ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇನೆ: ಡಿಕೆಶಿ
Team Udayavani, Jun 22, 2020, 9:25 PM IST
ಬೆಂಗಳೂರು: ಕನಕಪುರ ಶಾಸಕನಾಗಿ ನನ್ನ ಕರ್ತವ್ಯ ಮಾಡಿದ್ದೇನೆ. ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನ ಬಗ್ಗೆ ಏನಾದರೂ ಎಪಿಸೋಡ್ ಬಿಡುಗಡೆ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಮನಗರ ಉಸ್ತುವಾರಿ ಹಾಗೂ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಗೆ ತಿರುಗೇಟು ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕನಕಪುರದಲ್ಲಿ ಲಾಕ್ಡೌನ್ ಘೋಷಿಸುವ ಅಧಿಕಾರ ಡಿಕೆಶಿಗೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಹೇಳಿದ್ದರು.
ಕನಕಪುರ ನನ್ನ ಮತಕ್ಷೇತ್ರ. ಶಾಸಕನಾಗಿ ಕ್ಷೇತ್ರದಲ್ಲಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಅಶ್ವತ್ಥನಾರಾಯಣ ಅವರು ಸರಕಾರದ ಭಾಗವಾಗಿದ್ದಾರೆ. ಅವರು ದೊಡ್ಡವರು ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡುವ ಅಧಿಕಾರ ಸರಕಾರಕ್ಕಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ ಎಂದರು.