ಸಂಪುಟದಿಂದ ನನ್ನ ಕೈ ಬಿಡುವ ವಿಚಾರ ಗೊತ್ತಿಲ್ಲ: ದೇಶಪಾಂಡೆ
Team Udayavani, Jul 4, 2019, 3:00 AM IST
ಯಾದಗಿರಿ: “ನಾನು 50 ವರ್ಷದಿಂದ ರಾಜಕೀಯದಲ್ಲಿದ್ದು, ವಿಧಾನಸಭೆಯಲ್ಲಿ ಹಿರಿಯ ಸಚಿವ ಹಾಗೂ ಶಾಸಕನಾಗಿದ್ದೇನೆ. ಈವರೆಗೆ ನನ್ನನ್ನು ಮಂತ್ರಿ ಮಾಡುವಂತೆ ಯಾರನ್ನೂ ಕೇಳಿ ಕೊಂಡಿಲ್ಲ. ಮುಂದೆ ಕೂಡ ಕೇಳಲ್ಲ. ಸಂಪುಟದಿಂದ ನನ್ನನ್ನು ಕೈಬಿಡುವ ವಿಚಾರ ಗೊತ್ತಿಲ್ಲ’ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಯರಗೋಳದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಸಂಪುಟ ಪುನಾರಚನೆ ವೇಳೆ ನನ್ನನ್ನು ಕೈ ಬಿಡುವ ಕುರಿತು ಯಾರೂ ಸಂಪರ್ಕಿಸಿಲ್ಲ. ನನಗೆ ಯಾವ ಕಚೇರಿಯ ಸಂಪರ್ಕವೂ ಇಲ್ಲ. ಸಮಾಧಾನದಿಂದ ಇರುವಂತೆ ಹೇಳಿದರೆ ನನಗೆ ಸಂತೋಷ. ನಾನೇನು ತಲೆಕೆಡಿಸಿಕೊಳ್ಳಲ್ಲ. ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸದಿರುವ ಹಿನ್ನೆಲೆಯಲ್ಲಿ ಶಾಸಕ ಆನಂದಸಿಂಗ್ ರಾಜೀನಾಮೆ ನೀಡಿದ್ದಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ’ ಎಂದರು.
“80 ಕೋಟಿ ಕೊಟ್ಟರೆ ರಮೇಶ ಜಾರಕಿಹೊಳಿಯವರು ಪಕ್ಷದಲ್ಲಿಯೇ ಉಳಿಯುತ್ತಿದ್ದರು ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹಾದೇವ ಹೇಳಿದ್ದಾರೆ. ಆದರೆ, ಯಡಿಯೂರಪ್ಪ ತಾವು ಕುದುರೆ ವ್ಯಾಪಾರ ನಡೆಸುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ರಾಜಕೀಯದಲ್ಲಿ ಪುರಾವೆ ಇಲ್ಲದೇ ಮಾತನಾಡಕೂಡದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ