BJPಗೆ ಬರುವವರೆಗೆ ನಾನು ಸೋತಿರಲಿಲ್ಲ…!: ಸೋಮಣ್ಣ ಆಕ್ರೋಶದ ನುಡಿಗಳು
ಏನಾಗುತ್ತೇನೋ ಅನ್ನುವ ಭಯದಲ್ಲಿ ಸೋಲಿಸಿದರು.... ಬೇರೆ ಕ್ಷೇತ್ರದಲ್ಲಿ ನಿಲ್ಲುವ ಸುಳಿವು
Team Udayavani, Oct 8, 2023, 8:34 PM IST
ಮೈಸೂರು:ಬಿಜೆಪಿಗೆ ಬರುವವರೆಗೆ ನಾನು ಸೋತೆ ಇರಲಿಲ್ಲ, ಬಿಜೆಪಿಗೆ ಬಂದಾಗಿನಿಂದ ನಾನು 4-5 ಬಾರಿ ಸೋತೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರ ವಿರುದ್ಧ ವಿ.ಸೋಮಣ್ಣ ಕಿಡಿ ಕಾರಿದ್ದಾರೆ.
ಮೈಸೂರಿನ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಸೋಮಣ್ಣ, ಶ್ರೀನಿವಾಸ್ ಸಾಹೇಬ್ರೆ ನಾನು ಸೋತೆ ಇಲ್ಲ.ಕಾಂಗ್ರೆಸ್ ನಲ್ಲಿ ನಿಂತು ಗೆದ್ದಿದ್ದೇನೆ.ಸ್ವತಂತ್ರ ಅಭ್ಯರ್ಥಿಯಾಗಿ 2 ಬಾರಿ ಗೆದ್ದಿದ್ದೇನೆ, ಬಿಜೆಪಿಗೆ ಬಂದು ಸೋತೆ. ನಾನು ಏನಾಗಿ ಬಿಡುತ್ತೇನೋ ಅನ್ನುವ ಭಯದಲ್ಲಿ ಸೋಲಿಸಿದರು ಎಂದರು.
ನಮ್ಮವರೇ ನಮ್ಮ ಕಾಲು ಎಳೆಯುವುದು ಬಿಡಬೇಕು, ನಮ್ಮವರೇ ನಮ್ಮವರನ್ನು ಮೂಲೆ ಗುಂಪು ಮಾಡವುದನ್ನು ಬಿಡಬೇಕು ಎಂದು ವರುಣ ಕ್ಷೇತ್ರದ ಸೋಲಿಗೆ ಪರೋಕ್ಷವಾಗಿ ಲಿಂಗಾಯತ ಸಮಾಜವನ್ನು ದೂರಿದರು.
ಶರಣರ ಆದರ್ಶಗಳನ್ನ ನಾವು ಬಸವ ಕಲ್ಯಾಣಕ್ಕೆ ಹೋದಾಗ ನೆನಪಿಸಿಕೊಳ್ಳುತ್ತೇವೆ.ಹಲವಾರು ವರ್ಷಗಳಿಂದ ಬಸವಕಲ್ಯಾಣಕ್ಕೂ ನನಗೂ ಸಂಬಂಧ ಇದೆ. ಬಸವಣ್ಣನವರ ಆದರ್ಶಪ್ರಾಯವಾದ ಚಿಂತನೆ ಈಗಲೂ ಇದೆ. ಅನೇಕ ವಿಚಾರ ಮಾತನಾಡಿದರೆ ಕೆಲವರಿಗೆ ಕಸಿವಿಸಿಯಾಗುತ್ತೆ.ಒಬ್ಬನೇ ಒಬ್ಬ ಸೋಮಣ್ಣ ಸಣ್ಣ ಅಪಾಚಾರ ಮಾಡದೆ ಬೆಂಗಳೂರಿನಲ್ಲಿ ಜೀವನ ನಡೆಸುತ್ತಿದ್ದೇನೆ. ಇದಕ್ಕೆ ಕಾರಣ ನಮ್ಮ ಗುರುಗಳು. ಮೈಸೂರಿನಲ್ಲಿ ದೊಡ್ಡ ಮಟ್ಟದ ಚಿಂತನ ಶಿಬಿರಗಳು ನಡೆಯುತ್ತಿರುತ್ತದೆ ಎಂದರು.
ದೇಶಕ್ಕೆ ಮಾದರಿ ನಮ್ಮ ಅನುಭವ ಮಂಟಪ ಅಂತ ದೇಶದ ಪ್ರಧಾನಿ ಹೇಳುತ್ತಾರೆ. ಬುದ್ಧವಂತರಿದ್ದರೆ ಅವರನ್ನ ಮೂಲೆ ಗುಂಪು ಮಾಡುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ಹೊರ ಹಾಕಿದರು.
ಬಿಹಾರದಲ್ಲಿ ಜಾತಿ ಗಣತಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಜಾತಿ ಗಣತಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದ್ದಾರೆ.2015ರಲ್ಲಿ ಜಾತಿ ಗಣತಿ ವರದಿಯನ್ನು ನೋಡಿದರೆ ಆಶ್ಚರ್ಯ ಆಗುತ್ತದೆ. ಈ ಸಮಾಜ ಕವಲುದಾರಿಯಲ್ಲಿ ಹೋಗುವ ಸಾಧ್ಯತೆ ಇದೆ.ಬಸವ ಜಯಂತಿ ಕಾರ್ಯಕ್ರಮ ಎರಡು ದಿನ ನಡೆದಿದೆ. ಬೇರೆಯದನ್ನು ಬಿಟ್ಟು ಅರ್ಹತೆ ಇದೆ ಅಂತಹರಿಗೆ ಅವಕಾಶ ಕೊಡಿ. ನೀವುಗಳು ಒಗ್ಗಟ್ಟಾಗಬೇಕು. ಇಲ್ಲ ಅಂದರೆ ಹೇಳೋರು ಕೇಳೋರು ಇಲ್ಲದಂತಾಗುತ್ತದೆ ಎಂದರು.
ನಮ್ಮಲ್ಲಿ ಎಲ್ಲವೂ ಇದೆ ಅವಕಾಶ ಬಂದಾಗ ಕಣ್ಮುಚ್ಚಿ ಕುಳಿತುಕೊಳ್ಳುತ್ತೇವೆ.ನಾನು ನಿಷ್ಟುರವಾಗಿ ಮಾತನಾಡುತ್ತೇನೆ.ಆದರಿಂದ ಏನಾಗಿದೆ ಎಂಬ ಬಗ್ಗೆ ಚರ್ಚೆ ಬೇಡ. ಕಷ್ಟ ಪಟ್ಟು ಬೆಂಗಳೂರಿನಲ್ಲಿ ಬೆಳೆದಿದ್ದೇನೆ. ಕೆಲಸಗಾರರು ಎಂಬ ಭಾವನೆ ಇದೆ.ತಮಿಳುನಾಡಿಗೆ ಹೋಗಿದ್ದಾಗ ಅಲ್ಲಿನ ಮಂತ್ರಿ ಕೇಳಿದರು, ಗೋವಿಂದರಾಜನಗರ ಯಾಕೆ ಬಿಟ್ಟಿರಿ ಎಂದು. ನಾನು ಬಿಡಲಿಲ್ಲ, ನನ್ನನ್ನ ಬೇರೆ ಕ್ಷೇತ್ರಕ್ಕೆ ಕಳುಹಿಸಿದರು ಎಂದೆ.
ಕರುಣಾ ನಿಧಿ 9 ಭಾರಿ ಗೆದಿದ್ದಾರೆ.ಪ್ರತಿ ಭಾರಿಯೂ ಬೇರೆ ಬೇರೆ ಕ್ಷೇತ್ರಗಳಲ್ಲಿ ಗೆದಿದ್ದಾರೆ. ಅದೇ ರೀತಿ ಮುಂದೆ ನೀವು ಬೇರೆ ಬೇರೆ ಕ್ಷೇತ್ರಕ್ಕೆ ಹೋಗಿ. ಸೋಲಿನಿಂದ ಧೃತಿಗೆಡಬೇಡಿ ಎಂದು ಸಲಹೆ ನೀಡಿದರು’ ಎಂದು ಹೇಳಿ ಮತ್ತೆ ಬೇರೆ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುವ ಸುಳಿವನ್ನು ಸೋಮಣ್ಣ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ