ವಿಶ್ವನಾಥ್ ಬಗ್ಗೆ ಮಾತಾಡಿದ್ರೆ ನನ್ನ ನಾಲಿಗೆಯೇ ಹೊಲಸಾಗುತ್ತದೆ: ರೇಣುಕಾಚಾರ್ಯ ತಿರುಗೇಟು
Team Udayavani, Jun 18, 2021, 12:39 PM IST
ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಾದ ಎಚ್ ವಿಶ್ವನಾಥ್ ಮತ್ತು ಎಂಪಿ ರೇಣುಕಾಚಾರ್ಯ ನಡುವಿನ ಆರೋಪ- ಪ್ರತ್ಯಾರೋಪಗಳು ಮುಂದುವರಿದಿದೆ. “ನಾನು ಪ್ಯೂರ್ ಬಿಜೆಪಿ, ರೇಣುಕಾಚಾರ್ಯ ಮಿಕ್ಸ್ ಬಿಜೆಪಿ” ಎಂಬ ಹೆಚ್ ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.
ವಿಶ್ವನಾಥ್ ಅವರ ಆಡಿಯೋ, ವೀಡಿಯೋ ನನ್ನ ಬಳಿ ಇದೆ. ಅವರಿಗೆ ನಾಲಿಗೆ ಸಂಸ್ಕೃತಿ ಎಷ್ಟಿದೆ ಎಂದು ಗೊತ್ತಿದೆ. ಅವರು ವಯಸ್ಸಿನಲ್ಲಿ ಹಿರಿಯರು. ಆದರೂ ಅವರ ಬಾಯಲ್ಲಿ ಬರುವ ಆ ರೀತಿಯ ಶಬ್ದ ಮಾತ್ರ ಅಸಂಬದ್ಧ. ಅವರ ಆಡಿಯೋ ವೀಡಿಯೋ ಕೇಳಿದರೆ ಎಷ್ಟು ಅಸಂಬದ್ಧ ಎಂದು ಗೊತ್ತಾಗುತ್ತದೆ. ಅವರ ಬಗ್ಗೆ ಮಾತಾಡಿರದೆ ನನ್ನ ನಾಲಿಗೆಯೇ ಹೊಲಸಾಗುತ್ತದೆ ಎಂದು ರೇಣುಕಾಚಾರ್ಯ ತಿರುಗೇಟು ನೀಡಿದರು.
ಇದನ್ನೂ ಓದಿ:ಬಹುಪರಾಕ್ ಹಾಕುವ ಮನುಷ್ಯ ನಾನಲ್ಲ: ಸ್ವಪಕ್ಷದವರ ವಿರುದ್ಧ ಮತ್ತೆ ಹಳ್ಳಿಹಕ್ಕಿ ಗುಟುರು
ವಿಶ್ವನಾಥ್ ನಿನ್ನೆ ಮುಖ್ಯಮಂತ್ರಿ ಗಳ ವಿರುದ್ದವಾಗಿ ಮಾತಾಡಿರು, ಅದಕ್ಕೆ ಹಗುರವಾಗಿ ಮಾತಾಡಬೇಡಿ ಎಂದು ನಾವು ಹೇಳಿದ್ದೆವು ಎಂದರು.
ವಿಜಯೇಂದ್ರ ಮೇಲೆ ಕಿಕ್ ಬ್ಯಾಕ್ ಆರೋಪ ವಿಚಾರವಾಗಿ ಮಾತನಾಡಿದ ಅವರು, ಟೆಂಡರ್ ಪಾರದರ್ಶಕವಾಗಿದೆ. ಎಲ್ಲಾ ವಿವರವೂ ವೆಬ್ ಸೈಟ್ ನಲ್ಲಿ ಸಿಗುತ್ತದೆ. ಅವರು ಹತಾಶೆಯಿಂದ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.
ನರ್ಸ್ ಜಯಲಕ್ಷ್ಮಿ ಕಥೆ ಬಗ್ಗೆ ಗೊತ್ತಾ ಎಂಬ ವಿಶ್ವನಾಥ್ ಹೇಳಿಕೆ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ರೇಣುಕಾಚಾರ್ಯ ಮಾಧ್ಯಮ ಪ್ರತಿನಿಧಿಗಳ ಮೇಲೆ ಗರಂ ಆದರು. ಅದು ವೈಯಕ್ತಿಕ ವಿಷಯ, ಆ ಬಗ್ಗೆ ಮಾತನಾಡಬೇಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..