ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆ: ನಾಗೇಶ್

8000 ಶಾಲಾ ಕೊಠಡಿಗಳಿಗೆ "ವಿವೇಕ' ಎಂದು ನಾಮಕರಣ

Team Udayavani, Nov 14, 2022, 6:35 AM IST

B-C-NAgesh

ಗದಗ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 8000 ಶಾಲಾ ಕೊಠಡಿಗಳಿಗೆ “ವಿವೇಕ’ ಎಂದು ಹೆಸರಿಡಲಾಗುತ್ತಿದೆ. ಅಂತಹ ಶಾಲೆಗಳ ಗೋಡೆಗಳಿಗೆ ಕೇಸರಿ ಬಣ್ಣ ಹಚ್ಚುವ ಆರ್ಕಿಟೆಕ್ಚರ್‌ ಏನಾದರೂ ಕೇಸರಿ ಬಣ್ಣ ಚೆನ್ನಾಗಿದೆ ಅಂತಾ ಹೇಳಿದರೆ ಕೇಸರಿ ಬಣ್ಣ ಹಚ್ಚಿಯೇ ತೀರುತ್ತೇನೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಬಣ್ಣ ಹೌದೋ ಅಲ್ವೋ? ಕೇಸರಿ ಬಣ್ಣ ಚೆನ್ನಾಗಿದೆ ಅಂತಾ ಆರ್ಕಿಟೆಕ್ಟ್ ಹೇಳಿದರೆ ಕೇಸರಿ ಹಾಕುತ್ತೇನೆ. ವಿವೇಕ ಶಾಲೆಯ ಬಣ್ಣ, ಕಿಟಕಿ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಲ್ಲ. ಆರ್ಕಿಟೆಕ್ಚರ್‌ ಮೇಲೆ ಬಿಟ್ಟಿದ್ದೇವೆ. ಅವರು ಕೊಡುವ ಡಿಸೈನ್‌ ಮೇಲೆ ನಾವು ಡಿಸೈಡ್‌ ಮಾಡ್ತೀವಿ. ಒಂದಿಷ್ಟು ಜನಕ್ಕೆ ಬಣ್ಣದ ಅಲರ್ಜಿ ಇದೆ. ಅವರ ಧ್ವಜದಲ್ಲೂ ಕೇಸರಿ ಇದೆ. ಅದನ್ನು ಏಕೆ ಬಿಟ್ಕೊಂಡಿದಾರೆ. ಅದನ್ನು ಪೂರ್ತಿ ಹಸಿರು ಮಾಡ್ಕೊಂಡ್‌ ಬಿಡಿ ಎಂದರು.

ಟಿಪ್ಪು ಬಯಸಿದ ರಾಷ್ಟ್ರಕ್ಕೆ ಹೋರಾಟ
ತನ್ವೀರ್ ಸೇಠ್ ಅವರ ವೈಯಕ್ತಿಕ ವಿಚಾರ ಪಕ್ಷಕ್ಕೆ ಸಂಬಂಧ ಇಲ್ಲ ಅಂತಾ ಕಾಂಗ್ರೆಸ್‌ ಹೇಳಿದೆ. ಅವರ ಲೆಕ್ಕ ನೋಡಿದರೆ ಯಾವ ಮೂರ್ತಿಗಳನ್ನೂ ಮಾಡಲೇಬಾರದು. ಇದ್ದ ಮೂರ್ತಿಗಳನ್ನು ತೆಗೆಯಬೇಕಾ? ಈ ರೀತಿ ಹೇಳುವುದಕ್ಕೆ ಅವರಿಗೆ ನೈತಿಕತೆ ಇಲ್ಲ. ಮೈಸೂರಲ್ಲಿ ಟಿಪ್ಪು ಮೂರ್ತಿ ನಿರ್ಮಾಣ ಮಾಡುವುದನ್ನು ಜನ ನಿರ್ಧಾರ ಮಾಡುತ್ತಾರೆ. ಜನಕ್ಕೆ ವಿರೋಧ ಮಾಡುವ ಹಕ್ಕಿದೆ. ಸತ್ಯ ಹೇಳುವುದಕ್ಕೆ ಕೆಲವರು ಸಹಿಸುವುದಿಲ್ಲ. ಸುಳ್ಳು ಹೇಳುವುದರಲ್ಲೇ ಕೆಲವರು ತಜ್ಞರಾಗಿದ್ದಾರೆ. ಸುಳ್ಳು ಹೇಳಿಕೊಂಡೇ ಕೆಲ ರಾಜಕೀಯ ಪಕ್ಷಗಳು ಬದುಕಿವೆ. ನಿಜ ಹೊರ ಬರೋದ್ರಿಂದ ಕೆಲವರ ಭವಿಷ್ಯಕ್ಕೆ ಕುತ್ತಾಗುತ್ತದೆ ಎಂದರು.

ದೇಶ ಕಂಡಂತಹ ಅತ್ಯಂತ ಶ್ರೇಷ್ಠ ಅಂತಾ ಟಿಪ್ಪು ಬಗ್ಗೆ ಓದಿದ್ದೆವು. ಈಗ ಸತ್ಯ ಗೊತ್ತಾಗುತ್ತಿದೆ. ಶ್ರೀರಂಗಪಟ್ಟಣದ ಆಂಜನೇಯ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದು ಗೊತ್ತಾಯ್ತು. ಪಹಣಿಯಲ್ಲಿ ಇರೋದು ಪರ್ಷಿಯನ್‌ ಪದ ಅಂತಾ ಗೊತ್ತಾಯಿತು. ಪಹಣಿ ಅಂದರೆ ಕನ್ನಡದ ಪದ ಅಂತ ಅಂದುಕೊಂಡಿದ್ದೆವು. ಶಿರಸ್ತೇದಾರ್‌ ಅಂದರೆ ಕನ್ನಡ ಅಂದುಕೊಂಡು ಬಿಟ್ಟಿದ್ವಿ. ಕನ್ನಡವನ್ನು ಕೊಂದಿದ್ದು ಟಿಪ್ಪು ಅಂತಾ ಈಗ ಗೊತ್ತಾಗ್ತಿದೆ ಎಂದರು.

ಕೊಡಗು, ಕೇರಳದಲ್ಲಿ ಬಲವಂತವಾಗಿ ಮತಾಂತರ ಮಾಡಿ, ಮತಾಂತರವಾಗದಿರುವವರನ್ನು ಕೊಲೆ ಮಾಡಿದ್ದಾನೆ. ಟಿಪ್ಪು ಸುಲ್ತಾನ್‌ ಬರೆದ ಪತ್ರದ ಮೂಲಕವೇ ಗೊತ್ತಾಗುತ್ತಿದೆ. ದುರಾದೃಷ್ಟ ಅಂದರೆ ಈ ದೇಶದಲ್ಲಿ ಟಿಪ್ಪುನನ್ನು ಕೆಂಪೇಗೌಡರಿಗೆ ಹೋಲಿಸಲಾಗುತ್ತಿದೆ. ಕೆಂಪೇಗೌಡರು ಎಲ್ಲರೂ ಚೆನ್ನಾಗಿರಬೇಕು ಎಂದು ಕೆಲಸ ಮಾಡಿದವರು. ದೇಶ ಇನ್ನೂ 100 ವರ್ಷದ ನಂತರ ಹೇಗಿರಬೇಕು ಎಂದು ಕನಸು ಕಂಡವರು ಕೆಂಪೇಗೌಡರು. ಟಿಪ್ಪು ಸುಲ್ತಾನ್‌ ಏನು ಮಾಡಿದ್ದಾನೆ ಎಂದು ಗೊತ್ತಿದ್ದರೂ ದೇಶದಲ್ಲಿ ಟಿಪ್ಪು ಬಯಸಿದ ರಾಷ್ಟ್ರ ಆಗಬೇಕು ಅಂತಾ ಹೊರಟಿದ್ದಾರೆ ಎಂದರು.

ಟಾಪ್ ನ್ಯೂಸ್

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

ರಾಹುಲ್ ವಿಚಾರದಲ್ಲಿ ಕಾಂಗ್ರೆಸ್ ಸತ್ಯಾಗ್ರಹ ನಡೆಸುವುದು ವಿಪರ್ಯಾಸವೇ ಸರಿ: ಯುಪಿ ಸಿಎಂ ಯೋಗಿ

G PARAMESHWAR

ಒಳಮೀಸಲಾತಿ ಹೆಚ್ಚಳ ರಾಜ್ಯ ಸರ್ಕಾರದ ಚುನಾವಣಾ ಗಿಮಿಕ್-ಡಾ.ಜಿ.ಪರಮೇಶ್ವರ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ

1-sad-sadsad

ಕೆಕೆಆರ್ ಟಿಸಿ ಗೆ 802 ಬಸ್ ಸೇರ್ಪಡೆ: 28ರಂದು ಸೇಡಂದಲ್ಲಿ ಲೋಕಾರ್ಪಣೆ

basavaraj bommai ramesh jarkiholi

ಕುತೂಹಲ ಮೂಡಿಸಿದ ಭೇಟಿ: ಸಿಎಂ ಬೊಮ್ಮಾಯಿ ಜತೆ ಒಂದು ಗಂಟೆ ಚರ್ಚಿಸಿದ ಸಾಹುಕಾರ್

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಬೆಂಗಳೂರಿನಲ್ಲಿ ಅತ್ಯಧಿಕ ತಾಪಮಾನ ದಾಖಲು

ಬಿಸಿಲ ಬೇಗೆಗೆ ರಾಜ್ಯದ ಜನ ತತ್ತರ! ಏನೆಲ್ಲಾ ಮುನ್ನೆಚ್ಚರಿಕೆ ವಹಿಸಬೇಕು? ಇಲ್ಲಿದೆ ಮಾಹಿತಿ…

ಕೋವಿಡ್‌ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ

ಕೋವಿಡ್‌ ಮಹಾಮಾರಿ ಮತ್ತೆ ಸದ್ದು; ರಾಜ್ಯದಲ್ಲಿ 155 ಹೊಸ ಪ್ರಕರಣ ಪತ್ತೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್

ಸಲ್ಮಾನ್ ಖಾನ್ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

ಬಾಲಿವುಡ್ ನಟ ಸಲ್ಮಾನ್ ಖಾನ್​ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ

Forest Department Case Against UP Man Who Rescued, Cared For Sarus Crane

ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.