ಕ್ಯಾಸಿನೋ ಜಾರಿಗೆ ತಂದರೆ ಜೂಜಾಟಕ್ಕೆ ಬೆಂಬಲ ನೀಡಿದಂತೆ
Team Udayavani, Feb 24, 2020, 3:05 AM IST
ಬೀದರ: ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಿನಲ್ಲಿ ಕ್ಯಾಸಿನೋ ಆಟ ಜಾರಿಗೆ ತರುತ್ತೇವೆ ಎಂದರೆ ಸರ್ಕಾರ ಜೂಜಾಟಕ್ಕೆ ಬೆಂಬಲ ನೀಡಿದಂತಾಗುತ್ತದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಸವಕಲ್ಯಾಣದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಕ್ಯಾಸಿನೋ ಅದೊಂದು ಜೂಜಾಟ. ಶ್ರೀಲಂಕಾ, ಮಲೇಶಿಯಾ ಸೇರಿ ಹಲವು ರಾಷ್ಟ್ರಗಳಲ್ಲಿ ಈ ಆಟ ನಡೆಸಲಾಗುತ್ತದೆ. ಸಚಿವ ಸಿ.ಟಿ.ರವಿ ಆಗಾಗ ಕ್ಯಾಸಿನೋ ಆಡುತ್ತಿರಬೇಕು.
ಅದಕ್ಕೆ ಹೀಗೆಲ್ಲಾ ಹೇಳ್ಳೋದಕ್ಕೆ ಕಾರಣ ಇರಬಹುದು ಎಂದರು. ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶದಿಂದ ಅನ್ನಭಾಗ್ಯದ ಮೂಲಕ 7 ಕೆಜಿ ಉಚಿತ ಅಕ್ಕಿ ವಿತರಿಸುವ ಯೋಜನೆ ಜಾರಿಗೆ ತರಲಾಗಿದೆ. ಅಕ್ಕಿಯಲ್ಲಿ ಕಡಿತ ಮಾಡಿದರೆ ಅಥವಾ ಸ್ಥಗಿತಗೊಳಿಸಿದರೆ ಬಿಜೆಪಿ ಬಡವರ ವಿರೋ ಧಿ ಎನಿಸಿಕೊಳ್ಳಲಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ. ಬಿಜೆಪಿ ಎಂದಿಗೂ ಶ್ರೀಮಂತರು, ಕೈಗಾರಿಕೋದ್ಯಮಿಗಳ ಪರವಾಗಿದೆ.
ಕೆಳ ವರ್ಗದವರ ಕಲ್ಯಾಣದ ಬಗ್ಗೆ ಚಿಂತನೆ ಮಾಡುವುದಿಲ್ಲ ಎಂದರು. ದೇಶದಲ್ಲಿ ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಕಲ್ಪಿಸುವುದು ಸಂವಿಧಾನದ ಆಶಯ. ಅದನ್ನು ಬಿಟ್ಟು ಬೇರೆಯದನ್ನು ಮಾಡಿದರೆ ಸಂವಿಧಾನ ವಿರೋಧಿ ಆಗುತ್ತದೆ. ಪೌರತ್ವ ತಿದ್ದುಪಡಿ ಕಾಯ್ದೆ ಸಂವಿಧಾನ ಬಾಹಿರವಾಗಿದೆ. ಈ ಕಾಯ್ದೆ ಕೇವಲ ಮುಸ್ಲಿಂ ಮಾತ್ರವಲ್ಲ ದಲಿತರು, ಆದಿವಾಸಿಗಳು ಮತ್ತು ಹಿಂದೂಗಳಿಗೂ ವಿರೋ ಧಿ ಆಗಿದೆ. ಜಾತಿ-ಧರ್ಮಗಳನ್ನು ವಿಂಗಡಿಸಿ ಅದರ ಮೇಲೆ ಪೌರತ್ವ ಕೊಡಬೇಕೆಂದು ಸಂವಿಧಾನ ಹೇಳಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ