ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
Team Udayavani, Aug 11, 2022, 10:57 AM IST
ಬೆಂಗಳೂರು: ಸಿಎಂ ಬದಲಾವಣೆ ಕುರಿತಂತೆ ಕಾಂಗ್ರೆಸ್ ನ ಟ್ವೀಟ್ ಹೊಸದೇನಲ್ಲ. ಕಾಂಗ್ರೆಸ್ ನವರ ಮನಸ್ಸಲ್ಲಿ ಅತಂತ್ರವಿದೆ. ಆದರೆ ಜನರು ಇದನ್ನು ಒಪ್ಪುವುದಿಲ್ಲ. ನನಗೆ ಸತ್ಯ ಏನೆಂದು ಗೊತ್ತಿದೆ, ಈ ಚರ್ಚೆಯಲ್ಲಿ ಯಾವುದೇ ರೀತಿಯ ಆಧಾರವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರಿಂದ ನನ್ನ ಒಂದು ನಿರ್ಣಯಗಳು ಗಟ್ಟಿಯಾಗುತ್ತಿವೆ. ಬರುವಂತ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಕಡೆ, ಎರಡು ತಾಸು ಹೆಚ್ಚು ಕೆಲಸ ಮಾಡುತ್ತೇನೆ. ಬರುವಂತಹ ದಿನಗಳಲ್ಲಿ ಪಕ್ಷದ ಬಲವರ್ಧನೆ ಮತ್ತು ಜನರ ಬಳಿಗೆ ಹೋಗುವ ದೊಡ್ಡ ಪ್ರಮಾಣದಲ್ಲಿ ಮಾಡುತ್ತೇನೆ ಎಂದರು.
ಕಾಂಗ್ರೆಸ್ ನವರು ಏನೋ ಎಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರವಿದೆ. ಅದನ್ನು ರಾಜ್ಯದ ತುಂಬಾ ಹರಡಲು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಅದನ್ನು ರಾಜ್ಯದ ಜನರು ನಂಬುವುದಿಲ್ಲ. ನಾನು ಸ್ಥಿತಪ್ರಜ್ಞೆಯವನಾಗಿದ್ದೇನೆ. ಯಾಕೆಂದರೆ ನನಗೆ ಸತ್ಯ ಏನೆಂದು ಗೊತ್ತಿದೆ. ಇದೊಂದು ರಾಜಕೀಯ ಪ್ರೇರಿತ ಎಂಬುದು ನನಗೆ ಗೊತ್ತಿದೆ. ಇದರಿಂದ ಇನ್ನು ಹೆಚ್ಚಿನ ಕೆಲಸವನ್ನು ಜನರಿಗೆ ರಾಜ್ಯದ ಹಿತಾಸಕ್ತಿ ಮಾಡಲು ಪ್ರೇರಣೆ ಬಂದಿದೆ. ಬರುವಂತ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಯವನ್ನು ಅಭಿವೃದ್ಧಿ ಕಡೆ ಕೊಡುತ್ತೇನೆ ಎಂದರು.
ಸುರೇಶ್ ಗೌಡ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕೆಲವರ ಮಾತಿಗೆಲ್ಲ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಪರೋಕ್ಷವಾಗಿ ಸುರೇಶ್ ಗೌಡ ಮಾತು ನಮಗೇನು ಲೆಕ್ಕಕ್ಕೆ ಇಲ್ಲ ಎಂದರು.
ಇದನ್ನೂ ಓದಿ:ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳ ಬಂಧನ
ಚಾಮರಾಜ ಪೇಟೆ ಮೈದಾನ ಕಂದಾಯ ಇಲಾಖೆಗೆ ಸೇರಿದೆ. ಸರ್ಕಾರದ ನೀತಿ ನಿಯಮದ ಪ್ರಕಾರ ಅಲ್ಲಿ ಕಾರ್ಯಕ್ರಮ ನಡೆಯುವ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ ಎಂದರು.
ಜಮೀರ್ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿ, ಯಾರು ಏನೇ ಹೇಳಿದರೂ ಅದು ನನಗೆ ಮುಖ್ಯವಲ್ಲ. ಕಾನೂನಿನ ಪ್ರಕಾರ ಏನು ಮಾಡಬೇಕು ಅದು ಆಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ