ಅರವಿಂದ ಬೆಲ್ಲದ ಬಗ್ಗೆ ನಾನು ಏನೂ ಮಾತನಾಡಲ್ಲ : ಜಗದೀಶ್ ಶೆಟ್ಟರ್
Team Udayavani, Jun 20, 2021, 3:40 PM IST
ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ ಅವರ ಪೋನ್ ಕದ್ದಾಲಿಕೆ ಆರೋಪ ಹಾಗೂ ರಾಜಕೀಯ ವಿಚಾರ ಕುರಿತು ಪ್ರತಿಕ್ರಿಯಿಸಲಾರೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಅರವಿಂದ ಬೆಲ್ಲದ ಬಗ್ಗೆ ನಾನು ಏನೂ ಮಾತನಾಡಲ್ಲ. ಆ ವಿಚಾರ ರಾಜ್ಯಮಟ್ಟದಲ್ಲಿ ಚರ್ಚೆ ಆಗಿದೆ. ಯಾರಾದರೂ ಕೆಮ್ಮಿದರೂ ಅದಕ್ಕೆ ನಾನು ಹೊಣೆ ಆಗಬೇಕಾದ ಪರಿಸ್ಥಿತಿ ಬಂದಿದೆ. ಒಬ್ಬೊಬ್ಬರ ಸ್ವಭಾವ ಒಂದೊಂದು ರೀತಿ ಇರುತ್ತದೆ. ಓವರ್ ಟೇಕ್ ಮಾಡತ್ತಾ ಇದ್ದಾರೆ ಎನ್ನುವ ಹಾಗಿಲ್ಲ ಎಂದರು.
ಸಿಎಂ ಸ್ಥಾನ ಖಾಲಿಯಿಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ ಅಂತಾ ಬೋರ್ಡ್ ಹಾಕಿಕೊಂಡು ಓಡಾಡುವ ಪರಿಸ್ಥಿತಿ ಬಂದಿದೆ ಎಂದರು.