15 ದಿನದಲ್ಲಿ ಮಹದಾಯಿ ವಿವಾದ ಇತ್ಯರ್ಥ ಆಗದಿದ್ದರೆ ಚುನಾವಣೆ ಬಹಿಷ್ಕಾರ!
Team Udayavani, Oct 7, 2017, 8:56 AM IST
ಹುಬ್ಬಳ್ಳಿ: ಕಳೆದ ಮೂರು ದಶಕಗಳಿಂದ ಮಹದಾಯಿ ವಿವಾದವನ್ನು ಜೀವಂತವಾಗಿಟ್ಟಿರುವ ರಾಜಕಾರಣಿಗಳಿಗೆ ಹೋರಾಟಗಾರರು ಮತ್ತೆ ಬಿಸಿ ಮುಟ್ಟಿಸಿದ್ದಾರೆ. ಸಮಸ್ಯೆ ಇತ್ಯರ್ಥ ಕುರಿತು ಇನ್ನು 15 ದಿನದೊಳಗೆ ಸ್ಪಷ್ಟ ನಿರ್ಧಾರ
ತಿಳಿಸಬೇಕು. ಇಲ್ಲವಾದರೆ ಮುಂಬರುವ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸಲಾಗುವುದು ಹಾಗೂ ರಾಜಕೀಯ ಸಮಾವೇಶಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕಳಸಾ-ಬಂಡೂರಿ ಹೋರಾಟ ಸಮಿತಿ ಎಚ್ಚರಿಸಿದೆ.
ಮಹದಾಯಿ ಹೋರಾಟಗಾರರ ಹಾಗೂ ರೈತರ ನಿಯೋಗ ಶುಕ್ರವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರ ನಿವಾಸಕ್ಕೆ ಆಗಮಿಸಿ ಚರ್ಚಿಸಿತು. ಇನ್ನು ಕೆಲವೇ ತಿಂಗಳಲ್ಲಿ ಚುನಾವಣೆ ಘೋಷಣೆ ಆಗಲಿದ್ದು, ವಿವಾದ
ಇತ್ಯರ್ಥಕ್ಕೆ ತಾರ್ತಿಕ ಅಂತ್ಯ ಕಾಣಿಸಲು ಆಗದಿದ್ದರೆ ಮುಂದಿನ ಹೋರಾಟ ನಿರ್ಧರಿಸುತ್ತೇವೆ. ಮಹದಾಯಿ ಹೋರಾಟ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ, ರಾಜಕೀಯ ಸಮಾವೇಶಗಳಿಗೆ ಅವಕಾಶ ನೀಡಲಾಗುವುದಿಲ್ಲ. ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರವನ್ನು ಈಗಾಗಲೇ ತೆಗೆದುಕೊಳ್ಳಲಾಗಿದೆ ಎಂದು ವೀರೇಶ ಸೊಬರದಮಠ, ಶಂಕರಪ್ಪ ಅಂಬಲಿ ತಿಳಿಸಿದರು.
ಮಹದಾಯಿ ವಿಚಾರವಾಗಿ ಸದ್ಯಕ್ಕೆ ಸಾರ್ವಜನಿಕವಾಗಿ ಏನನ್ನೂ ಹೇಳಲಾಗದು. ಬಿಜೆಪಿಯಿಂದ ಏನೆಲ್ಲ
ಸಾಧ್ಯವೋ ಆ ಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ಈ ವಿಚಾರದಲ್ಲಿ ಈಗಾಗಲೇ ಗೋವಾ ಮುಖ್ಯಮಂತ್ರಿಗಳ ಜೊತೆ ಮಾತುಕತೆಗೆ ಮುಂದಾಗಿದ್ದೇವೆ. ಈ ನಿಟ್ಟಿನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ.
ಜಗದೀಶ ಶೆಟ್ಟರ್, ವಿಧಾನ ಸಭಾ ಪ್ರತಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…