ಅಧ್ಯಯನ ಪ್ರವಾಸಕ್ಕೂ ಅದ್ಧೂರಿ ಸ್ವಾಗತ; ಟೀಕೆ
Team Udayavani, Jun 10, 2019, 3:00 AM IST
ಲಿಂಗಸುಗೂರು: ಬರ ಅಧ್ಯಯನ ಪ್ರವಾಸಕ್ಕಾಗಿ ಶನಿವಾರ ತಾಲೂಕಿಗೆ ಭೇಟಿ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಲ್ಲಿನ ಬಿಜೆಪಿ ಮುಖಂಡರು ಅದ್ಧೂರಿ ಸ್ವಾಗತ ಕೋರಿದ್ದು ಚರ್ಚೆಗೆ ಗ್ರಾಸವಾಗಿದೆ.
ಕ್ಷೇತ್ರದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆಯಿಂದ ಜಾನುವಾರುಗಳನ್ನು ಕಸಾಯಿಖಾನೆಯತ್ತ ಮಾರಾಟ ಮಾಡುವ ಸ್ಥಿತಿ ತಲುಪಿದೆ. ಇದರ ವೀಕ್ಷಣೆಗೆ ಆಗಮಿಸಿದ್ದ ಯಡಿಯೂರಪ್ಪ, ಶನಿವಾರ ತಾಲೂಕಿನ ಮುದಗಲ್ ಹೋಬಳಿ ಛತ್ತರ ತಾಂಡಾದಲ್ಲಿ ಬರ ಪರಿಶೀಲನೆ ಮಾಡಿದ್ದರು. ಬಳಿಕ, ಅ ಧಿಕಾರಿಗಳ ಸಭೆ ನಡೆಸಿದ್ದರು.
ಯಡಿಯೂರಪ್ಪ ಅವರು ತಾಲೂಕಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಬಿಜೆಪಿ ಮುಖಂಡರು ನೂರಾರು ಸಂಖ್ಯೆಯಲ್ಲಿ ಬ್ಯಾನರ್ ಹಾಗೂ ಕಟೌಟ್ ಹಾಕುವ ಮೂಲಕ ಭರ್ಜರಿ ಸ್ವಾಗತ ನೀಡಿದ್ದರು. ಇದು ಚರ್ಚೆಗೆ ಗ್ರಾಸವಾಗಿದೆ. ಅವರ ಸ್ವಾಗತಕ್ಕೆ ಇಷ್ಟೆಲ್ಲಾ ಹಣ ಖರ್ಚು ಮಾಡುವ ಬದಲು ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಬಹುದಾಗಿತ್ತು. ಪಕ್ಷದ ವತಿಯಿಂದ ಮೇವು ಖರೀದಿಸಿ, ಅದನ್ನು ರೈತರಿಗೆ ಉಚಿತವಾಗಿ ನೀಡಬಹುದಾಗಿತ್ತು ಎಂಬ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ