ಕರಾವಳಿ ಹೆಮ್ಮೆ; ಬ್ಲ್ಯಾಕ್ ಫಂಗಸ್ ಔಷಧ ಅಭಿವೃದ್ಧಿ ರೂವಾರಿ ಗಂಗೊಳ್ಳಿಯ ಶ್ರೀಕಾಂತ್ ಎ ಪೈ

ಪೈ ಅವರು ಬೆಂಗಳೂರಿನಲ್ಲಿ ಫಾರ್ಮಸಿ ಶಿಕ್ಷಣ ಪಡೆದುಕೊಂಡು, ನಂತರ ಮಣಿಪಾಲದಲ್ಲಿ ಸ್ನಾತಕೋತ್ತರ ಪಡೆದಿದ್ದರು.

ನಾಗೇಂದ್ರ ತ್ರಾಸಿ, May 26, 2021, 12:18 PM IST

Antidote-A-pai

ಮಣಿಪಾಲ: ಭಾರತ ಸೇರಿದಂತೆ ಕೋವಿಡ್ 19 ಸೋಂಕು ಜಗತ್ತಿನಾದ್ಯಂತ ಅಪಾರ ಪ್ರಮಾಣದ ಸಾವು, ನೋವು ಸಂಭವಿಸಲು ಕಾರಣವಾಗಿದ್ದು, ಏತನ್ಮಧ್ಯೆ ಬ್ಲ್ಯಾಕ್ ಫಂಗಸ್( ಮ್ಯೂಕೋರ್ ಮೈಕೋಸಿಸ್) ಎಂಬ ಸಾಂಕ್ರಾಮಿಕ ರೋಗ ಕೂಡಾ ಪತ್ತೆಯಾಗಿದೆ. ಅಪರೂಪದ ಬ್ಲ್ಯಾಕ್ ಫಂಗಸ್ ಗೆ ಅಗತ್ಯವಿರುವ ಲೊಫೋಸೋಮಲ್ ಆ್ಯಂಪೊಟೆರಿಸಿನ್ ಬಿ ಔಷಧದ ಕೊರತೆಯಿಂದ ಹಲವಾರು ಮಂದಿ ಸಾವನ್ನಪ್ಪುವಂತಾಗಿದೆ.

ಬ್ಲ್ಯಾಕ್ ಫಂಗಸ್ ಔಷಧದ ಸಂಶೋಧಕ ಗಂಗೊಳ್ಳಿಯ ಶ್ರೀಕಾಂತ್ ಎ ಪೈ!
ಮಾರಕ ಬ್ಲ್ಯಾಕ್ ಫಂಗಸ್ ಗೆ ಲೊಫೊಸೋಮಲ್ ಆ್ಯಂಪೊಟೆರಿಸಿನ್ ಬಿ ಔಷಧವನ್ನು ದೇಶಾದ್ಯಂತ ಬಳಸಲಾಗುತ್ತಿದೆ. ಆದರೆ ಈ ಔಷಧವನ್ನು ಭಾರತದಲ್ಲಿ 2010-11ನೇ ಸಾಲಿನಲ್ಲಿ ಅಭಿವೃದ್ಧಿಪಡಿಸಿದವರು ಕುಂದಾಪುರ ತಾಲೂಕಿನ ಗಂಗೊಳ್ಳಿ ಮೂಲದ ಶ್ರೀಕಾಂತ್ ಅಣ್ಣಪ್ಪ ಪೈ.

ಮುಂಬೈನ ಭಾರತ್ ಸೀರಮ್ಸ್ ಹಾಗೂ ವ್ಯಾಕ್ಸಿನ್ ಲಿಮಿಟೆಡ್ ಕಂಪೆನಿಯ ಸಂಶೋಧನಾ ಮತ್ತು ಅಭಿವೃದ್ಧಿ ತಂಡದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗಕ್ಕೆ ತುತ್ತಾದವರ ಜೀವ ಉಳಿಸುವ ಕಾರ್ಯದಲ್ಲಿ ಲೊಫೊಸೋಮಲ್ ಆ್ಯಂಪೊಟೆರಿಸಿನ್ ಬಿ ಔಷಧ ಪ್ರಮುಖ ಪಾತ್ರವಹಿಸಿದೆ. ಇದು ಕರಾವಳಿ ಕನ್ನಡಿಗನ ಹೆಮ್ಮೆಯ ಸಾಧನೆ ಎಂದು ಎಲ್ಲರೂ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ ಎಂಬುದಾಗಿ ವರದಿ ತಿಳಿಸಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ಪ್ರದೇಶವಾದ ಗಂಗೊಳ್ಳಿ ಶ್ರೀಕಾಂತ್ ಅಣ್ಣಪ್ಪ ಪೈ ಅವರ ಹುಟ್ಟೂರಾಗಿದೆ. ಗಂಗೊಳ್ಳಿ, ಕುಂದಾಪುರದಲ್ಲಿ ಪ್ರೌಢ ಹಾಗೂ ಪಿಯುಸಿ ಶಿಕ್ಷಣ ಪೂರೈಸಿದ್ದ ಶ್ರೀಕಾಂತ್ ಪೈ ಅವರು ಬೆಂಗಳೂರಿನಲ್ಲಿ ಫಾರ್ಮಸಿ ಶಿಕ್ಷಣ ಪಡೆದುಕೊಂಡು, ನಂತರ ಮಣಿಪಾಲದಲ್ಲಿ ಸ್ನಾತಕೋತ್ತರ ಪಡೆದಿದ್ದರು.

ಬಳಿಕ ಮುಂಬೈಗೆ ತೆರಳಿದ ಶ್ರೀಕಾಂತ್ ಪೈ ಅವರು ಕೆಲಸಕ್ಕಾಗಿ ಹುಡುಕಾಟ ನಡೆಸಿದ್ದರು. ಹಲವಾರು ಸಂದರ್ಶನಕ್ಕೆ ಹೋಗಿ, ಕೊನೆಗೆ ಭಾರತ್ ಸೀರಮ್ಸ್ ನಲ್ಲಿ ಉದ್ಯೋಗ ದೊರಕಿರುವುದಾಗಿ ಶ್ರೀಕಾಂತ್ ಪೈ ತಮ್ಮ ನೆನಪಿನ ಬುತ್ತಿಯನ್ನು ಬಿಚ್ಚಿಟ್ಟಿದ್ದಾರೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.