ನಾನೇನು ಸನ್ಯಾಸಿಯಲ್ಲ ,ಶಾಸಕರು ಹೇಳಿದ್ರೆ ಸಿಎಂ ಆಗ್ತೀನಿ !
Team Udayavani, Feb 2, 2018, 2:27 PM IST
ಬೆಳಗಾವಿ: ನಾನೇನು ಸನ್ಯಾಸಿ ಅಲ್ಲ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಬೇಕೆನ್ನುವ ಉತ್ಕಟ ಆಕಾಂಕ್ಷೆಯನ್ನು ಮತ್ತೆ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್ ‘ಯಾರೂ ಬೇಕಾದರೂ ನಾನು ಸಿಎಂ ಹುದ್ದೆಯ ಆಕಾಂಕ್ಷಿ ಎಂದು ಓಡಾಡಬಹುದು. ಆದರೆ ಮುಖ್ಯಮಂತ್ರಿ ಯಾರಾಗಬೇಕು ಎಂದು ನಿರ್ಧರಿಸುವುದು ಶಾಸಕರು ಮತ್ತು ನಮ್ಮ ಹೈಕಮಾಂಡ್’ ಎಂದರು.
‘ಇವಾಗ ಪಕ್ಷದ ಅಧ್ಯಕ್ಷನಾಗಿ ನನ್ನ ಉದ್ದೇಶವೇನೆಂದರೆ ಕಾಂಗ್ರೆಸ್ ಪಕ್ಷವನ್ನು ಬಹುಮತದ ಮೂಲಕ ಮತ್ತೆ ಅಧಿಕಾರಕ್ಕೆ ತರುವುದು. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ನಾಯಕರು ಇದಕ್ಕಾಗಿ ಶ್ರಮಿಸುತ್ತೇವೆ’ ಎಂದರು.
‘ಪಕ್ಷಕ್ಕೆ ಬಹುಮತ ಬಂದಲ್ಲಿ ಮೊದಲು ಸಿಎಲ್ಪಿ ಸಭೆ ಕರೆದು ಅಲ್ಲಿ ಯಾರು ಮುಖ್ಯಮಂತ್ರಿ ಎನ್ನುವುದನ್ನು ತೀರ್ಮಾನಿಸಲಾಗುತ್ತದೆ ಅಲ್ಲಿ ಕೇಂದ್ರದ ವೀಕ್ಷಕರು ಉಪಸ್ಥಿತರಿರುತ್ತಾರೆ’ ಎಂದರು.
‘ಕೆಲವರು ನಮ್ಮನ್ನು ಹೈಕಮಾಂಡ್ ಪಕ್ಷ ಎಂದು ಟೀಕೆ ಮಾಡುತ್ತಾರೆ ಹೌದು ನಮ್ಮದು ಹೈಕಮಾಂಡ್ ಪಕ್ಷ. ಮನೆಗೊಬ್ಬ ಯಜಮಾನ ಬೇಕಲ್ಲ. ಕಾಂಗ್ರೆಸ್ ಪಕ್ಷದ ಯಜಮಾನ ಹೈಕಮಾಂಡ್. ಯಜಮಾನ ಇಲ್ಲದ ಮನೆಯ ಸ್ಥಿತಿ ಹೇಗಿರುತ್ತದೆ ಎನ್ನುವುದು ಗೊತ್ತಿದೆಯಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ