ಕರಾವಳಿಗೆ ಚಂಡಮಾರುತ ಭೀತಿ
Team Udayavani, Jun 10, 2019, 3:00 AM IST
ಬೆಂಗಳೂರು/ಮಂಗಳೂರು: ಮಾನ್ಸೂನ್ ನಿರೀಕ್ಷೆಯಲ್ಲಿರುವ ಜನರಿಗೆ ಚಂಡಮಾರುತದ ಭೀತಿಯೂ ಕಾಡಲಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಮ್ನ ಒತ್ತಡ ಪ್ರದೇಶ ಇನ್ನಷ್ಟು ತೀವ್ರಗೊಂಡು ಚಂಡಮಾರುತವಾಗಲಿದೆ. ಇದರ ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಭಾರೀ ಗಾಳಿ-ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಸ್ತುತ ನಿರ್ಮಾಣವಾಗಿರುವ ನಿಮ್ನ ಒತ್ತಡ ಮುಂದಿನ 24 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಮಾರ್ಪಾಡಾಗಲಿದೆ. ನಂತರದ 24 ಗಂಟೆಗಳಲ್ಲಿ ಚಂಡಮಾರುತದ ಸ್ವರೂಪ ಪಡೆಯಲಿದ್ದು, ವಾಯವ್ಯದತ್ತ ಚಲಿಸಲಿದೆ. ಭಾನುವಾರ ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ.ವೇಗದವರೆಗೆ ಗಾಳಿ ಬೀಸುತ್ತಿತ್ತು.
ಮಂಗಳವಾರದ ವೇಳೆಗೆ ಇದು 75 ಕಿ.ಮೀ.ವರೆಗೂ ತಲುಪುವ ಸಂಭವ ಇದೆ. ಈಗಾಗಲೇ ಮುಂಗಾರು ಕೇರಳ ಪ್ರವೇಶಿಸಿದ್ದು, ಸೋಮವಾರದೊಳಗೆ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಿಗೆ ಪ್ರವೇಶಿಸಲಿದೆ.
ಹೀಗಾಗಿ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಇದೇ ವೇಳೆ, ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ಭಾರೀ ಗಾಳಿ-ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?