ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು, ಆದರೆ ನಾನು ಭೇಟಿ ಮಾಡಿಲ್ಲ: ಡಿ.ಕೆ. ಶಿವಕುಮಾರ್


Team Udayavani, Mar 27, 2021, 1:19 PM IST

d k shivakumar

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಸಿಡಿಯಲ್ಲಿದ್ದ ಯುವತಿ ಇಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ತಾನು ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದಾಗಿ ಹೇಳಿಕೊಂಡಿದ್ದಾಳೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ ಹೆಣ್ಣು ಮಗಳು ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ ಎಂದರು.

ಇದನ್ನೂ ಓದಿ:ಜಾರಕಿಹೊಳಿ ಹೆಸರು ಬರೆದಿಟ್ಟು ನಾನು ಸಾಯ್ಬೇಕು ಅನಿಸ್ತಿದೆ: ಸಿಡಿ ಲೇಡಿಯ ಮತ್ತೊಂದು ವಿಡಿಯೋ

ಸಂಕಷ್ಟ ಹೇಳಿಕೊಂಡು ಬಂದವರಿಗೆ ನಾವು ಸಹಾಯ ಮಾಡುತ್ತೇವೆ. ದಿನ ಬೆಳಗಾದರೆ ನನ್ನ ಮನೆ ಬಳಿ ಬಂದು ನೋಡಿ. ಅನೇಕರು ಹಣಕಾಸು ಸಮಸ್ಯೆ, ಸರ್ಕಾರದಿಂದ ತೊಂದರೆ, ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅದೇ ರೀತಿ ಯಾರು ಬೇಕಾದರೂ ಬಂದು ಭೇಟಿ ಮಾಡಬಹುದು ಎಂದರು.

ಒಂದು ವೇಳೆ ನಮ್ಮಿಂದ ಯಾರಿಗಾದರೂ ತೊಂದರೆಯಾದರೆ ಆಡಳಿತ ಪಕ್ಷದವರ ಬಳಿ ಹೋಗುತ್ತಾರೆ. ಅದೇ ರೀತಿ ಆ ಯುವತಿ ಬಂದಿರಬಹುದು. ನಾನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಒಂದು ವೇಳೆ ಆಕೆ ಬಂದರೂ ನಾನು ಪರಿಶೀಲನೆ ಮಾಡುತ್ತೇನೆ. ನಮ್ಮ ಸರ್ಕಾರದ ಶಾಸಕರನ್ನು ಸೆಳೆಯುತ್ತೇವೆ ಎಂದಾಗ ಅವರನ್ನು ಟ್ರ್ಯಾಕ್ ಮಾಡಿದ್ದು ನಿಜ. ಯಾರು ಯಾರ ಜತೆ ಮಾತನಾಡುತ್ತಿದ್ದಾರೆ, ಎಲ್ಲಿ ಹೋಗುತ್ತಿದ್ದಾರೆ ಎಂದು ಗಮನಿಸಿದ್ದೆವು. ಆದರೆ ಇದು ಅವರ ವೈಯಕ್ತಿಕ ವಿಚಾರ. ಅದರ ಅವಶ್ಯಕತೆ ನಮಗಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಂದಿದ್ದರಲ್ಲಿ ಅಚ್ಚರಿ ಅನಿಸಿಲ್ಲ: ಸೋಮಶೇಖರ್

ನರೇಶ್ ಮಾಧ್ಯಮದ ವ್ಯಕ್ತಿ. ನನಗೆ ಪರಿಚಯಸ್ಥ. ನನಗೆ ಬೇಕಾದ ಹುಡುಗ. ಅವರ ಮನೆಗೂ ಹೋಗಿದ್ದೇನೆ. ಅನೇಕ ಬಾರಿ ಭೇಟಿ ಮಾಡಿದ್ದು, ಅನೇಕ ವಿಚಾರಗಳನ್ನು ಆತ ಹಂಚಿಕೊಂಡಿದ್ದ ಎಂದರು.

ರಮೇಶ್ ಜಾರಕಿಹೊಳಿ ಅವರು ನನ್ನನ್ನು ಸ್ಮರಿಸಿಕೊಂಡರೆ, ನಾನ್ಯಾಕೆ ಬೇಡ ಎನ್ನಲಿ. ನನ್ನ ಬಗ್ಗೆ ಅವರಿಗೆ ಅನುಕಂಪ ಇರುವುದಕ್ಕೆ ಬಹಳ ಸಂತೋಷ ಎಂದ ಅವರು, ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ ಎಂದರು.

ತಮಿಳುನಾಡು ಚುನಾವಣೆ ಪ್ರಚಾರದ ಬಗ್ಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ಅಕ್ಕ ಪಕ್ಕದಲ್ಲಿ ತಮಿಳುನಾಡಿನ ಕೇಲವು ಭಾಗಗಳಿದ್ದು, ನಮ್ಮ ಪಕ್ಷದ ಸ್ನೇಹಿತರು ಅಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದು, ಅವರ ಪರವಾಗಿ ಪ್ರಚಾರ ಮಾಡಲು ನಾನು ಹೋಗುತ್ತಿದ್ದೇನೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.