ಆರ್.ಆರ್.ನಗರ: ವೆಂಕಟ್ಗೆ ಸಿಕ್ಕ ಮತಗಳೆಷ್ಟು? ಪ್ರತಿಕ್ರಿಯೆ ಏನು?
Team Udayavani, May 31, 2018, 4:31 PM IST
ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಶಾಸಕ ಮುನಿರತ್ನ ವಿರುದ್ಧ ಸಮರ ಸಾರಿ , ಅವಕಾಶ ಸಿಕ್ಕಾಗೆಲ್ಲಾ ವಾಗ್ಧಾಳಿ ನಡೆಸಿ ಚುನಾವಣಾ ಸ್ಪರ್ಧೆಗಿಳಿದಿದ್ದ ನಟ ಹುಚ್ಚ ವೆಂಕಟ್ ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
ಚಲಾವಣೆಯಾದ 2,56,444 ಮತಗಳ ಪೈಕಿ ಹುಚ್ಚ ವೆಂಕಟ್ ಕೇವಲ 764 ಮತಗಳನ್ನು ಪಡೆದು ಠೇವಣಿ ಕಳೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಹುಚ್ಚ ವೆಂಕಟ್ ‘ನಾನು ಸೋತಿಲ್ಲ. ಕ್ಷೇತ್ರದ ಜನತೆ ಸೋತಿದ್ದಾರೆ. ನಾನು ಹಣ ಹಂಚಿಲ್ಲ .ಹೆಂಡ ಹಂಚಿಲ್ಲ, ಕುಕ್ಕರ್ ಹಂಚಿಲ್ಲ. ನನ್ ಯಕ್ಡಾ ಕೂಡ ಅಂತಾ ವೋಟುಗಳನ್ನು ಕೇಳಲ್ಲಾ’ ಎಂದು ಕಿಡಿ ಕಾರಿದರು.
ಕ್ಷೇತ್ರದಲ್ಲಿ ನೊಟಾಗೆ 2,724 ಮತಗಳು ಚಲಾವಣೆಯಾಗಿವೆ.
ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಮುನಿರತ್ನ ನಾಯ್ಡು ಅವರು ಬಿಜೆಪಿಯ ತುಳಸಿ ಮುನಿರಾಜು ಗೌಡ ವಿರುದ್ಧ 25,492 ಮತಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ 2 ನೇ ಬಾರಿಗೆ ವಿಧಾನ ಸಭೆಗೆ ಪ್ರವೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ