ಅರುಣ್ ಸಿಂಗ್‍ಗೆ ಬಿಜೆಪಿ ನಾಯಕರ ಷಡ್ಯಂತ್ರದ ಮಾಹಿತಿ ನೀಡಿದ್ದೇನೆ: ಯತ್ನಾಳ್

ನಾನು ಸಿಎಂ ಗುಂಗಿನಲ್ಲಿರುವ ವ್ಯಕ್ತಿಯಲ್ಲ....ಹೈಕಮಾಂಡ್ ಸೂಚಿಸಿದರೆ ಬಿಎಸ್‍ವೈ ಜೊತೆ ಹೊಂದಾಣಿಕೆ

Team Udayavani, Nov 9, 2022, 7:41 PM IST

yatnal

ವಿಜಯಪುರ : ಅರುಣ್ ಸಿಂಗ್‍ ಭೇಟಿಯ ಮಾತುಕತೆ ಸಂದರ್ಭದಲ್ಲಿ ನನ್ನ ವಿರುದ್ಧ ನಡೆದಿದ್ದ ಷಡ್ಯಂತ್ರದ ಬಗ್ಗೆ ಮಾಹಿತಿ ನೀಡಿದ್ದೇನೆ. ವಿಜಯಪುರ ಪಾಲಿಕೆಯ ಚುನಾವಣೆ ಫಲಿತಾಂಶದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು ಬಂದಿದೆ ಎಂದು ಅರುಣ್ ಸಿಂಗ್‍ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಬಿಎಸ್ ವೈಗೆ ಮಸಿ ಬಳಿಯಲು ಬಿಜೆಪಿಯೇ ಯತ್ನಾಳರನ್ನು ಮುಂದೆ ಬಿಟ್ಟಿದೆಯೇ?: ಕಾಂಗ್ರೆಸ್

ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಏನೆಲ್ಲ ಷಡ್ಯಂತ್ರ ನಡೆದಿದೆ ಎಂಬುದು ಪಕ್ಷದ ಹೈಕಮಾಂಡ್‍ಗೆ ಗೊತ್ತಿದೆ. ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶದಿಂದ ರಾಜ್ಯ ಹಾಗೂ ಕೇಂದ್ರದ ನಾಯಕರು ಸಂತಸಪಟ್ಟಿದ್ದಾರೆ ಎಂದರು.

ಕಾಂಗ್ರೆಸ್ಸಿನ ಶಾಸಕರೊಬ್ಬರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಚುನಾವಣೆ ಮಾಡದೆ ಪಕ್ಷೇತರ ಅಭ್ಯರ್ಥಿಗಳ ಪರ ಚುನಾವಣೆ ಮಾಡಿದರು ಎಂದು ಪರೋಕ್ಷವಾಗಿ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ವಿರುದ್ದ ಗುಡುಗಿದ ಯತ್ನಾಳ್, ಇಂಥ ವ್ಯಕ್ತಿ ವಿಜಯಪುರ ನಗರದಿಂದ ಸ್ಪರ್ಧೆ ಮಾಡಲು ಬಯಸಿದ್ದಾರೆ. ಇಂಥ ಬ್ಲಾಕ್ ಮೇಲ್ ವ್ಯಕ್ತಿಗಳಿಗೆ ನಾನು ಹೆದರುವುದಿಲ್ಲ ಎಂದು ಕುಟುಕಿದರು.

ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗಾಗಿ ಸಂಕಲ್ಪ ಯಾತ್ರೆಗಾಗಿ ಜಿಲ್ಲೆಗೆ ಆಗಮಿಸಿದ್ದ ಬಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್‍ ಭೇಟಿ ಸಂದರ್ಭದಲ್ಲಿ ನಾನು ನಗರದಲ್ಲಿ ಇರಲಿಲ್ಲ. ನಗರದ ಮಾರ್ಗವಾಗಿ ಚಿತ್ರದುರ್ಗಕ್ಕೆ ತೆರಳುವಾಗ ಅರುಣಸಿಂಗ್ ಅಕಸ್ಮಿಕವಾಗಿ ನಮ್ಮ ಹೈಪರ್ ಮಾರ್ಟ್‍ನಲ್ಲಿ ಪರಸ್ಪದ ಭೇಟಿ ಆಗಿದ್ದೆವು. ಈ ಹಂತದಲ್ಲಿ ನನ್ನ ವಿರುದ್ಧ ನಡೆದಿರುವ ಷಡ್ಯಂತ್ರದ ಬಗ್ಗೆ ವಿವರಿಸಿದ್ದೇನೆ. ಇದರ ಹೊರತಾಗಿ ಹೆಚ್ಚಿನ ಚರ್ಚೆಗಳು ನಡೆಯಲಿಲ್ಲ ಎಂದರು.

ಗುಜರಾತ್ ಚುನಾವಣೆಯ ಬಳಿಕ ಯತ್ನಾಳ್ ಸಿಎಂ ಆಗುತ್ತಾರೆ ಎಂಬ ಸುದ್ದಿಯ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಯಾವಾಗಲೂ ಆ ಗುಂಗಿನಲ್ಲಿ ಇರಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸುತ್ತೇನೆಂಬ ಸಂಕೇತವನ್ನು ಕೊಟ್ಟಿದ್ದಾರೆ ಅಷ್ಟೇ ಎಂದರು.

ಮುಂದಿನ ವಿಧಾನಸಭೆ ಚುನಾವಣೆ ವೇಳೆ ನಾನು ಸ್ಟಾರ್ ಕ್ಯಾಂಪೇನರ್ ಆಗಿ ಪ್ರಚಾರದಲ್ಲಿರುತ್ತೇನೆ. ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ಮಾಡಲು ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ ಅವರಿಗೆ ನೀಡಿದರೆ ಎಂದಾಗ, ನಾನು ನಾನು ಪ್ರತ್ಯೇಕವಾದಿ ನಾಯಕನಲ್ಲ, ಪ್ರತ್ಯೇಕವಾಗಿ ಪ್ರಚಾರ ಮಾಡುವುದಿಲ್ಲ. ಪಕ್ಷದ ಎಲ್ಲ ನಾಯಕರೊಂದಿಗೆ ಪ್ರಚಾರ ಮಾಡುತ್ತೇನೆ ಎಂದರು.

ಮುಂಬರುವ ಚುನಾವಣೆಯಲ್ಲಿ ಯತ್ನಾಳ್ ಶಕ್ತಿಯನ್ನ ಜನಪ್ರಿಯತೆಯನ್ನು ಉಪಯೋಗ ಮಾಡಿಕೊಳ್ಳುತ್ತೇವೆ ಎಂದು ಅರುಣಸಿಂಗ್ ಹೇಳಿದ್ದಾರೆ. ಎಲ್ಲ ನದಿಗಳು ಹರಿದು ಸಾಗರ ಸೇರುವ ಹಾಗೆ ನಾವೆಲ್ಲ ನಾಯಕರು ಸೇರಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ. ಯಡಿಯೂರಪ್ಪ ಹಾಗೂ ನನ್ನ ಮಧ್ಯೆ ಹೊಂದಾಣಿಕೆ ವಿಷಯದಲ್ಲಿ ಕೇಂದ್ರದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಿರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.