ಸಿದ್ದು ಕ್ಷಮೆ ಕೇಳದಿದ್ದರೆ ಹಕ್ಕುಚ್ಯುತಿ ಮಂಡನೆ
Team Udayavani, Oct 26, 2019, 3:03 AM IST
ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಬಗ್ಗೆ ಹಗುರವಾಗಿ ಮಾತನಾಡಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇದೀಗ ಸ್ಪೀಕರ್ ಬಗ್ಗೆ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಿಧಾನಸಭೆಯಲ್ಲಿ ಹಕ್ಕುಚ್ಯುತಿ ನಿಲುವಳಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ನಗರದ ಡಾಲರ್ ಕಾಲೋನಿ ನಿವಾಸದ ಬಳಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷರ ಬಗ್ಗೆ ಏಕವಚನದಲ್ಲಿ ಮಾತನಾಡಿ ಅಪಮಾನ ಮಾಡಿದ್ದಾರೆ. ಈ ಹಿಂದೆ ಯಾವುದೇ ಪ್ರತಿಪಕ್ಷ ನಾಯಕರಾಗಲಿ, ಶಾಸಕರಾಗಲಿ ವಿಧಾನಸಭಾಧ್ಯಕ್ಷರ ಬಗ್ಗೆ ಈ ರೀತಿ ಮಾತನಾಡಿರುವ ಉದಾಹರಣೆ ಇಲ್ಲ. ಅವರು ಅಧಿಕಾರದ ಮದದಿಂದ ಈ ರೀತಿ ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ನೆಲಸಮವಾದರೂ ಅವರು ಪಾಠ ಕಲಿತಿಲ್ಲ. ಚುನಾವಣೆಯಲ್ಲಿ ಜನ ಸೋಲಿಸಿದರೂ ಅವರಿಗೆ ಬುದ್ಧಿ ಬಂದಿಲ್ಲ. ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಅವರನ್ನು ಸೋಲಿಸಿ ಜನ ಪಾಠ ಕಲಿಸಲಿದ್ದಾರೆ ಎಂದರು. ಕಳಸಾ ಬಂಡೂರಿ ಯೋಜನೆ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ನಾವು ಮನವೊಲಿಸಿದ್ದೇವೆ. ಆದರೆ ಗೋವಾ ತಗಾದೆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್