ನಾನು ಕುರುಬರಿಗೆ ಮಾತ್ರ ಮುಖ್ಯಮಂತ್ರಿ ಅಲ್ಲ:ಸಿದ್ದರಾಮಯ್ಯ
Team Udayavani, Aug 27, 2017, 2:32 PM IST
ಬೆಂಗಳೂರು: ನಾನು ಅಹಿಂದ ವರ್ಗಕ್ಕೆ ಮಾತ್ರ ಮುಖ್ಯಮಂತ್ರಿ ಅಲ್ಲ . ರಾಜ್ಯದ ಆರೂವರೆ ಕೋಟಿ ಜನರಿಗೆ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಅರಮನೆ ಮೈದಾನದಲ್ಲಿ ನಡೆದ ಕುರುಬರ ಸಂಘದ ಸಮಾವೇಶವನ್ನುದ್ದೇಶಿ ಮಾತನಾಡಿದ ಸಿಎಂ ‘ನನ್ನನ್ನು ಕೆಲವರು ಅಹಿಂದ ವರ್ಗಕ್ಕೆ ಮಾತ್ರ ಸಿಎಂ ಎಂದು ವ್ಯಂಗ್ಯ ಮಾಡುತ್ತಾರೆ. ಆದರೆ ನಾನು ಎಲ್ಲಾ ವರ್ಗದ ಪರವಾಗಿ ಕೆಲಸ ಮಾಡಿದ್ದೇನೆ. ನನಗೆ ಅಹಿಂದ ನಾಯಕ ಎನ್ನುವುದರಲ್ಲಿ ಮುಜುಗರವಿಲ್ಲ. ಹಿಂದುಳಿದ ಮತ್ತು ಶೋಷಿತ ವರ್ಗದ ಪರವಾಗಿ ನಾನು ಕೆಲಸ ಮಾಡಿದ್ದೇನೆ ‘ ಎಂದರು.
‘ಇತಿಹಾಸ ಗೊತ್ತಿದ್ದವರು ಇತಿಹಾಸ ನಿರ್ಮಿಸುತ್ತಾರೆ’ ಎಂದು ಅಂಬೇಡ್ಕರ್ ಹೇಳಿದ್ದರು ಎಂದು ಸಿಎಂ ಹೇಳಿದರು.
‘ನಾನು ಆಕಸ್ಮಿಕವಾಗಿ ಕುರುಬ ಜನಾಂಗದಲ್ಲಿ ಹುಟ್ಟಿದೆ. ಆದರೆ ಆರುವರೆ ಕೋಟಿ ಜನರಿಗೆ ಮುಖ್ಯಮಂತ್ರಿಯಾಗಿದ್ದೇನೆ. ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎನ್ನುವ ಕುರಿತು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕಾಗಿದೆ. ಶೋಷಿತ ವರ್ಗದಿಂದ ಬಂದವರು ಸಮಾಜಮುಖೀ ಆಗಿ ಕೆಲಸ ಮಾಡಬೇಕು’ ಎಂದರು.
ಇದೇ ವೇಳೆ ‘ಸಾಮಾಜಿಕ ನ್ಯಾಯಕ್ಕೆ ದೊಡ್ಡ ಪೆಟ್ಟು ಕೊಡಲು ಕೇಂದ್ರ ಮುಂದಾಗಿದೆ’ ಎಂದು ಆರೋಪಿಸಿದರು.
ರಾಯಣ್ಣ ಬ್ರಿಗೆಡ್ಗೆ ವ್ಯಂಗ್ಯ
ಭಾಷಣದ ವೇಳೆ ವೇದಿಕೆಯಲ್ಲಿದ್ದ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಚಾಲಕ, ಮಾಜಿ ಮೇಯರ್, ಬಿಜೆಪಿ ನಾಯಕ ವೆಂಕಟೇಶ್ ಮೂರ್ತಿ ಅವರ ಕಾಲೆಳೆದ ಸಿದ್ದರಾಮಯ್ಯ ವೆಂಕಟೇಶ ಮೂರ್ತಿ ಇಲ್ಲೆ ಇದ್ದಾನೆ,ಈಶ್ವರಪ್ಪ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಡುತ್ತೇನೆ ಅಂತ ಹೋದರು. ಏನಾಯಿತೋ ವೆಂಕಟೇಶ? ‘ಬರೀ ರಾಯಣ್ಣ ಬ್ರಿಗೇಡ್ ಅಂತ ಹೊದ್ರೆ ಏನೂ ಆಗಲ್ಲ. ಸಂಗೋಳ್ಳಿ ರಾಯಣ್ಣ ಹೆಸರಲ್ಲಿ ನಾನು ಅನುದಾನ ನೀಡಿದ್ದೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ