ಹುಚ್ಚ ವೆಂಕಟ್ ಆತ್ಮಹತ್ಯೆಗೆ ಯತ್ನ;ಮಾಧ್ಯಮಗಳಿಗೆ ಕಳುಹಿಸಿದ SMS ಏನು?
Team Udayavani, Jun 18, 2017, 4:55 PM IST
ಬೆಂಗಳೂರು:ಹುಚ್ಚ ವೆಂಕಟ ಅವರು ಭಾನುವಾರ ತಮ್ಮ ತೋಟದ ಮನೆಗೆ ತೆರಳಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ ಎಂದು ಮಾಧ್ಯಮದ ವರದಿಗಳು ತಿಳಿಸಿವೆ.
ಮಾಧ್ಯಮಗಳಿಗೆ ಎಸ್ಎಂಎಸ್ ಕಳುಹಿಸಿದ್ದಿ ಹುಚ್ಚ ವೆಂಕಟ್:
ಹುಚ್ಚ ವೆಂಕಟ್ ಗೆ ರಿಯಾಲಿಟಿ ಶೋನ ನಟಿ ಜತೆ ಪ್ರೇಮಾಂಕುರವಾಗಿತ್ತು. ಭಗ್ನ ಪ್ರೇಮದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮಾಧ್ಯಮಗಳಿಗೆ ಎಸ್ಎಂಎಸ್ ಕಳುಹಿಸಿರುವ ಹುಚ್ಚ ವೆಂಕಟ್, ಖಾಸಗಿ ಆಸ್ಪತ್ರೆಯಲ್ಲಿ ಪ್ರಿಯತಮೆಯನ್ನು ನೆನಸಿಕೊಂಡು ಹುಚ್ಚಾಟ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ. ಆಕೆ ಇಲ್ಲದೆ ಬದುಕಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಸಂದೇಶ ಇದೆ.
ಪ್ರೇಮ, ಪ್ರೇಮ, ಪ್ರೇಮ ಅಂತ ಕಿರುಚಾಡುತ್ತಿರುವ ವೆಂಕಟ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ವರದಿ ಹೇಳಿದೆ.
ಬೆಳಗ್ಗೆ 10ಗಂಟೆಗೆ ತಮ್ಮ ತಂದೆ ಜತೆ ತೋಟದ ಮನೆ ಸೇರಿದ್ದ ವೆಂಕಟ್ ತಾನು ಪ್ರೀತಿಸುತ್ತಿದ್ದ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಮನನೊಂದು ಫಿನಾಯಿಲ್ ಸೇವಿಸಿರುವುದಾಗಿ ವರದಿ ತಿಳಿಸಿದೆ. ಹುಚ್ಚ ವೆಂಕಟ ಫಿನಾಯಿಲ್ ಕುಡಿದು ಆತ್ಮಹತ್ಯೆ ನಾಟಕವಾಡಿರುವುದಾಗಿ ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ ರಮ್ಯಾ ಅವರನ್ನು ಪ್ರೀತಿಸಿದ್ದೇನೆ ಎಂದು ಹುಚ್ಚ ವೆಂಕಟ್ ರಂಪಾಟ ನಡೆಸಿದ್ದನ್ನು ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್