ್ಷೆಯಲ್ಲಿ ನೆಗೆಟಿವ್‌ ಫಲಿತಾಂಶ ಬಂದಿದೆ. ಇಲ್ಲಿನ ಕೇಶ್ವಾಪುರ ನಿವಾಸಿ ಸಂದೀಪ ಕೆಳಸಂಗದ ಅವರು ಜ್ವರ-ಕಫದಿಂದ ಬಳಲಿ ಕಿಮ್ಸ್‌ ಗೆ ದಾಖಲಾಗಿದ್ದರು. ಸಾಫ್ಟ್‌ ವೇರ್‌ ಎಂಜಿನಿಯರ್‌ ಆಗಿರುವ ಇವರು ಚೀನಾದಲ್ಲಿ ಕೆಲಸ ಮಾಡುತ್ತಿದ್ದರು.

ಜ.18ರಂದು ಚೀನಾದಿಂದ ಮುಂಬೈಗೆ ಆಗಮಿಸಿ ನಂತರ ಹುಬ್ಬಳ್ಳಿಗೆ ಬಂದಿದ್ದರು. ತೀವ್ರ ಜ್ವರ ಮತ್ತು ಕಫದಿಂದ ಬಳಲಿ ಭಾನುವಾರ ಸಂಜೆ ಕಿಮ್ಸ್‌ಗೆ ದಾಖಲಾಗಿದ್ದರು. ಇವರ ರಕ್ತದ ಮಾದರಿ ಸಂಗ್ರಹಿಸಿ, ತಪಾಸಣೆಗಾಗಿ ಬೆಂಗಳೂರಿನ ವೈರಾಲಜಿ ಇನ್‌ಸ್ಟಿಟ್ಯೂಟ್‌ಗೆ ಕಳುಹಿಸಲಾಗಿತ್ತು. ಅದರ ವರದಿಯಲ್ಲಿ ನೆಗೆಟಿವ್‌ ಎಂದು ಕಂಡು ಬಂದಿದೆ ಎಂದು ಕಿಮ್ಸ್‌ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ|ಅರುಣಕುಮಾರ ಸಿ.ತಿಳಿಸಿದ್ದಾರೆ.

9,296 ಮಂದಿಯ ತಪಾಸಣೆ: ಈವರೆಗೆ, ಚೀನಾ ಸೇರಿದಂತೆ ಸೋಂಕು ಹೆಚ್ಚಿರುವ ದೇಶಗಳಿಂದ ಬಂದಿರುವ ಪ್ರಯಾಣಿಕರ ಪೈಕಿ 81 ಮಂದಿಯನ್ನು ಗುರುತಿಸಲಾಗಿದ್ದು, ಆ ಪೈಕಿ 69 ಮಂದಿಯನ್ನು ಶಂಕಿತರು ಎಂದು ನಿರ್ಧರಿಸಿ ರಕ್ತ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ 44 ಮಂದಿಯ ರಕ್ತ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದ್ದು, ಬಾಕಿ ಉಳಿದವರ ವರದಿ ಬರಬೇಕಿದೆ. ಸದ್ಯ 58 ಮಂದಿಯ ಬಗ್ಗೆ ಮನೆಯಲ್ಲಿಯೇ ನಿಗಾ ವಹಿಸಲಾಗಿದೆ.

ಉಳಿದಂತೆ, ನಾಲ್ವರು ವಿದೇಶಿಗರು ಚೀನಾಕ್ಕೆ ಮರಳಿದ್ದಾರೆ. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಇಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಾ ಹಾಗೂ ಸೋಂಕು ಹೆಚ್ಚಿರುವ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ನಡೆಸಲಾಗುತ್ತಿದ್ದು, ಜ.21ರಿಂದ ಇಲ್ಲಿಯವರೆಗೂ 9,296 ಮಂದಿ ತಪಾಸಣೆಗೆ ಒಳಗಾಗಿದ್ದಾರೆ.

ಆರೋಗ್ಯ ಇಲಾಖೆಯ 104 ಸಹಾಯವಾಣಿ ಯಲ್ಲಿ ಕೊರೊನಾ ಮಾಹಿತಿ ಲಭ್ಯವಿದೆ. ಕೇರಳದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣ ಮೂರಾಗಿದ್ದು, ಆ ರಾಜ್ಯಕ್ಕೆ ಹೊಂದಿಕೊಂಡಿ ರುವ ಕರ್ನಾ ಟಕದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.