ಇಬ್ರಾಹಿಂ ಅವಿರೋಧ ಆಯ್ಕೆ: ಆ.24ರಂದು ಘೋಷಣೆ
Team Udayavani, Aug 22, 2017, 8:50 AM IST
ಬೆಂಗಳೂರು: ಬಿಜೆಪಿಯ ವಿಮಲಾಗೌಡ ನಿಧನದಿಂದ ತೆರವಾಗಿದ್ದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಕೇಂದ್ರದ ರಾಜ್ಯ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ನಾಮಪತ್ರ
ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರ ಬೆಳಿಗ್ಗೆ ಇಬ್ರಾಹಿಂ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಚುನಾವಣಾಧಿಕಾರಿಯಾಗಿದ್ದ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು.
ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು
ನಿರ್ಧರಿಸಿದವು. ಆ.24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುವುದರಿಂದ ಅಂದು ಸಂಜೆಯೇ ಇಬ್ರಾಹಿಂ ಆಯ್ಕೆಯ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ.ಆಗಸ್ಟ್ 31ಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ, ಒಬ್ಬರೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧ ಆಯ್ಕೆಯಾಗಲಿದೆ. ಇಬ್ರಾಹಿಂ ಆಯ್ಕೆಯಾದರೆ 2018ರ ಜೂನ್
ವರೆಗೆ ಅವಧಿ ಇರುತ್ತದೆ.ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸಿ.ಎಂ.ಇಬ್ರಾಹಿಂ, ಹೈಕಮಾಂಡ್, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಮ್ಮನ್ನು ಗುರುತಿಸಿ ಜವಾಬ್ದಾರಿ ನೀಡುತ್ತಿದ್ದಾರೆ. ನನಗೆ ಪರಿಷತ್ ಸ್ಥಾನ ಕೊಟ್ಟಿರುವುದೇ ಹೆಚ್ಚು ಎಂದು ಸಿಎಂ ಹೇಳಿರುವುದರಲ್ಲಿ ಸತ್ಯ ಇದೆ. ನಾನು ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ನವರು ನನಗೆ ಈಗ ಮದುವೆ ಮಾಡಿದ್ದಾರೆ. ಮುಂದಿನದನ್ನು ನಾನು ಮಾಡಿಕೊಳ್ಳುತ್ತೇನೆ ಎಂದು ಮಾರ್ಮಿಕವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ