ಫೋಟೋ ವಿಡಿಯೋ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ: ಸಿಎಂ ಬೊಮ್ಮಾಯಿ


Team Udayavani, Jul 16, 2022, 9:54 AM IST

ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ಚಿತ್ರೀಕರಣ ನಿಷೇಧದ ಆದೇಶ ನನ್ನ ಗಮನಕ್ಕೆ‌ ಬಂದಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರಿ ನೌಕರರು ಬಹಳ ದಿನದಿಂದ ಹೇಳುತ್ತಿದ್ದರು. ಪಾಪ ಅವರು ಹೇಳುವುದರಲ್ಲೂ ಅರ್ಥವಿದೆ. ಕೆಲವು ಹೆಣ್ಣು ಮಕ್ಕಳದೆಲ್ಲ ಫೋಟೋ ತೆಗೆದು, ತೊಂದರೆಯಾಗಿತ್ತು. ಹೀಗಾಗಿ ಅವರು ನಿಷೇಧ ಆದೇಶ ಮಾಡಿದ್ದರು ಎಂದು ಸಿಎಂ ಸುದ್ದಿಗಾರರಿಗೆ ಹೇಳಿದರು.

ಯಾವುದನ್ನು ಮುಚ್ಚಿಡುವಂತ ಪ್ರಶ್ನೆಯೇ ಇಲ್ಲ. ಯಾರು ಏನಾದರೂ ಹೇಳಿಕೊಳ್ಳಲಿ, ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ. ಹೀಗಾಗಿ ಯಾವುದೇ ರೀತಿಯ ನಿರ್ಬಂಧ ಹಾಕಬಾರದು. ಮೊದಲು ಇದ್ದ ರೀತಿಯ ನಿಯಮ ಇರಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ನಿಷೇಧ ಆದೇಶವನ್ನು ವಾಪಾಸ್ ಪಡೆದ ಬಗ್ಗೆ ಸಿಎಂ ಹೇಳಿದರು.

ಬಿಜೆಪಿ ಚಿಂತನ- ಮಂಥನ ಸಭೆಯ ಬಗ್ಗೆ ಮಾತನಾಡಿ, ನಿನ್ನೆ ಇಡೀ ದಿನ ಪ್ರಮುಖರ ಜೊತೆ ಚಿಂತನಾ ಸಭೆಯಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಪಕ್ಷ ಯಾವ ರೀತಿ ಸಮನ್ವಯತೆಯಿಂದ‌ ಹೋಗುವ ಬಗ್ಗೆ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವ ಬಗ್ಗೆ ಚರ್ಚೆಯಾಗಿದೆ ಎಂದರು.

ಇದನ್ನೂ ಓದಿ:ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ: ತಡರಾತ್ರಿ ಆದೇಶ ಹಿಂಪಡೆದ ಸರ್ಕಾರ

ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ದೊಡ್ಡಬಳ್ಳಾಪುರದಲ್ಲಿ ದೊಡ್ಡ ರಾಲಿ ಮಾಡಲು ನಿರ್ಧಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತೇನೆ. ದೊಡ್ಡಬಳ್ಳಾಪುರದಲ್ಲಿ ಪಕ್ಷ ವಿಶೇಷ ರಾಲಿ ಮಾಡಲು ತೀರ್ಮಾನ ಮಾಡಿದ್ದೇವೆ. ಸರ್ಕಾರಿ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಲಿದೆ ಎಂದರು.

ಸಭೆ ನಡುವೆ ನಿನ್ನೆ ಪ್ರವಾಹ ಪೀಡಿತ ಜಿಲ್ಲೆಗಳ ಡಿಸಿಗಳ ಜೊತೆ ಮಾತಾಡಿದ್ದೇನೆ. ಅಲ್ಲಿನ ಸ್ಥಳೀಯ ನದಿಗಳ ಪ್ರವಾಹದ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ನದಿ ಪಾತ್ರದ ಪಕ್ಕದಲ್ಲಿ ಇರುವವರ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಆಶ್ರಯ ಕೇಂದ್ರಗಳನ್ನು ಕೂಡಲೇ ತೆರೆಯಲು ಸೂಚನೆ ನೀಡಿದ್ದೇನೆ. ಮನೆಗಳು ಬಿದ್ದಲ್ಲಿ ಕೂಡಲೇ ಪರಿಹಾರ ಕೊಡುವಂತೆ ಸೂಚನೆ ನೀಡಿದ್ದೇವೆ. ಇದಕ್ಕೆಲ್ಲದ್ದಕ್ಕೂ ಹಣ ಒದಗಿಸಿದ್ದೇನೆ. ಮೂಲಭೂತ ಸೌಕರ್ಯಕ್ಕಾಗಿ 500 ಕೋಟಿ ಒದಗಿಸಿದ್ದೇನೆ. ಮನೆಗಳನ್ನು ಕಟ್ಟಲು ಹಣ ಹೆಚ್ಚಿಗೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಬೆಳೆ ಪರಿಹಾರಕ್ಕಿಂತ ಹೆಚ್ಚು ಮಾಡಿದ್ದೇವೆ. ಪ್ರವಾಹದ ಸಂದರ್ಭದಲ್ಲಿ ತೊಂದರೆಗೀಡಾದವರ ನೆರವಿಗೆ ಸರ್ಕಾರ ಕೂಡಲೇ ಧಾವಿಸಲಿದೆ. ಆಮೇಲೆ ಸೂಕ್ತವಾದ ಪರಿಹಾರವನ್ನು ಕೂಡ ನಮ್ಮ ಸರ್ಕಾರ ಕೊಡಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.