ನಾನು-ಸಿದ್ದು ವೈರಿಗಳಲ್ಲ
Team Udayavani, Dec 15, 2019, 3:05 AM IST
ಬೆಂಗಳೂರು: “ನಾನು ಮತ್ತು ಸಿದ್ದರಾಮಯ್ಯ ವೈರಿಗಳಲ್ಲ. ಶತ್ರುತ್ವ ಅಂದರೆ ಇಂಡಿಯಾ, ಪಾಕಿಸ್ತಾನದ್ದು. ನಾನು, ಸಿದ್ದರಾಮಯ್ಯ ಇಂಡಿಯಾ, ಪಾಕಿಸ್ತಾನವಲ್ಲ. ನನ್ನ ಹಾಗೂ ಸಿದ್ದರಾಮಯ್ಯರನ್ನು ಶತ್ರುಗಳು ಎಂದು ಕರೆಯಬೇಡಿ’ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಚುನಾವಣಾ ರಾಜಕೀಯ ಬೇರೆ, ಸ್ನೇಹ ಬೇರೆ. ನಾವು ಬೆನ್ನಿಗೆ ಚೂರಿ ಹಾಕಿದವರು ಎಂದು ಮಾಧ್ಯಮಗಳು ಹೇಳುತ್ತವೆ. ಆದರೆ, ರಾಷ್ಟ್ರದಲ್ಲಿ, ರಾಜ್ಯದಲ್ಲಿ ಯಾರೂ ಪಕ್ಷಾಂ ತರ ಮಾಡಿಯೇ ಇಲ್ಲವೇ?. ನಮ್ಮ ಯೋಚನಾ ಲಹರಿ ಬೇರೆ ಇರಬಹುದು. ಆದರೆ, ನಾವು ಶತ್ರುಗಳಲ್ಲ. ನನಗೆ ಸಿದ್ದರಾಮಯ್ಯ, ಯಡಿಯೂ ರಪ್ಪ ಹಾಗೂ ಕುಮಾರಸ್ವಾಮಿಯವರ ಮೇಲೂ ಪ್ರೀತಿ ಇದೆ ಎಂದರು.
ಹಠ ಇರದೇ ಹೋದರೆ ರಾಜಕೀಯದಲ್ಲಿ ಏನು ಸಿಗುತ್ತದೆ?. ಭಾರತದಲ್ಲಿ ಇಂದಿರಾ ಗಾಂಧಿಯೇ ಸೋತಿದ್ದಾರೆ. ಸೋಲು, ಗೆಲುವು ರಾಜಕೀಯದಲ್ಲಿ ಸಾಮಾನ್ಯ. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ಸೋತರೂ ದೇವೇಗೌಡರು ರಾಜಕೀಯದಲ್ಲಿ ಇಲ್ವಾ?. ನಾವು ಅವರ ಹಾಗೆ ರಾಜಕೀಯ ಮಾಡುತ್ತೇವೆ ಎಂದರು.
ಆರೋಗ್ಯ ವಿಚಾರಣೆ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರವೂ ರಾಜಕೀಯ ನಾಯಕರು ಹಾಗೂ ಮಠಾಧೀಶರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಅನರ್ಹ ಶಾಸಕ ಎಚ್.ವಿಶ್ವನಾಥ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವ ಎಚ್.ಎಂ.ರೇವಣ್ಣ, ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್