ನಾನು ಮನಸ್ಸು ಮಾಡಿದರೆ ಎಂಎಲ್ಎ, ಎಂಪಿ ಆಗುತ್ತೇನೆ: ರಾಕ್ಲೈನ್ ವೆಂಕಟೇಶ್
Team Udayavani, Jul 10, 2021, 12:43 PM IST
ಬೆಂಗಳೂರು: ಕುಮಾರಸ್ವಾಮಿ ಮನಸ್ಸು ಮಾಡಿದರೆ 100 ಸಿನಿಮಾ ಮಾಡುತ್ತಾರೆ. ನಾನು ಮನಸ್ಸು ಮಾಡಿದ್ರೆ ಎಂಎಲ್ಎ, ಎಂಪಿ ಆಗುತ್ತೇನೆ ಎಂದು ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಹೇಳಿದರು.
ಕುಮಾರಸ್ವಾಮಿ- ಸುಮಲತಾ ಮಾತಿನ ಸಮರದಲ್ಲಿರುವ ಸುದ್ದಿಯಲ್ಲಿರುವ ರಾಕ್ ಲೈನ್ ವೆಂಕಟೇಶ್ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಂಡ್ಯ ರಾಜಕೀಯಕ್ಕೆ ನಾನ್ಯಾಕೆ ಹೋಗಲಿ. ನಾನು ಈಗಲೂ ಬಂದಿಲ್ಲ, ಮುಂದೇನು ಬರಲ್ಲ. ರಾಜ್ಯ ರಾಜಕಾರಣಕ್ಕೆ ನಾನು ಬರುವುದೇ ಇಲ್ಲ. ಮಂಡ್ಯ ರಾಜಕೀಯಕ್ಕೆ ನಾನು ಬರುತ್ತೇನೆ ಎಂಬ ಭಯವೇಕೆ ನಿಮಗೆ ಎಂದು ಜೆಡಿಎಸ್ ನಾಯಕರ ಹೇಳಿಕೆಗೆ ರಾಕ್ಲೈನ್ ತಿರುಗೇಟು ನೀಡಿದರು.
ಇದನ್ನೂ ಓದಿ:ಸತ್ಯದ ಪರವಾಗಿ ನಿಂತಾಗ, ಬಹಳಷ್ಟು ಶತ್ರುಗಳು ಹುಟ್ಟಿಕೊಳ್ಳುತ್ತಾರೆ: ಸುಮಲತಾ
ರಾಜಕಾರಣಕ್ಕೂ ನನಗೂ ಸಂಬಂಧವಿಲ್ಲ.ಸುಮಲತಾ ವಿರುದ್ಧ ಮಾತನಾಡಿದರೂ ಸುಮ್ಮನಿದ್ದೆ. ಆದರೆ ಒಂದು ಹೆಣ್ಣು ಎಂದೂ ನೋಡದೆ ಮಾತನಾಡ್ತಿದ್ದಾರೆ, ಸುಮಲತಾ ಎಷ್ಟೋ ಸಾರಿ ನೊಂದು ಕಣ್ಣೀರು ಹಾಕಿದ್ದಾರೆ. ಇಷ್ಟೆಲ್ಲಾ ಆದ್ರೂ ನಾನು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಅಂಬಿ ಸ್ಮಾರಕ ಬಗ್ಗೆ ಮಾತನಾಡಿದ್ದಕ್ಕೆ ಉತ್ತರ ಕೊಟ್ಟೆ ಎಂದರು.
ದೇವೆಗೌಡರ ಕುಟುಂಬ ಕೂಡ ನನಗೆ ಆತ್ಮೀಯರು, ನಾನ್ಯಾಕೆ ಅವರ ಕುಟುಂಬವನ್ನು ಒಡೆಯಲಿ. ನಾನು ಬೇಕಾದರೆ ಕ್ಷಮೆ ಕೇಳ್ತಿನಿ, ಆದರೆ ಯಾವ ವಿಚಾರಕ್ಕೆಂದು ಹೇಳಲಿ. ನಾನು ಕುಮಾರಸ್ವಾಮಿ ವಿರುದ್ಧ ಮಾತಾಡಿಲ್ಲ, ಕ್ಷಮೆ ಕೇಳುವಂತಹ ವಿಚಾರ ನಾನು ಮಾತಾಡಿಲ್ಲ ಎಂದು ರಾಕ್ ಲೈನ್ ವೆಂಕಟೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ