“ಹಂಪಿ ಉತ್ಸವಕ್ಕೆ ಆರ್ಥಿಕ ನೆರವು ನೀಡಲು ಸಿದ್ಧ: ಜನಾರ್ದನ ರೆಡಿ
Team Udayavani, Dec 4, 2018, 6:00 AM IST
ಬೆಂಗಳೂರು: ರಾಜ್ಯ ಸರ್ಕಾರ ಹಂಪಿ ಉತ್ಸವ ನಡೆಸಲು ಮುಂದಾಗದೆ ಕುಂಟು ನೆಪ ಹೇಳುತ್ತಿರುವುದು ದುರದೃಷ್ಟಕರ ಎಂದಿರುವ ಮಾಜಿ ಸಚಿವ ಜಿ.ಜನಾರ್ದನರೆಡ್ಡಿ, ಹಂಪಿ ಉತ್ಸವ ಮೂರು ದಿನ ಅದ್ದೂರಿಯಾಗಿಯೇ ಆಚರಣೆಯಾಗಲಿ. ಅಗತ್ಯಬಿದ್ದರೆ ಆರ್ಥಿಕ ನೆರವು ಸೇರಿ ಎಲ್ಲ ರೀತಿಯ ಸಹಕಾರ, ನೆರವು ನೀಡಲು ಸಿದ್ಧ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ “ಫೇಸ್ಬುಕ್’ನಲ್ಲಿ ಸುದೀರ್ಘವಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜನಾರ್ದನರೆಡ್ಡಿ, ಸರ್ಕಾರ ಹಾಗೂ ಕೆಲ ಸಚಿವರ ಹೆಸರು ಪ್ರಸ್ತಾಪಿಸದೆ ವಾಗ್ಧಾಳಿ ನಡೆಸಿದ್ದಾರೆ. ನಾಡಿನ ನಾನಾ ಕಡೆ ಉತ್ಸವಗಳನ್ನು ಆಚರಿಸಲು ಉತ್ಸಾಹ ತೋರುವ ರಾಜ್ಯ ಸರ್ಕಾರ, ಹಂಪಿ ಉತ್ಸವ ಆಚರಣೆಯನ್ನು ಕುಂಟು ನೆಪ ಹೇಳಿ ಕೈಬಿಟ್ಟಿರುವುದು ಸರಿಯಲ್ಲ. ರಾಷ್ಟ್ರದ ಹೆಮ್ಮೆಯ ಪ್ರತೀಕವಾಗಿರುವ ಹಂಪಿ ಉತ್ಸವವು ರಾಜ್ಯದ ಜನತೆ ಅದರಲ್ಲೂ ಉತ್ತರ ಕರ್ನಾಟಕದ ಜನತೆಯೊಂದಿಗೆ ಭಾವನಾತ್ಮಕ ಬೆಸುಗೆ ಬೆಸೆಯುವಂಥದ್ದು. ಹಾಗಿದ್ದರೂ ಉತ್ಸವ ಆಚರಣೆ ಕೈಬಿಡುವ ಮೂಲಕ ಸರ್ಕಾರ ಹಾಗೂ ಕೆಲ ಸಚಿವರು ಬಳ್ಳಾರಿ ಜನತೆ, ಉತ್ತರ ಕರ್ನಾಟಕದ ಜನತೆಯನ್ನು ಕಡೆಗಣಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.
ನ.3ರಂದು ನಡೆದ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ಹಣ ಖರ್ಚು ಮಾಡಿದವರಿಗೆ ಹಾಗೂ ಕೃತಜ್ಞತಾ ಸಮಾವೇಶ ನಡೆಸಿದವರಿಗೆ ಬರಗಾಲ ಕಾಣಲಿಲ್ಲವೇ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು