ಬಿಜೆಪಿಗೆ ಅವಕಾಶ ನೀಡಿದರೆ ಭಾರೀ ಪ್ರತಿಭಟನೆ; ರಾಜ್ಯಪಾಲರಿಗೆ ಒತ್ತಡ ?
Team Udayavani, May 16, 2018, 3:49 PM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲೇಬೇಕು ಎನ್ನುವ ಉದ್ದೇಶದೊಂದಿಗೆ ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಪಕ್ಷಗಳು ಒಂದಾಗಿವೆ. ಸರ್ಕಾರ ರಚನೆಗೆ ಬಹುಮತ ಇರದ ಬಿಜೆಪಿಗೆ ರಾಜ್ಯಪಾಲರು ಅವಕಾಶ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವ ಮುನ್ಸೂಚನೆ ನೀಡಿ ಒತ್ತಡ ಹೇರಲು ಮುಂದಾಗಿವೆ.
104 ಸ್ಥಾನ ಹೊಂದಿರುವ ಬಿಜೆಪಿಗೆ ಬಹುಮತ ಇಲ್ಲ. ಅವರಿಗೆ ಅವಕಾಶ ನೀಡುವುದು ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಸಾಧ್ಯವಿಲ್ಲ, ಇದು ಕಾನೂನು ಬಾಹಿರವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಎಲ್ಲಿಯಾದರೂ ರಾಜ್ಯಪಾಲರು ಬಿಜೆಪಿ ಅವಕಾಶ ನೀಡಿದರೆ ಕಾಂಗ್ರೆಸ್ ಶಾಸಕರು, ಸಂಸದರು, ರಾಷ್ಟ್ರೀಯ ನಾಯಕರು, ಜೆಡಿಎಸ್ ಶಾಸಕರು, ಮುಖಂಡರು , ಇತರ ಕೆಲ ಪ್ರಾದೇಶಿಕ ಪಕ್ಷಗಳ ನಾಯಕರು ಆಹೋರಾತ್ರಿ ಧರಣಿ ನಡೆಸುವ ಮುನ್ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಬಿಜೆಪಿಯು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಮೂರನೇ ಮತ್ತು ಜೆಡಿಎಸ್ ಸರಕಾರ ರಚಿಸುವುದಕ್ಕೆ ಬೇಷರತ್ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ನೀಡಿದೆ. ಇದರ ಆಧಾರದ ಮೇಲೆ ಕಾಂಗ್ರೆಸ್ ಜತೆ ಮೈತ್ರಿ ಸರಕಾರ ರಚಿಸಲು ಅವಕಾಶ ಕೋರಿ ಜೆಡಿಎಸ್ ಕೂಡ ರಾಜ್ಯಪಾಲರ ಮುಂದೆ ಹಕ್ಕು ಪ್ರತಿಪಾದಿಸಿದೆ.
ಈಗ ಚೆಂಡು ರಾಜ್ಯಪಾಲರ ಅಂಗಣದಲ್ಲಿದ್ದು, ಬಿಜೆಪಿಗೆ ಅವಕಾಶ ನೀಡುತ್ತಾರೋ, ಜೆಡಿಎಸ್ -ಕಾಂಗ್ರೆಸ್ ಸರ್ಕಾರ ರಚಿಸಲು ಅವಕಾಶ ಮಾಡಿ ಕೊಡುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ