ನಾನು ಯಾರಿಗೂ ಸೂಚನೆ ನೀಡಿಲ್ಲ ಲೋಕಾಯುಕ್ತ ತನಿಖೆ ಆಗಲಿ: ಸಿಎಂ
Team Udayavani, Oct 30, 2022, 10:23 PM IST
ಬೆಂಗಳೂರು: ಪತ್ರಕರ್ತರಿಗೆ “ಉಡುಗೊರೆ’ ಕಾಂಗ್ರೆಸ್ನ ಟೂಲ್ಕಿಟ್ನ ಪರಿಣಾಮ. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ನಾನು ಯಾರಿಗೂ ಸೂಚನೆ ನೀಡಿಲ್ಲ. ಲೋಕಾಯುಕ್ತ ತನಿಖೆ ಆಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರಿಗೆ ಗಿಫ್ಟ್ ನೀಡಿರುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಕಾಂಗ್ರೆಸ್ಸಿನ ಟೂಲ್ ಕಿಟ್ನ ಪರಿಣಾಮ. ನಾನು ಯಾರಿಗೂ ಸೂಚನೆ ನೀಡಿಲ್ಲ. ಕಾಂಗ್ರೆಸ್ ಇದ್ದಾಗ ಹಲವಾರು ಜನರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.
ಪತ್ರಿಕೆಗಳಲ್ಲಿ ವರದಿಯೂ ಆಗಿದೆ. ಐ ಫೋನ್ ಲ್ಯಾಪ್ಟಾಪ್, ಬಂಗಾರದ ನಾಣ್ಯಗಳನ್ನೇ ಕೊಟ್ಟಿದ್ದಾರೆ. ಇವರಿಗೆ ಮಾತನಾಡಲು ಯಾವ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆಯಾಗುತ್ತದೆ. ಇದರ ಅರ್ಥ ಎಲ್ಲ ಪತ್ರಕರ್ತರು ಉಡುಗೊರೆ ಪಡೆದಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ. ನಿನ್ನೆ ಕಾಂಗ್ರೆಸ್ ವಕ್ತಾರ ಬಹಳ ಕೆಟ್ಟದಾಗಿ ಅದನ್ನು ವ್ಯಾಖ್ಯಾನ ಮಾಡಿದ್ದು ಅದನ್ನು ನಾನು ಖಂಡಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ